ಬೀದರ್‌ | ಹಜ್‌ ಯಾತ್ರೆ ಉನ್ನತ ಮಟ್ಟದ ಅಧ್ಯಾತ್ಮ ಅನುಭವ : ಮುಹಮ್ಮದ್‌ ನಿಝಾಮುದ್ದೀನ್‌

Date:

ಹಜ್‌ ಯಾತ್ರೆಯು ಉನ್ನತ ಮಟ್ಟದ ಅಧ್ಯಾತ್ಮ ಅನುಭವವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಮುಹಮ್ಮದ್ ನಿಝಾಮುದ್ದೀನ್ ಹೇಳಿದರು.

ಜಮಾ ಅತೆ ಇಸ್ಲಾಮಿ ಹಿಂದ್‍ನ ಬೀದರ್ ಘಟಕದ ವತಿಯಿಂದ ನಗರದ ಜಮೀಯಾ ಮಸೀದಿಯಲ್ಲಿ ಭಾನುವಾರ ಏರ್ಪಡಿಸಿದ್ದ ಹಜ್ ಯಾತ್ರಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಹಜ್ ಏಕದೇವ ವಿಶ್ವಾಸಿಗರ ಅಂತರರಾಷ್ಟ್ರೀಯ ಸಮ್ಮೇಳನವಾಗಿದ್ದು, ಕಾಬಾ ದೇವ ಭವನವು ಸಕಲರಿಗೆ ಸಮೃದ್ಧಿ ಹಾಗೂ ಸನ್ಮಾರ್ಗ ದರ್ಶನದ ಕೇಂದ್ರವಾಗಿದೆʼ ಎಂದು ಬಣ್ಣಿಸಿದರು.

ʼಕಾಬಾ ಭವನದ ಪ್ರದಕ್ಷಣೆಯಿಂದ ಜೀವನ ದೇವ ಕೇಂದ್ರೀಕೃತವಾಗುತ್ತದೆ. ಕುರ್ಬಾನಿ ಒಬ್ಬ ದೇವ ಭಕ್ತ ತನ್ನನ್ನು ಸಂಪೂರ್ಣವಾಗಿ ದೇವರಿಗೆ ಅರ್ಪಿಸಿಕೊಳ್ಳುವ ಸಾಂಕೇತಿಕ ರೂಪವಾಗಿದೆ. ಇಸ್ಲಾಮ್‍ನ ಐದು ಆಧಾರ ಸ್ತಂಭಗಳಲ್ಲಿ ಹಜ್ ಕೂಡ ಒಂದು. ಸಾಮರ್ಥ್ಯ ಇರುವ ಮುಸಲ್ಮಾನು ಹಜ್ ಯಾತ್ರೆ ಕೈಗೊಳ್ಳುವುದು ಕಡ್ಡಾಯ. ಹಜ್ ಮಾಡುವುದು ಜನರ ಮೇಲೆ ಅಲ್ಲಾಹನ ಹಕ್ಕಾಗಿದೆ ಎಂದು ಕುರಾನ್‍ನಲ್ಲಿ ಹೇಳಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹಜ್ ಸಂದರ್ಭದಲ್ಲಿ ಹೊಲೆಯದ ಎರಡು ತುಂಡು ಬಟ್ಟೆ ತೊಡುವುದು, ಸರಳ ಚಪ್ಪಲಿ ಧರಿಸುವುದು, ತಾತ್ಕಾಲಿಕ ಟೆಂಟ್‍ಗಳಲ್ಲಿ ಹಗಲು-ರಾತ್ರಿ ಕಳೆಯುವುದು, ಬಯಲಲ್ಲೇ ಮಲಗುವುದು ಮುಂತಾದ ಸರಳ ಜೀವನಕ್ಕೆ ಪ್ರೇರಣೆ ನೀಡುತ್ತವೆ. ದೇವರ ಸಾಮಿಪ್ಯಕ್ಕೂ ಸಹಕಾರಿಯಾಗುತ್ತವೆ. ಅರಫಾ ಮೈದಾನದಲ್ಲಿ ಯಾತ್ರಿ ತನ್ನ ತಪ್ಪು ಹಾಗೂ ಪಾಪ ಕಾರ್ಯಗಳಿಗೆ ಪಶ್ಚಾತಾಪ ಪಟ್ಟು, ಭವಿಷ್ಯದಲ್ಲಿ ತಪ್ಪುಗಳಾಗದಂತೆ ಸಂಕಲ್ಪ ಮಾಡುತ್ತಾನೆ. ಹಜ್‍ನಲ್ಲಿ ಒಂದು ಸಣ್ಣ ಕೆಡುಕನ್ನೂ ಮಾಡಬಾರದು ಎಂದು ಹೇಳಲಾಗಿದೆ. ಹೀಗಾಗಿ ಹಜ್ ಮಾಡಿದ ವ್ಯಕ್ತಿ ಜನ್ಮತಾಳಿದ ಮುಗ್ಧ ಮಗುವಿನಂತಾಗುತ್ತಾನೆ. ಜೀವನದಲ್ಲಿ ಕೆಡುಕುಗಳಿಂದ ದೂರವಿರುತ್ತಾನೆʼ ಎಂದು ವಿಶ್ಲೇಷಿಸಿದರು.

ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಜಮಾ ಅತೆ ಇಸ್ಲಾಮಿ ಹಿಂದ್‍ನ ಸಂಘಟನಾ ಕಾರ್ಯದರ್ಶಿ ಹಾಮೇದ್ ಮುಹಮ್ಮದ್ ಖಾನ್ ಮಾತನಾಡಿ, ʼಹಜ್ ಯಾತ್ರೆ ಕೈಗೊಂಡ ವ್ಯಕ್ತಿ ಅಲ್ಲಾಹನೇ ಸಾರ್ವಭೌಮ ಎಂದು ಹೇಳುತ್ತಾನೆ. ಜೀವನದಲ್ಲಿ ಅವನ ಅಧಿಪಥ್ಯ ಮಾತ್ರ ಸ್ವೀಕರಿಸುತ್ತಾನೆ. ಅವನನ್ನೇ ಆರಾಧಿಸಿ, ಅನುಸರಿಸುತ್ತಾನೆ. ಪ್ರವಾದಿ ಮುಹಮ್ಮದರು ತಮ್ಮ ವಿದಾಯ ಭಾಷಣದ ಸಂದೇಶವನ್ನು ಇತರರಿಗೆ ತಿಳಿಸಬೇಕು ಎಂದು ಹೇಳಿದ್ದಾರೆʼ ಎಂದರು.

ಇದೇ ಸಂದರ್ಭದಲ್ಲಿ ಹಜ್ ಯಾತ್ರಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಜಮಾತೆ ಅತೆ ಇಸ್ಲಾಮಿ ಹಿಂದ್ ಬೀದರ್ ನಗರ ಘಟಕದ ಅಧ್ಯಕ್ಷ ಮುಹಮ್ಮದ್ ಮೌಅಝಂ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಬಗೆಹರಿಯದ ಜಮೀನು ದಾರಿ ಸಮಸ್ಯೆ: ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ರೈತ

ಜುಮಅ ಮಸೀದಿಯ ಅಧ್ಯಕ್ಷ ಮುಹಮ್ಮದ್ ಜಾವಿದ್, ಹಜ್ ಕಮೀಟಿ ಅಧ್ಯಕ್ಷ ಸೈಯದ್ ಸಗೀರ್ ಅಹಮ್ಮದ್, ಸೈಯದ್ ಮನ್ಸೂರ್ ಅಹಮ್ಮದ್ ಖಾದ್ರಿ, ಮುಹಮ್ಮದ್ ಆಸಿಫುದ್ದೀನ್, ಗುರುನಾಥ ಗಡ್ಡೆ, ಮುಹಮ್ಮದ್ ಸಲಾವುದ್ದೀನ್, ಡಾ.ಇರ್ಷಾದ್ ನವೀದ್ ಇದ್ದರು.
ಮುಹಮ್ಮದ್ ಸನಾವುಲ್ಲಾ ಕುರಾನ್ ಪಠಿಸಿದರು. ಮುಹಮ್ಮದ್ ಆರಿಫುದ್ದೀನ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...