ಬೀದರ್‌ | ಗುಣಮಟ್ಟದ ಶಿಕ್ಷಣ ಕಲ್ಪಿಸಿದರೆ ಮಾತ್ರ ಸರಕಾರಿ ಶಾಲೆ ಉಳಿಯುತ್ತವೆ : ಸಂಸದ ಸಾಗರ ಖಂಡ್ರೆ

Date:

ಸರಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು ಕಾಳಜಿ ವಹಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಪ್ರಯತ್ನಿಸಿದರೆ ಮಾತ್ರ ಸರಕಾರಿ ಶಾಲೆಗಳು ಉಳಿಯುತ್ತವೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಭಾಲ್ಕಿ ಪಟ್ಟಣದ ಬಸವ ನಗರ ಬಡಾವಣೆಯ ಶಶಿಕಾಂತ ಎಸ್.ಎಲ್.ಪಾಟೀಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 27.55 ಲಕ್ಷ ಅನುದಾನದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ʼಮಕ್ಕಳ ಕಲಿಕೆಗೆ ಬೇಕಿರುವ ಉತ್ತಮ ಶಾಲಾ ಕಟ್ಟಡಗಳು, ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಎಲ್ಲ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ. ಆದರೆ, ಖಾಸಗಿ ಶಾಲೆಗಳಿಗೆ ಹೊಲಿಸಿದರೇ ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟ ಕುಸಿಯುತ್ತಿದೆʼ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಕಲಿಕೆಗೆ ಪೂರಕವಾಗಿ ಹೊಸದಾಗಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿಕೊಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ಸೌಜನ್ಯ ಹತ್ಯೆ & ನಿಗೂಢ ಸಾವುಗಳ ನ್ಯಾಯಕ್ಕಾಗಿ ಒತ್ತಾಯಿಸಿ ಆನ್‌ಲೈನ್‌ ಸಹಿ ಸಂಗ್ರಹ ಅಭಿಯಾನ

ಲೋಕೋಪಯೋಗಿ ಇಲಾಖೆಯ ಎಇಇ ಅಲ್ತಾಫ್, ಪ್ರಭಾರಿ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ, ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ, ಕಚೇರಿ ವ್ಯವಸ್ಥಾಪಕ ಶಿವಕುಮಾರ ಫುಲಾರಿ, ಪ್ರಥಮ ದರ್ಜೆ ಗುತ್ತಿಗೆದಾರ ರಾಜಕುಮಾರ ಬಿರಾದಾರ್, ಮುಖ್ಯಗುರು ರಾಜಶೇಖರ, ಶಿಕ್ಷಣ ಹಣಮಶೆಟ್ಟಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...