ಬೀದರ್‌ | ಕನ್ನಡ ಉಳಿಯಬೇಕಾದರೆ ಎಸ್‌ಇಪಿ ಜಾರಿಯಾಗಲಿ : ಪುರುಷೋತ್ತಮ ಬಿಳಿಮಲೆ

Date:

ʼಶಿಕ್ಷಣಕ್ಕೆ ಭದ್ರತೆ, ಜೀವನ, ಬದುಕು, ಅನ್ನ, ನೆಮ್ಮದಿ ಸೇರಿದಂತೆ ನಾನಾ ಅರ್ಥಗಳಿವೆ. ಈ ಅರ್ಥಗಳಿಗೆ ಪೂರಕವಾಗುವಂಥ ಕನ್ನಡ ಪಠ್ಯಪುಸ್ತಕಗಳು ಸಿದ್ಧಪಡಿಸಬೇಕು. ಎಸ್‌ಇಪಿ ಜಾರಿಗೆ ಬಂದರೆ ಕನ್ನಡ ಉಳಿದು ಬೆಳೆಯುತ್ತದೆʼ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನುಡಿದರು.

ಬೀದರ್‌ ನಗರದಲ್ಲಿ ಶನಿವಾರ ಕರ್ನಾಟಕ ಸಾಹಿತ್ಯ ಸಂಘದ ವತಿಯಿಂದ ಆಯೋಜಿಸಿದ ʼಕನ್ನಡ ಶಾಲೆಗಳ ಸ್ಥಿತಿ-ಗತಿ ಪರಿಹಾರೋಪಾಯಗಳುʼ ಕುರಿತಾದ ಸಂವಾದ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿ, ʼಕನ್ನಡ ವಿಷಯದಲ್ಲಿ ಅನೇಕ ವಿದ್ಯಾರ್ಥಿಗಳು ಅನುತೀರ್ಣರಾಗುತ್ತಿದ್ದಾರೆ. ಇದಕ್ಕೆ ಕಾರಣಗಳು ಹುಡಕಬೇಕಾಗಿದೆ. ಸರ್ಕಾರ ಕನ್ನಡ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡುವುದರ ಮೂಲಕ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದೆʼ ಎಂದರು.

ʼಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಎಲ್ಲ ವಲಯಗಳಿಗೆ ಅನುಕೂಲತೆಗಳು ದೊರಕಬೇಕು. ಸರ್ಕಾರದ ನಿಲುವು ಅಚಲವಾಗಿದೆ. ರಾಜ್ಯದಲ್ಲಿ 55 ಸಾವಿರ ಶಿಕ್ಷಕರ ಹುದ್ದೆಗಳು ಸರ್ಕಾರ ಕೂಡಲೇ ಭರ್ತಿ ಮಾಡಬೇಕು. ಈ ದಿಶೆಯಲ್ಲಿ ಪ್ರಾಧಿಕಾರ ಸರ್ಕಾರದ ಗಮನ ಸೆಳೆದಿದೆ. ಕನ್ನಡ ಕಟ್ಟುವಲ್ಲಿ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಅಧಿಕಾರಿಗಳು, ಪಾಲಕರು-ಪೋಷಕರ ಸಹಾಯ ಸಹಕಾರ ದೂರದೃಷ್ಟಿ ಅವಶ್ಯಕವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಕರ್ನಾಟಕ ಅನುದಾನಿತ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ʼಕರ್ನಾಟಕದಲ್ಲಿ 9-10 ವರ್ಷಗಳಿಂದ ಖಾಸಗಿ ಕನ್ನಡ ಶಾಲೆಗಳು ಮುಚ್ಚುತ್ತಿದ್ದಾರೆ. ಸರ್ಕಾರದ ವಿಪರಿತ ಕಠಿಣ ನಿಯಮಗಳಿಂದ ಕನ್ನಡ ಶಾಲೆಗಳು ಸೋತು ಸೊರಗುತ್ತಿವೆ. ನಮ್ಮ ಕನ್ನಡ ಶಾಲೆ ಹಾಗೂ ಮಾತೃಭಾಷೆ ಉಳಿಯಬೇಕಾಗಿದೆ. ಅನುದಾನಿತ ಕನ್ನಡ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಕನ್ನಡ ಶಾಲೆಗಳನ್ನು ಇಂಗ್ಲೀಷ್ ಮಾಧ್ಯಮವಾಗಿ ಪರಿವರ್ತಿಸುವುದು ತಕ್ಷಣವೇ ನಿಲ್ಲಿಸಬೇಕುʼ ಎಂದು ಆಗ್ರಹಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಮಾತನಾಡಿ, ʼಕರ್ನಾಟಕದಲ್ಲಿ ಶತಮಾನ ಕಂಡ ಅನೇಕ ಶಾಲೆಗಳಿವೆ. ಅವುಗಳಿಗೆ ಸರ್ಕಾರ ವಿಶೇಷ ಸೌಲಭ್ಯಗಳು ಕೊಡಬೇಕೆಂಬ ದಿಶೆಯಲ್ಲಿ ಪ್ರಾಧಿಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಕನ್ನಡ ಶಾಲೆಗಳಿವೆ. ಅವುಗಳಿಗೆ ಶಕ್ತಿ ತುಂಬುವ ಕೆಲಸ ಪ್ರಾಧಿಕಾರ ಮಾಡಲಿದೆʼ ಎಂದು ತಿಳಿಸಿದರು.

ಹಿರಿಯ ಸಾಹಿತಿ ಡಾ.ಕಾಶಿನಾಥ ಚೆಲ್ವಾ ಮಾತನಾಡಿ, ʼಕನ್ನಡ ಶಾಲೆಗಳಿಗೆ ವಿಶೇಷ ಪ್ಯಾಕೇಜ್‌ ಕೊಡಬೇಕು. ಅಂಗನವಾಡಿ ಶಾಲೆಗಳನ್ನು ಮೇರ್ಲ್ದಜೆಗೇರಿಸಬೇಕು. ಕನ್ನಡ ಶಾಲೆಗಳಿಗೆ ಕೊಠಡಿ, ನೀರು, ವಿದ್ಯುತ್‌, ಆಟದ ಮೈದಾನ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಿದರೆ ಕನ್ನಡ ಉಳಿಯುತ್ತವೆʼ ಎಂದರು.

ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷರಾದ ಪ್ರೊ. ಜಗನ್ನಾಥ ಹೆಬ್ಬಾಳೆ ಮಾತನಾಡಿ, ʼಕನ್ನಡ ಭಾಷೆ ಬಳಕೆ ಮಾಡಿದರೆ ಮಾತ್ರ ಉಳಿಯುತ್ತದೆ. ಇಲ್ಲವಾದಲ್ಲಿ ಅಳಿಯುತ್ತದೆʼ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳು, ಸಾಹಿತಿಗಳು ಸಂವಾದ ಗೋಷ್ಠಿಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ಮಂಡಿಸಿದರು. ಸಾಹಿತ್ಯ ಸಂಘದ ಜಂಟಿ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಸಾಹಿತಿ ಎಸ್.ಬಿ. ಕುಚಬಾಳ ನಾಡಗೀತೆ ಹಾಡಿದರು. ಕರ್ನಾಟಕ ಸಾಹಿತ್ಯ ಸಂಘದ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ ಸ್ವಾಗತಿಸಿದರು. ಡಾ. ಅಶೋಕ ಕೋರೆ ನಿರೂಪಿಸಿದರು. ಡಾ.ಸುರೇಖಾ ಬಿರಾದಾರ ವಂದಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...