ಬೀದರ್‌ | ಕಾರಂಜಾ ಪರಿಹಾರ ಸಮಿತಿ ರಚಿಸಿದ ಸರ್ಕಾರದ ನಿರ್ಧಾರ ಸ್ವಾಗತ : ಲಕ್ಷ್ಮಣ ದಸ್ತಿ

Date:

ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾಗಿ ವೈಜ್ಞಾನಿಕ ಮಾನದಂಡದಂತೆ, ಮಾನವಿಯತೆಯ ಆಧಾರದ ಮೇಲೆ ಸಮರ್ಪಕ ಪರಿಹಾರ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼಈ ಸಮಿತಿ ಸ್ಥಳೀಯ ಅಧಿಕಾರಿಗಳು ಸೇರಿದಂತೆ, ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯಲ್ಲಿ ಕಾರಂಜಾ ಸಂತ್ರಸ್ತರ ಪರವಾಗಿ ಕನಿಷ್ಠ ಇಬ್ಬರು ಪರಿಣಿತ ಪ್ರತಿನಿಧಿಗಳನ್ನಾದರೂ ಸೇರಿಸಿಕೊಳ್ಳುವುದು ಅತಿ ಅವಶ್ಯವಾಗಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತರ ಬೇಡಿಕೆಗೆ ಪೂರಕವಾಗಿ ಸಮಿತಿಯ ಮನವಿಗೆ ಸ್ಪಂದಿಸಬೇಕುʼ ಎಂದರು.

ʼಕಾರಂಜಾ ಸಂತ್ರಸ್ತರಿಗೆ ನ್ಯಾಯಯುತವಾಗಿ ವೈಜ್ಞಾನಿಕ ಮಾನದಂಡದಂತೆ, ಮಾನವಿಯತೆಯ ಆಧಾರದ ಮೇಲೆ ಸಮರ್ಪಕ ಪರಿಹಾರ ಹಣ ನೀಡಬೇಕೆಂದು ಒತ್ತಾಯಿಸಿ ನಿರಂತರವಾಗಿ 920 ದಿನಗಳ ಕಾಲ ನಡೆಸಿರುವ ಹೋರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಶಾಸಕರುಗಳ ಸಂಘಟಿತ ಮುತುವರ್ಜಿಯಿಂದ ರಾಜ್ಯ ಸರಕಾರದ ರಾಜಕೀಯ ಇಚ್ಛಾಶಕ್ತಿಯಿಂದ ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಸಿಎಂ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಿರುವಂತೆ ಕಾರಂಜಾ ಸಂತ್ರಸ್ತರ ಬೇಡಿಕೆಗಳನ್ನು ಪರಿಶೀಲಿಸಿ, ಈಡೇರಿಸಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣಾ ಭಾಜಪೇಯಿಯವರ ಅಧ್ಯಕ್ಷತೆಯಲ್ಲಿ ಆರು ಜನರ ಸಮಿತಿ ಸಮಿತಿ ರಚಿಸಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆರು ಅಧಿಕಾರಿಗಳ ಸಮಿತಿಯಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರು ಅಧ್ಯಕ್ಷರಾಗಿದ್ದು, ಸಮಿತಿಯ ಸದಸ್ಯರಾಗಿ ಬಾಗಲಕೋಟಯ ನವನಗರದ ಭೂಸ್ವಾಧೀನ ಪುನರ್ವಸತಿ ಪುನರ್ ನಿರ್ಮಾಣ ವಿಭಾಗದ ಆಯುಕ್ತರು, ಕಲಬುರಗಿ ನೀರಾವರಿ ಯೋಜನಾ ವಲಯದ ಮುಖ್ಯ ಎಂಜಿನಿಯರ್, ಬೀದರ್‌ ಜಿಲ್ಲಾಧಿಕಾರಿ, ಕಾರಂಜಾ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಆಡಳಿತಾಧಿಕಾರಿ ಸದಸ್ಯ ಕಾರ್ಯದರ್ಶಿಗಳಾಗಿ ಕೆಲಸ ಮಾಡಲಿದ್ದಾರೆʼ ಎಂದರು.

ʼಸಮಿತಿಗೆ ಸರ್ಕಾರ ನಿರ್ದೇಶಿಸಿರುವಂತೆ, ಕಾರಂಜಾ ಯೋಜನೆಯ ಜಲಾಶಯದ ಮುಳುಗಡೆ ಪ್ರದೇಶದ ಸ್ವಾಧೀನದ ಪ್ರಕ್ರಿಯೆಯ, ಬಾಕಿ ಇರುವ ಭೂಸ್ವಾಧೀನದ ಅಧ್ಯಯನ, ನ್ಯಾಯಾಲಯಗಳು ನೀಡಿರುವ ಆದೇಶಗಳ ಅಧ್ಯಯನ, ಭೂಸ್ವಾಧೀನ ಕಾಯ್ದೆಯಲ್ಲಿ ಇರುವ ಅವಕಾಶಗಳ ಅಧ್ಯಯನ, ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿಯ ಬೇಡಿಕೆ ಅಧ್ಯಯನ ಮಾಡಬೇಕಿದೆʼ ಎಂದರು.

ʼಈ ಹಿಂದೆ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿಯ ಬಗ್ಗೆ ಅಧ್ಯಯನ ನಡೆಸಿ ಕಾರಂಜಾ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ಮೂರು ತಿಂಗಳ ಒಳಗೆ ವರದಿ ನೀಡಲು ಸರ್ಕಾರ ಆದೇಶಿಸಿದೆ ಎಂದ ಅವರು, ರಾಜ್ಯದ ಇತಿಹಾಸದಲ್ಲೇ ಕಾವೇರಿ, ಕೃಷ್ಣಾ ಮತ್ತು ಗೋದಾವರಿ ಜಲಾನಯನ ಪ್ರದೇಶದ ನೀರಾವರಿ ಯೋಜನೆಗಳಲ್ಲಿ ಗೋದಾವರಿ ಜಲಾನಯನ ಪ್ರದೇಶದ ಕಾರಂಜಾ ನೀರಾವರಿ ಯೋಜನೆಗೆ ಜಮೀನು ನೀಡಿದ ಸಂತ್ರಸ್ತರಿಗೆ ಭರಿಸಲಾಗದಷ್ಟು ಅನ್ಯಾಯವಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಬೇಕಿದೆ. ಪ್ರಾದೇಶಿಕ ಆಯುಕ್ತರ ನೇತೃತ್ವದ ಸಮಿತಿಯ ವರದಿ ಅತಿ ಮಹತ್ವದ್ದಾಗಿದೆ. ಈ ವರದಿ ಕಾರಂಜಾ ಸಂತ್ರಸ್ತರಿಗೆ ವೈಜ್ಞಾನಿಕ ಮಾನದಂಡದ ಪರಿಹಾರ ನೀಡಲು ದಿಕ್ಸೂಚಿಯಾಗಲಿʼ ಎಂದರು.

ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯ ಸಮಿತಿಯ ಪ್ರಥಮ ಸಭೆ ಮೇ 6ರಂದು ನಡೆಯಲಿದೆ. ಈ ಸಭೆಯಲ್ಲಿ ಕಾರಂಜಾ ಸಂತ್ರಸ್ತರ ವಾಸ್ತವ ಅಂಶಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಬೀದರ್‌ ಜಿಲ್ಲೆಯ ರಚನಾತ್ಮಕ ಪ್ರಗತಿಗೆ ಮತ್ತು ರೈತರ, ಸಮಸ್ತ ಜನಾಂಗದ ಅಭ್ಯುದಯಕ್ಕಾಗಿ ಯಾವುದೇ ಷರತ್ತು ಇಲ್ಲದೆ ಕಾರಂಜಾ ಯೋಜನೆಗೆ ಜಮೀನು ನೀಡಿರುವ ಸಂತ್ರಸ್ತರಿಗೆ ನ್ಯಾಯ ಸಿಗಬೇಕಿದೆʼ ಎಂದರು.

ಕಾರಂಜಾ ಯೋಜನೆಗೆ ಭೂಮಿ, ಮನೆ, ಮಠ ನೀಡಿದ 28 ಹಳ್ಳಿಗಳ ಸಂತ್ರಸ್ತರ ಸಭೆಯನ್ನು ಎರಡು ವಾರಗಳ ನಂತರ ಬೀದರ್‌ ನಗರದಲ್ಲಿ ಸಮಿತಿಯಿಂದ ನಡೆಸಲಾಗುವುದು. ಆಗ ಪ್ರಾದೇಶಿಕ ಆಯುಕ್ತರ ನೇತೃತ್ವದ ಸಮಿತಿಯ ಅಧ್ಯಯನದ ಬಗ್ಗೆ ಚರ್ಚಿಸುವುದಲ್ಲದೆ, ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನಿಗದಿ ಮಾಡುವ ಬಗ್ಗೆ ವರದಿ ನೀಡಲಾಗುವುದು’ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ, ಉರ್ದು ಮಾಧ್ಯಮದ 500 ವಿದ್ಯಾರ್ಥಿಗಳಿಗೆ ʼಶಾಹೀನ್ ವಿದ್ಯಾರ್ಥಿ ವೇತನʼ

ಕಲ್ಯಾಣ ಕರ್ನಾಟಕ ಹೋರಾಟ ಸಮೀತಿ ಗೌರವಾಧ್ಯಕ್ಷ ಬಸವರಾಜ ದೇಶಮುಖ, ಕಾರಂಜಾ ಮುಳಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹುಚಕನಳ್ಳಿ, ಹಿರಿಯ ಚಿಂತಕ ಆರ್.ಕೆ.ಹುಡಗಿ, ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ ಚನಶೇಟ್ಟಿ, ಸಮಿತಿಯ ಪ್ರಮುಖರಾದ ವಿನಯ ಮಾಳಗೆ, ನಾಗಶೆಟ್ಟಿ ಹಂಚೆ, ಮುಖಂಡ ರಾಜಪ್ಪ ಕಮಲಪೂರೆ, ರಾಜಶೇಖರ ಕೋಸಂ, ರೋಹನಕುಮಾರ, ಮಾದಪ್ಪ ಸಂಗೊಳಗಿ, ಕೇದಾರನಾಥ ಪಾಟೀಲ್ ಹಾಗೂ ಸಂತ್ರಸ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...