ಬೀದರ್‌ | ಶಾಸಕ ಪ್ರಭು ಚವ್ಹಾಣ ಪುತ್ರನ ಅತ್ಯಾಚಾರ ಪ್ರಕರಣ ಎಸ್‌ಐಟಿಗೆ ಒಪ್ಪಿಸಿ : ರವೀಂದ್ರ ಸ್ವಾಮಿ

Date:

ಪುತ್ರನ ಅತ್ಯಾಚಾರ ಪ್ರಕಣಕ್ಕೆ ಕುಮ್ಮಕ್ಕು ನೀಡುತ್ತಿರುವ ಔರಾದ ಕ್ಷೇತ್ರದ ಹಾಲಿ ಶಾಸಕ ಪ್ರಭು ಚವ್ಹಾಣ ಅವರನ್ನು ಕೂಡಲೇ ಬಂಧಿಸಬೇಕು. ಅತ್ಯಾಚಾರ ಆರೋಪ ಹೊತ್ತಿರುವ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ ಚವ್ಹಾಣ ವಿರುದ್ಧದ ಪ್ರಕರಣವನ್ನು ಎಸ್‌ಐಟಿ ತನಿಖೆಯಾಗಬೇಕು ಎಂದು ಏಕತಾ ಫೌಂಡೇಶನ್ ಅಧ್ಯಕ್ಷ ರವೀಂದ್ರ ಸ್ವಾಮಿ ತಿಳಿಸಿದರು.

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಮಹಾರಾಷ್ಟ್ರ ಮೂಲದ ಸಂಧ್ಯಾ ರಾಠೋಡ್ ಎಂಬ ಯುವತಿಗೆ ಕಳೆದ ವರ್ಷ ವಿವಾಹವಾಗುವುದಾಗಿ ನಂಬಿಸಿ ಬೆಂಗಳೂರು, ಶಿರಡಿ ಸೇರಿದಂತೆ ಅನೇಕ ಕಡೆ ಕರೆದೊಯ್ದು ಆಕೆಯ ಶೀಲ ಹಾಳು ಮಾಡಿರುವುದು ಅಲ್ಲದೆ ಆಕೆಯೊಂದಿಗೆ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥ ಕುರಿತು ಶಾಸಕ ಪ್ರಭು ಚವ್ಹಾಣ ಅವರ ಮನೆಗೆ ಯುವತಿಯ ಪೋಷಕರು ತೆರಳಿದಾಗ ಯುವತಿಯ ತಾಯಿಗೆ ಹಲ್ಲೆ ಮಾಡಿ, ತನ್ನ ಪ್ರಭಾವ ಬಳಸಿ ಅವರ ಮೇಲೆಯೇ ಪ್ರಕರಣ ದಾಖಲಿಸಿರುವುದು ನಾಚಿಕೆಗೇಡಿನ ಸಂಗತಿʼ ಎಂದು ಹರಿಹಾಯ್ದರು.

ʼಈ ಹಿಂದೆ ಔರಾದ ತಾಲೂಕಿನ ಮತ್ತೋರ್ವ ಯುವತಿಯೊಂದಿಗೂ ಪ್ರತೀಕ ಚವ್ಹಾಣ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ನಂಬಿಸಿ ಅವರಿಂದ 26 ಎಕರೆ ಜಮೀನು ವಶಪಡಿಸಿಕೊಂಡು ಅವರ ಕುಟುಂಬವನ್ನು ಬೀದಿಗೆ ತಳ್ಳಿದ್ದಾರೆ. ಹೀಗೆ ಅನೇಕ ಯುವತಿಯರ ಬದುಕು ಹಾಳು ಮಾಡುತ್ತಿದ್ದಾರೆ. ಪುತ್ರನ ಇಂತಹ ಕೃತ್ಯದ ಖಂಡಿಸಿ ಬುದ್ಧಿ ಹೇಳಬೇಕಾದ ಶಾಸಕ ಪ್ರಭು ಚವ್ಹಾಣ ಅವರು ತಮ್ಮ ಪುತ್ರನ ಪರ ಪತ್ರಿಕಾಗೋಷ್ಠಿ ನಡೆಸಿ ಈ ಪ್ರಕರಣವನ್ನು ಬೇರೆಡೆ ತಿರುಗಿಸುವ ಪ್ರಯತ್ನಿಸಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಇತರರ ಹೆಸರು ಪ್ರಸ್ತಾಪ ಮಾಡಿದ್ದಾರೆʼ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಳೆದ ಒಂದೂವರೆ ದಶಕದಿಂದ ಔರಾದ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ನೆಲಕಚ್ಚಿದೆ. ಭೂಕಬಳಿಕೆ ಮುಗಿಲು ಮುಟ್ಟಿದೆ. ಅತ್ಯಾಚಾರ
ತಾಂಡವವಾಡುತ್ತಿದೆ. ತಮ್ಮ ರಾಜಕೀಯ ಪ್ರಭಾವ ಬಳಸಿ ಅತ್ಯಾಚಾರ ಪ್ರಕರಣಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಏಕತಾ ಫೌಂಡೇಶನ್ ಜೊತೆ ಗುರುತಿಸಿಕೊಂಡಿರುವ ಔರಾದ, ಕಮಲನಗರ ತಾಲೂಕಿನ ಹಲವು ಮುಖಂಡರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಅವರನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದ್ದಾರೆʼ ಎಂದು ಆರೋಪಿಸಿದರು.

ʼಈ ಪ್ರಕರಣದ ನೊಂದ ಯುವತಿಯರಿಗೆ ನ್ಯಾಯ ದೊರೆಯುವವರೆಗೂ ಏಕತಾ ಫೌಂಡೇಶನ್ ಅವರ ಬೆನ್ನಿಗೆ ನಿಲ್ಲಲಿದೆ. ಅತ್ಯಾಚಾರದ ಆರೋಪ ಎದುರಿಸುತ್ತಿರುವ ಪ್ರತೀಕ ಚವ್ಹಾಣ ಅವರ ಪ್ರಕರಣ ನಿಶ್ಚಿತಾರ್ಥಕ್ಕೂ ಮೊದಲು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಯುವತಿಯೊಂದಿಗೆ ನಡೆದ ಅತ್ಯಾಚಾರ ಕುರಿತಾದ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಲಿʼ ಒತ್ತಾಯಿಸಿದರು.

ಇದನ್ನೂ ಓದಿ : ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಚಿಂತಕರ ಆಗ್ರಹ

ಪತ್ರಿಕಾಗೋಷ್ಠಿಯಲ್ಲಿ ತೇಜರಾವ ಮೂಳೆ, ಅಶೋಕ ಪಾಟೀಲ ಹೊಕ್ರಾಣಾ, ಸಂದೀಪ ಪಾಟೀಲ ಹಂಗರಗಾ, ಧನಾಜಿ ಕಾಂಬಳೆ, ಪ್ರಭು ಸ್ವಾಮಿ, ಹಣ್ಮು ಪಾಜಿ, ಪ್ರಕಾಶ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...