ಬೀದರ್‌ | ಜಾತಿ ಗಣತಿ ಜಾರಿಯಾದರೆ ಉಗ್ರ ಚಳವಳಿ : ಎಂಎಲ್ಸಿ ಮಾರುತಿರಾವ್‌ ಮುಳೆ

Date:

ಜಾತಿ ಗಣತಿ ವರದಿಯು ಅವಾಸ್ತವ ಹಾಗೂ ಅವೈಜ್ಞಾನಿಕವಾಗಿದ್ದು, ಈ ವರದಿಯನ್ನು ಮರಾಠ ಸಮಾಜ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಕೂಡಲೇ ಸರ್ಕಾರ ಇದನ್ನು ಕೈಬಿಡಬೇಕು ಎಂದು ಮರಾಠ ಸಮಾಜದ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಮಾರುತಿರಾವ ಮುಳೆ ಒತ್ತಾಯಿಸಿದ್ದಾರೆ.

ʼಯಾರಿಗೋ ಖುಷಿಪಡಿಸಲು ಅಥವಾ ಯಾರದೋ ತುಷ್ಠೀಕರಣಕ್ಕಾಗಿ ಸರ್ಕಾರ ಹಠಮಾರಿ ಧೋರಣೆ ತಾಳಿ ವರದಿ ಜಾರಿಗೊಳಿಸಲು ಮುಂದಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆʼ ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ʼಮಾಧ್ಯಮಗಳಲ್ಲಿ ಬಂದ ವರದಿ ಪ್ರಕಾರ ಜಾತಿ ಗಣತಿಯಲ್ಲಿ ರಾಜ್ಯದಲ್ಲಿ ಮರಾಠ ಸಮಾಜದ ಜನಸಂಖ್ಯೆ 16 ಲಕ್ಷವಿದೆ ಎಂದು ತೋರಿಸಲಾಗಿದೆ. ಇದು ಶುದ್ಧ ತಪ್ಪು. ಬೀದರ್, ಬೆಳಗಾವಿ, ಕಾರವಾರ, ಶಿವಮೊಗ್ಗ, ದಾವಣಗೆರೆ, ಧಾರವಾಡ, ವಿಜಯಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 50 ಲಕ್ಷಕ್ಕೂ ಅಧಿಕ ಮರಾಠ ಸಮಾಜದ ಜನಸಂಖ್ಯೆ ಇದೆ. ಇಷ್ಟು ದೊಡ್ಡ ವ್ಯತ್ಯಾಸ ಹೇಗೆ ಸಾಧ್ಯ? ಎಲ್ಲೋ ಕುಳಿತು, ಯಾರದೋ ಮಾತು ಕೇಳಿ ಈ ಸಮೀಕ್ಷೆ ಮಾಡಿರುವುದು ಸ್ಪಷ್ಟ. ಸತ್ಯಾಂಶ ಇಲ್ಲದ ಮತ್ತು ಅಸ್ಪಷ್ಟ ಮಾಹಿತಿಯುಳ್ಳ ಈ ವರದಿ ಸ್ವೀಕರಿಸಿದರೆ ಸಮಾಜಕ್ಕೆ ಘೋರ ಅನ್ಯಾಯವಾಗಲಿದೆ. ಸಮಾಜ ಇದು ಸಹಿಸುವುದಿಲ್ಲ. ಇದಕ್ಕಾಗಿ ಎಂಥದ್ದೇ ಹೋರಾಟಕ್ಕೂ ಸಿದ್ಧʼ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಇದೊಂದು ಅವೈಜ್ಞಾನಿಕ ಜಾತಿ ಗಣತಿ ವರದಿ‌. ಈ ಸಮೀಕ್ಷೆಯೇ ತಪ್ಪಾಗಿ ನಡೆದಿದೆ. ಅಂಕಿ-ಅಂಶಗಳು ಸಂಪೂರ್ಣ ತಪ್ಪಾಗಿವೆ.‌ ನಿಖರ ಮಾಹಿತಿಯೇ ಇಲ್ಲದಿದ್ದಾಗ ಸರ್ಕಾರದಿಂದ ನಮ್ಮ ಸಮಾಜಕ್ಕೆ ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ, ವರದಿಯನ್ನು ತಿರಸ್ಕರಿಸಲು ಗಟ್ಟಿ ನಿರ್ಧಾರ ಕೈಗೊಳ್ಳಬೇಕು. ಇದು ಸಮಾಜದಲ್ಲಿ ಉದ್ಭವಿಸಬಹುದಾದ ಅನಗತ್ಯ ಗದ್ದಲ, ಗೊಂದಲ ತಿಳಿಗೊಳಿಸಿ ಶಾಂತಿ, ಸೌಹಾರ್ದ ನೆಲೆಸಲು ಸಹ ಕಾರಣವಾಗಲಿದೆʼ ಎಂದು ಪ್ರತಿಪಾದಿಸಿದ್ದಾರೆ.

ʼರಾಜ್ಯ ಸರ್ಕಾರ ಜಾತಿ ಗಣತಿ ವಿಷಯದಲ್ಲಿ ದೊಡ್ಡ ತಪ್ಪು ಹೆಜ್ಜೆ ಇರಿಸಿದೆ. ಸಾಮಾಜಿಕ, ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಸಿ, ಆ ಮೂಲಕ ಎಲ್ಲರಿಗೂ ನ್ಯಾಯ ಕಲ್ಪಿಸುವ ಕೆಲಸ ಆಗಬೇಕು. ಆದರೆ ಇಲ್ಲಿ ಸರ್ಕಾರವೇ ಸಮಾಜ ಒಡೆಯುವಂತಹ ಕೆಲಸಕ್ಕೆ ಕೈಹಾಕಿದಂತೆ ಕಾಣುತ್ತಿದೆ. ರಾಜ್ಯದಲ್ಲಿ ಈಗ ನಡೆಯುತ್ತಿರುವ ಬೆಳವಣಿಗೆ, ಹೋರಾಟ, ಪರ-ವಿರೋಧದ ಹೇಳಿಕೆ ಗಮನಿಸಿದರೆ ಜಾತ್ಯತೀತತೆ ಮಂತ್ರ ಪಠಿಸುತ್ತಲೇ ಸಿಎಂ ಸಿದ್ಧರಾಮಯ್ಯನವರು‌ ವಿನಾಕಾರಣ ಶಾಂತಿಯುತ ಸಮಾಜದಲ್ಲಿ ಜಾತಿ ಜಗಳಕ್ಕೆ ನೀರೆರೆಯುತ್ತಿದ್ದಾರೆ.‌ ಬಸವತತ್ವ ಪರಿಪಾಲಕ ಎನ್ನುತ್ತಲೇ ಸಿದ್ಧರಾಮಯ್ಯ ಅವರು, ಈ ತತ್ವದ ವಿರುದ್ಧ ಹೆಜ್ಜೆ ಇಡುತ್ತಿದ್ದಾರೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ; ಖಂಡನೀಯ

ʼಜಾತಿ ಗಣತಿ ವರದಿಗೆ ಮರಾಠ ಸಮಾಜದ ಎಲ್ಲರೂ ಪಕ್ಷಾತೀತವಾಗಿ ವಿರೋಧ ಮಾಡಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಸಚಿವ, ಶಾಸಕರು ಸಹ ಸಮಾಜ ಬಿಟ್ಟು ಇಲ್ಲ. ಸಮಾಜ ಅಂದ ಮೇಲೆ ಎಲ್ಲರೂ‌‌ ಒಂದೇ ವೇದಿಕೆಗೆ ಬರಲೇಬೇಕು. ಸಮಾಜದ ಹಿತದ ವಿಷಯ ಬಂದಾಗ ಪಕ್ಷಭೇದ ಮರೆತು ಹೋರಾಟ ಮಾಡುತ್ತೇವೆʼ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...