ಬೀದರ್‌ | ಮನೆಯೇ ಮಕ್ಕಳ ಸಂಸ್ಕಾರ ಕೇಂದ್ರ : ಡಾ.ಗಂಗಾಬಿಕೆ ಅಕ್ಕ

Date:

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ಶಿಕ್ಷಣ ನೀಡುವುದು ತಾಯಂದಿರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಪಾಲಕರು ಆಸ್ತಿ ಅಂತಸ್ತುಗಳಿಗಿಂತ ಮಕ್ಕಳ ಶಿಕ್ಷಣ ಮತ್ತು ಸಂಸ್ಕಾರದ ಕಡೆ ಹೆಚ್ಚು ಗಮನ ನೀಡಬೇಕು. ಮನೆಯೇ ಮಕ್ಕಳ ಸಂಸ್ಕಾರ ಕೇಂದ್ರವಾಗಿದೆ ಎಂದು ಹರಳಯ್ಯ ಗವಿಯ ಡಾ.ಗಂಗಾಂಬಿಕಾ ಅಕ್ಕ ನುಡಿದರು.

ಬಸವಕಲ್ಯಾಣದ ಪರುಷಕಟ್ಟೆಯಲ್ಲಿ ಅಂತರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಹಾಗೂ ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ನಡೆದ ಬಸವ ಜಯಂತೋತ್ಸವ ಮಕ್ಕಳಲ್ಲಿ ಜ್ಞಾನ ಬಿತ್ತಣಿಕೆಯ ಶುಭ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ʼಜ್ಞಾನದ ಬಾಗಿಲು ತೆರೆದಾಗ, ಜ್ಞಾನದ ಸಂಪತ್ತು ಒಳಗೆ ಬಂದಾಗ, ಪರಮಾತ್ಮನ ಅನುಗ್ರಹ ನಮ್ಮ ಮೇಲೆ ಆದಾಗ ಭಾಗ್ಯೋದಯ ದಿನವಾಗಿದೆ. ಮಕ್ಕಳಿಗೆ ವಿವಿಧ ಭಾಷೆ ಕಲಿಸುವುದರಿಂದ ಅವರಲ್ಲಿ ಅದ್ಬುತ್ ಜ್ಞಾನ ಬರುತ್ತದೆ. ಜ್ಞಾನದಿಂದ ಸರ್ವರ ಉದ್ಧಾರ, ಲಿಂಗವಂತರಿಗೆ ಅಕ್ಷರ ಬಿತ್ತಣಿಕೆ ಒಂದು ಶಾಸನವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವ ಜಯಂತಿಯ ಮಾನವ ಮಂಗಳದ ಅಕ್ಷಯ ತೃತೀಯದಂದು ಆರಂಭಿಸಿ ಅವರಲ್ಲಿ ಪವಿತ್ರ ಅಕ್ಷರಗಳ ಬಿತ್ತಣಿಕೆಯೊಂದಿಗೆ ಜ್ಞಾನದ ಮಹಾದ್ವಾರವನ್ನು ತೆರೆಯುವುದಾಗಿದೆ. ಜ್ಞಾನವೆಂಬ ಭೂಮಿಯಲ್ಲಿ ಬೀಜ ಬಿತ್ತಿ ಮೊಳಕೆಯಾಗಿ ಅಂಕುರಿಸಿ ಮಹಾಜ್ಞಾನ ವೃಕ್ಷವಾಗಿ ಬೆಳೆಯುತಲಿದ್ದಾನೆ. ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಅವರನ್ನು ಶ್ರೇಷ್ಠವಾಗಿ ಬೆಳೆಸಿದರೆ ಎಲ್ಲರ ಭವಿಷ್ಯ ಸುರಕ್ಷಿತವಾಗಿ ಸಮಾಜ, ದೇಶ, ಜಗತ್ತು ಶಾಂತಿಮಯವಾಗುತ್ತದೆ. ಇನ್ನು ಸಾಕ್ಷಾತವಾಗುತ್ತಿರುವ ಶರಣ ಸಂತತಿಗೆ ಅಕ್ಷರಾಭ್ಯಾಸ ಪ್ರಸಾದಿಕರನ್ನಾಗಿ ಮಾಡಿರೆಂದು ಶುಭ ಹಾರೈಸಿ, ಪಾಲಕರು ನಮ್ಮ ಮಕ್ಕಳನ್ನು ಜ್ಞಾನಿಗಳಾಗಿ, ಸುಜ್ಞಾನಿಗಳಾಗಿ, ಮಹಾಜ್ಞಾನಿಗಳಾಗಿ ಕರುಣಿಸು ಬಸವ ಎಂದು ಪ್ರಾರ್ಥಿಸಿದರು.

ಮಕ್ಕಳ ಮೇಲೆ ಲಿಂಗೋದಕ ಸಿಂಪಡಿಸಿ ಕೈಗೆ ರುದ್ರಾಕ್ಷಿ ಕಂಕಣ ಕಟ್ಟಿ ಅವರಿಗೆ ಕಿವಿಯಲ್ಲಿ ಮಂತ್ರ ಹೇಳಿ ಪಾಟಿಯ ಮೇಲೆ ಓಂ
ಬಸವ ಎಂದು ಬರೆಯಿಸಿ ಅವರಿಗೆ ಅಕ್ಷರಾಬ್ಯಾಸ ಮಾಡಿಸಿದರು. ಇದಕ್ಕೂ ಮೊದಲು ಶರಣೆಯರಿಂದ ಸಾಮೂಹಿಕವಾಗಿ ಬಸವ ಸ್ತವನ ಸತತಂ ಪಠಣ ನಡೆಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದಲಿತರಿಗೆ ಸೂಕ್ತ ರಕ್ಷಣೆ; ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹೊಣೆ : ಸಚಿವ ಈಶ್ವರ ಖಂಡ್ರೆ

ಶಾಸಕ ಶರಣು ಸಲಗರ, ಶ್ರೀ ಬಸವೇಶ್ವರ ದೇವಸ್ಥಾನ ಪಂಚಕಮಿಟಿ ನಿರ್ದೇಶಕ ರೇವಣಪ್ಪಾ ರಾಯವಾಡೆ, ಅಕ್ಕಮಹಾದೇವಿ ಗವಿಯ ಪೂಜ್ಯ ಸತ್ಯಕ್ಕತಾಯಿ, ಲಿಂಗರಾಜ ಶಾಶೆಟ್ಟಿ, ಸಿದ್ದು ಬಿರಾದಾರ, ಶಿವಕುಮಾರ ಅಗ್ರೆ, ಕೃಷ್ಣ ಗೋಣೆ, ಜಯಶ್ರೀ ಬಿರಾದಾರ ಕವಿತಾ ಮೂಲಗೆ, ಸರಸ್ವತಿ ಬಿರಾದರ, ಗಣಪತಿ ಕಾಸ್ತೆ, ವಿದ್ಯಾವತಿ ಶೇರಿಕಾರ, ಸುಲೋಚನಾ ಗುದಗೆ, ಸವಿತಾ ರಗಟೆ, ಸುಜಾತಾ ತೋಗರಖೇಡೆ, ಸುಮಿತ್ರಾ ದಾವಣಗಾಂವೆ ಸೇರಿದಂತೆ ನೂರಾರು ಮಕ್ಕಳು ಮತ್ತು ಅವರ ಪಾಲಕರು ಭಾಗವಹಿಸಿದರು. ಉದ್ಯಮಿ ಪರಮೇಶ್ವರ ಬಿರಾದಾ ಭಕ್ತಿ ದಾಸೋಹಗೈದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...