ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

Date:

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಮಂಡಳಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಸಂಘಟನೆಯ ಪ್ರಮುಖರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತ ಅಧಿಕಾರಿಗೆ ಸಲ್ಲಿಸಿದರು.

ʼರೈತರು ಸಾಲದಲ್ಲಿ ಬದುಕಿ ಸಾಲದಲ್ಲೇ ಮರಣ ಹೊಂದುತ್ತಿರುವ ದುಸ್ಥಿತಿ ತಡೆಯಬೇಕು. ಕೆಲ ಬ್ಯಾಂಕ್‌ನವರು ರೈತರ ಸಾಲದ ಕುರಿತು ಕೋರ್ಟ್‌ಗಳಲ್ಲಿ ದಾವೆ ಹೂಡಿ ರೈತರಿಗೆ ಮಾನಸಿಕ ಕಿರುಕುಳ ನೀಡುತ್ತಿರುವುದು ನಿಲ್ಲಿಸಬೇಕು. ಕೃಷಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ರೈತ-ಕೃಷಿಕರ ಕಲ್ಯಾಣ ಮಂಡಳಿ ರಚಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರೈತರಿಗೆ ಬರುವ ಸರ್ಕಾರಿ ಸೌಲಭ್ಯ ಹಣವನ್ನು ಕೆಲ ಬ್ಯಾಂಕ್‌ಗಳು ನೇರವಾಗಿ ಕಡಿತ ಮಾಡುತ್ತಿರುವ ಅಕ್ರಮ ತಡೆಯಬೇಕು. ಜಿಲ್ಲೆಯ ಹಳ್ಳಿಖೇಡ(ಬಿ) ಸಮೀಪದ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಿ, ಕಾರ್ಮಿಕರ ಬಾಕಿ 35 ಕೋಟಿ ಹಣ ತಕ್ಷಣ ಬಿಡುಗಡೆ ಮಾಡಬೇಕು. ರಸಗೊಬ್ಬರ ವಿತರಣೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆದು, ರೈತರಿಗೆ ಸಕಾಲದಲ್ಲಿ ಲಭ್ಯವಾಗುವಂತೆ ಕ್ರಮ ವಹಿಸಬೇಕುʼ ಎಂದು ಒತ್ತಾಯಿಸಿದರು.

ರೈತರಿಗೆ ಹಗಲು ವೇಳೆಯಲ್ಲೇ ನಿರಂತರ ವಿದ್ಯುತ್ ಪೂರೈಕೆ ಒದಗಿಸಬೇಕು, ವಿದ್ಯುತ್ ಖಾಸಗೀಕರಣ ಮಸೂದೆ ಹಿಂಪಡೆಯಬೇಕು. ರೈತರ ಮತ್ತು ಕೃಷಿ ಕಾರ್ಮಿಕರ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕು. ರೈತರು ಮತ್ತು ಕೃಷಿ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದುʼ ಎಂದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಅಖಿಲ ಭಾರತ ಕಿಸಾನ್ ಸಭೆಯ ಮುಖಂಡರಾದ ಬಾಬುರಾವ ಹೊನ್ನಾ, ಸೂರ್ಯಕಾಂತ ಮದಕಟ್ಟಿ, ನಜೀರ ಅಹ್ಮದ್, ಎಂ.ಡಿ. ಶಫಾಯತ್ ಅಲಿ, ಎಂಡಿ ವಹೀದ್‌ಮಿಯ್ಯಾ ಸಂತಪೂರ, ಜೈಶೀಲಾ, ಮುನಿರೋದ್ದೀನ್, ಮೋತಿರಾಮ, ಪ್ರಭು ತಗಣಿಕರ್, ರಾಮಣ್ಣಾ, ಶೀಲ ಸಾಗರ, ಸುಜನಾರಾಣಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...