ಬೀದರ್‌ | ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ರೈತರ ಆಗ್ರಹ

Date:

ಕಳೆದ ಒಂದು ತಿಂಗಳಿಂದ ನಿರಂತರ ಮಳೆಯಿಂದ ರೈತರು ಬೆಳೆದಿದ್ದ ಬೆಳೆ ಸಂಪೂರ್ಣ ಹಾನಿಗೀಡಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಬಸವಕಲ್ಯಾಣ ಹಾಗೂ ಹುಲಸೂರ ಅತಿವೃಷ್ಟಿ ಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ಈ ಕುರಿತು ರೈತ ಮುಖಂಡ ಪ್ರಶಾಂತ ಲಕಮಾಜಿ ನೇತ್ರತ್ವದಲ್ಲಿ ಮಂಗಳವಾರ ಸುಮಾರು 10ಕ್ಕೂ ಹೆಚ್ಚು ರೈತರು ಬಸವಕಲ್ಯಾಣ ತಹಸೀಲ್ದಾರ್‌ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕೋಹಿನೂರ ನಾಡಕಚೇರಿಯ ಉಪತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ʼಬಸವಕಲ್ಯಾಣ, ಹುಲಸೂರ ತಾಲ್ಲೂಕುಗಳಲ್ಲಿ ರೈತರು ಬೆಳೆದಿದ್ದ ಉದ್ದು, ಹೆಸರು, ತೊಗರಿ, ಸೋಯಾಅವರೆ ಹಾಗೂ ಇತರೆ ಬೆಳೆಗಳು ಅಪಾರ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಜಲಾವೃತಗೊಂಡು ಸಂಪೂರ್ಣ ಹಾನಿಯಾಗಿದೆ. ಲಕ್ಷಾಂತರ ರೂಪಾರಿ ವೆಚ್ಚ ಮಾಡಿದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ಎರಡು ತಾಲ್ಲೂಕುಗಳಿಗೆ ಅತಿವೃಷ್ಟಿ ಘೋಷಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರೈತರ ಸಾಲಮನ್ನಾ ಮಾಡಬೇಕು. ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು. ರೈತರ ಜಮೀನಿಗೆ ಸಿಂಗಲ್‌ ಫೇಸ್‌ ವಿದ್ಯುತ್‌ ಕೊಡಬೇಕು. 2024-25ನೇ ಹಾಗೂ ಪ್ರಸಕ್ತ ಸಾಲಿನ ರೈತರ ವಿಮೆ ಪರಿಶೀಲಿಸಿ ಶೀಘ್ರದಲ್ಲಿ ಹಣ ಪಾವತಿಸಬೇಕುʼ ಎಂದು ರೈತರು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಕಾಂತ ಚನ್ನಪ್ಪಾ, ವೀರಣ್ಣಾ ಮೂಲಗೆ, ಶರಣು ರಾಯಜೀ, ಸುನೀಲ ಪರಂಡೆ, ಅಶೋಕ ಮೆಣಕೋಜಿ, ಮಾರುತಿ ಜಮಾದರ, ರಮೇಶ ಪೂಜಾರಿ, ಶಿವಕುಮಾರ ಮುನಾಳೆ, ಚಂದ್ರಕಾಂತ ಸಂತಾಜಿ ಸೇರಿದಂತೆ ಮತ್ತಿತರರಿದ್ದರು.

ದಾಬಕಾ(ಸಿ) ಹೋಬಳಿ ಅತಿವೃಷ್ಟಿ ಪ್ರದೇಶ ಘೋಷಿಸಿ :

ಕಮಲನಗರ ತಾಲ್ಲೂಕಿನ ದಾಬಕಾ(ಸಿ) ಹೊಬಳಿ ವ್ಯಾಪ್ತಿಯ ದಾಬಕಾ(ಸಿ) ಮತ್ತು ಚಿಕಲಿ(ಯು) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳನ್ನು ಅತಿವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಈ ಕುರಿತು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಕಮಲನಗರ ತಾಲ್ಲೂಕು ಗ್ರೇಡ್-2 ತಹಶೀಲ್ದಾರ್‌ ರಮೇಶ ಪೆದ್ದೆ ಅವರಿಗೆ ಸಲ್ಲಿಸಿದರು.

WhatsApp Image 2025 09 24 at 8.32.28 AM
ಕಮಲನಗರ ತಾಲ್ಲೂಕು ಗ್ರೇಡ್-2 ತಹಶೀಲ್ದಾರ್‌ ರಮೇಶ ಪೆದ್ದೆ ಅವರಿಗೆ ರೈತರು ಮನವಿ ಪತ್ರ ಸಲ್ಲಿಸಿದರು.

ಆಗಸ್ಟ್‌, ಸೆಪ್ಟೆಂಬರ್‌ ತಿಂಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ದಾಬಕಾ(ಸಿ) ಹೊಬಳಿಯಲ್ಲಿ ಅತಿವಷ್ಟಿ ಸೃಷ್ಟಿಯಾಗಿದೆ. ಇದರಿಂದ ದಾಬಕಾ(ಸಿ) ಮತ್ತು ಚಿಕಲಿ(ಯು) ಗ್ರಾ.ಪಂ.ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ರೈತರು ಬೆಳೆದಿದ್ದ ಉದ್ದು, ಹೆಸರು ಮತ್ತು ತೊಗರಿ, ಸೋಯಾ ಬೆಳೆಗಳು ಸಂಪೂರ್ಣ ಹಾನಿಗೀಡಾಗಿದೆ. ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.

ʼರೈತರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ದಾಬಕಾ(ಸಿ) ಹೊಬಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳನ್ನು ಅತಿವೃಷ್ಟಿ ಪೀಡಿತ ಪ್ರದೇಶಗಳೆಂದು ಘೋಷಿಸಿ ವಿಶೇಷ ಪರಿಹಾರ ನೀಡಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಗ್ರಾಮದ ಸಮಸ್ಯೆ ಹೇಳಿದ್ರೆ ಬೆದರಿಕೆ ಹಾಕಿದ ಸಿಂಧನಕೇರಾ ಪಿಡಿಒ; ಕ್ರಮಕ್ಕೆ ಆಗ್ರಹ

ರೈತ ಮುಖಂಡರಾದ ಅಂಕುಶ ವಾಡೀಕರ, ಸಂತೋಷ ಜಾಧವ, ಪ್ರದೀಪ ರಕ್ಷ್ಯಾಳೆ, ಪ್ರಭಾಕರ ಗಣಪತರಾವ, ಸುಗ್ರೀವ ಪ್ರಲ್ಹಾದರಾವ, ಮಾರುತಿ ಮಚಕುರೆ, ರಾಜು ಶೇಳಕೆ, ಸಂಜೀವ ಮುರ್ಕೆ, ರಾಜಕುಮಾರ ಬಿರಾದಾರ, ಕಿಶನ ಪಾಟೀಲ, ಧನರಾಜ ವಾಡೀಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...