ಬೀದರ್‌ | ಕಲ್ಯಾಣ ಕ್ರಾಂತಿಗೆ ಹರಳಯ್ಯ-ಕಲ್ಯಾಣಮ್ಮರ ತ್ಯಾಗ ಅಮೋಘ : ಸುಮಂತ ಕಟ್ಟಿಮನಿ

Date:

ಬಸವಣ್ಣನವರು ಸಮಾನತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳ ಮೇಲೆ ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಶಿವಶರಣರಾದ ಹರಳಯ್ಯ ಮತ್ತು ಕಲ್ಯಾಣಮ್ಮರ ತ್ಯಾಗವು ಕಲ್ಯಾಣ ಕ್ರಾಂತಿಯ ಪ್ರಮುಖ ಪ್ರೇರಕ ಘಟನೆಯಾಗಿದ್ದು, ಬಸವಾದಿ ಶರಣರ ವಚನಗಳು ಸಂವಿಧಾನದ ತಾತ್ವಿಕ ಆಧಾರವಾಗಿವೆ ಎಂದು ಚಿಂತಕ ಸುಮಂತ ಕಟ್ಟಿಮನಿ ಹೇಳಿದರು.

ಬೀದರ್ ನಗರದ ಅತಿವಾಳೆ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ʼಶಿವಶರಣ ಹರಳಯ್ಯ ಹಾಗೂ ಕಲ್ಯಾಣಮ್” ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.‌

ಕರ್ನಾಟಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ ಬಲ್ಲೂರ ಉಪನ್ಯಾಸ ನೀಡಿ, ʼ12ನೇ ಶತಮಾನದಲ್ಲಿ ಬಸವಾದಿ ಶರಣರ ವೈಚಾರಿಕ ಕ್ರಾಂತಿಯು ಪ್ರಜಾಪ್ರಭುತ್ವದ ಬೀಜ ಬಿತ್ತಿದ ಕ್ರಾಂತಿಯಾಗಿತ್ತು. ಹರಳಯ್ಯ ಮತ್ತು ಕಲ್ಯಾಣಮ್ಮರ ಚಮ್ಮಾವುಗೆ ಘಟನೆಯು ಮಾನವೀಯತೆ ಮತ್ತು ಸಮಾನತೆಯ ಶಾಶ್ವತ ಸಂಕೇತವಾಗಿದೆʼ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷೆ ಸುನಿತಾ ದಾಡಗೆ ಮಾತನಾಡಿ, ʼವಚನ ಚಿಂತನೆ ಮನೆ-ಮನೆಗೂ ತಲುಪಬೇಕು. ಮಕ್ಕಳಲ್ಲಿ ಶರಣ ಸಂಸ್ಕೃತಿ, ಪ್ರೀತಿ, ಗೌರವ ಮತ್ತು ಮಾನವೀಯ ಮೌಲ್ಯ ಬೆಳೆಸುವ ಪ್ರಯತ್ನ ನಾವು ಮಾಡಬೇಕುʼ ಎಂದು ಹೇಳಿದರು.

ಶೈಲಜಾ ಕಲ್ಯಾಣರಾವ ಚಳ್ಕಾಪುರೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ʼಬಸವತತ್ವ ನಿಷ್ಠುರರ ಮನೆಯಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಇರಬೇಕು. ಗುರುಬಸವ ಪ್ರಾರ್ಥನೆ ಮಾಡುವಂತಿರಬೇಕು, ತಂದೆ-ತಾಯಿ ಮತ್ತು ಸಾಮೂಹಿಕ ಪ್ರಸಾದ ಸೇವನೆ, ಮನೆಯ ಕಾರ್ಯಕ್ರಮಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಮಕ್ಕಳಲ್ಲಿ ಬಸವ ಸಂಸ್ಕೃತಿ ಮತ್ತು ಉತ್ತಮ ಸಂಸ್ಕಾರ ನೀಡಬೇಕಿದೆ. ವಚನ ಸಾಹಿತ್ಯ ಪರಿಷತ್ತು ಮನೆ-ಮನೆಗೆ ಚಿಂತನಾಗೋಷ್ಠಿ ಆಯೋಜಿಸುವ ಉದ್ದೇಶ ಹೊಂದಿದೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಹಾಸ್ಟೆಲ್‌ ಸಿಬ್ಬಂದಿ ಕರ್ತವ್ಯದಿಂದ ಬಿಡುಗಡೆ

ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಮಹಿಳಾ ಸಾಂಸ್ಕೃತಿಕ ಸಂಘದ ಸದಸ್ಯೆರಾದ ಕಸ್ತೂರಿಬಾಯಿ ಬಿರಾದಾರ, ಶಕುಂತಲಾ ಮಲ್ಕಪ್ಪನೋರ್, ಮೀನಾಕ್ಷಿ ಪಾಟೀಲ್, ಸವಿತಾ ಗಂಧಿಗುಡೆ, ರುಕ್ಮಿಣಿ ಕೋಟೆ ಹಾಗೂ ಲಕ್ಷ್ಮೀ ಸಿರ್ಸಿ ವಚನಗಾನ ನಡೆಸಿದರು. ಬಸವಾನುಯಾಯಿಗಳಾದ ಉಮಾಕಾಂತ ಮೀಸೆ ನಿರೂಪಿಸಿದರು, ಬಸವರಾಜ ಮೂಲಗೆ ಸ್ವಾಗತಿಸಿರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...