ಬೀದರ್‌ | ವಿಮಾ ಯೋಜನೆ ವಂಚನೆಗೆ ಕಡಿವಾಣ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

ಹಲವು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ  ಆರೋಪಿಸಿದರು.

ಜಿಲ್ಲೆಯ ಭಾಲ್ಕಿ ಪಟ್ಟಣದ ಪುರಭವನದಲ್ಲಿ ಜಿಲ್ಲಾ ರೈತ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.

“ಫಸಲ್ ವಿಮಾ ಯೋಜನೆ ಸರಿಯಾಗಿ ಅನುಷ್ಟಾನ ಆಗುತ್ತಿಲ್ಲ. ಜಿಲ್ಲೆಯ ರೈತರು ನೂರಾರೂ ಕೋಟಿ ರೂ. ವಿಮೆ ಕಂತು ಕಟ್ಟಿದ್ದಾರೆ. ಆದರೆ, ಕಡಿಮೆ ಹಣ ಪಾವತಿಸಲಾಗುತ್ತಿದೆ. ಕಳೆದ ವರ್ಷ ಜಿಲ್ಲೆಯ ರೈತರು 220 ಕೋಟಿ ರೂ. ವಿಮೆ ಕಂತು ಕಟ್ಟಿದ್ದಾರೆ. ಆದರೆ 50 ಕೋಟಿ ರೂ ಮಾತ್ರ ಪರಿಹಾರ ನೀಡಲಾಗಿದೆ. ಸುಮಾರು 170 ಕೋಟಿ ರೂಪಾಯಿಯನ್ನು ಖಾಸಗಿ ವಿಮೆ ಕಂಪನಿ ಲೂಟಿ ಹೊಡಿದಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಾರಿ ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದು, ನಾನು ಜಿಲ್ಲಾ ಉಸ್ತುವಾರಿ ಸಚಿವನಿದ್ದೇನೆ. ಇನ್ಮುಂದೆ ವಿಮೆ ಕಂಪನಿ ಮೋಸದಾಟಕ್ಕೆ ಬ್ರೇಕ್ ಹಾಕಲಾಗುತ್ತದೆ” ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಫಲವತ್ತಾದ ಭೂಮಿ ಇದೆ. ಮಾಂಜ್ರಾ, ಕಾರಂಜಾ ನದಿ ನೀರು ಹರಿಯುತ್ತಿದೆ. ಕೃಷಿಗೆ ಪೂರಕ ವಾತಾವರಣ ಇಲ್ಲಿದೆ. ಬಯಲು, ನೀರಾವರಿ ಸೇರಿ ಎಲ್ಲ ಬೆಳೆ ಬೆಳೆಯಲು ಅವಕಾಶ ಇಲ್ಲಿದೆ. ಆದರೆ, ರೈತರಲ್ಲಿ ಜಾಗೃತಿ ಕೊರತೆಯಿಂದ ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

“ಜಿಲ್ಲೆಯಲ್ಲಿ ನೀರಾವರಿ ಯೋಜನೆ ಸಮರ್ಪಕವಾಗಿ ಬಳಕೆ ಆಗಬೇಕಿದೆ. ಗೋದಾವರಿ ಬೇಸ್ 23  ಟಿಎಂಸಿ ನೀರು ನಮ್ಮ ಪಾಲಿಗೆ ಸಿಗಬೇಕಿದೆ. ಈಗಾಗಲೇ ಕಾರಂಜಾ ಜಲಾಶಯ, ಅತಿವಾಳ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ತಾಲೂಕಿನಲ್ಲಿ ನೀರಾವರಿ ಪ್ರದೇಶ ಹೆಚ್ಚಿಸಲಾಗಿದೆ” ಎಂದರು.

ಮುಂಬರುವ ದಿನಗಳಲ್ಲಿ ಚುಳಕಿ ನಾಲಾ ಕಾಲುವೆ, ಕೆರೆ ಅಭಿವೃದ್ಧಿ, ಮೇಹಕರ್ ಏತ ನೀರಾವರಿ ಯೋಜನೆ ಅನುಷ್ಟಾನಕ್ಕೆ ಒತ್ತು ನೀಡಲಾಗುವುದು. ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು. ರೈತ ವಿರೋಧಿ ಕರಾಳ ಮೂರು ಕಾಯಿದೆಗಳಲ್ಲಿ ಈಗಾಗಲೇ ಕೃಷಿ ಉತ್ಪನ್ನ ಮಾರುಕಟ್ಟೆ ಸಂಬಂಧಿಸಿದ ಕಾಯಿದೆ ರದ್ದು ಪಡಿಸಲಾಗಿದೆ. ಉಳಿದರೆಡು ಕಾಯಿದೆ ರದ್ದು ಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ” ಎಂದು ತಿಳಿಸಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಮಾತನಾಡಿ, “ಜಿಲ್ಲೆಯಲ್ಲಿ  ಒಂದಿಲ್ಲ ಒಂದು ಸಮಸ್ಯೆಯಿಂದ ರೈತರು ಸಮಸ್ಯೆ ಅನುಭವಿಸುತ್ತಿದ್ದು ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ರೈತರ ಬೇಡಿಕೆ ಈಡೇರಿಕೆಗೆ ಸರ್ಕಾರ ಸ್ಪಂದಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿದ್ಯುತ್‌ ಬಿಲ್ ಬಾಕಿ ಇದ್ದರು ‘ಗೃಹಜ್ಯೋತಿ’ ಲಾಭ ಪಡೆಯಬಹುದು: ಇಂಧನ ಇಲಾಖೆ

ತಾಲೂಕು ಅಧ್ಯಕ್ಷ ಬಾಬುರಾವ ಜೋಳದಾಪಕೆ ಮಾತನಾಡಿ, “ಜಿಲ್ಲೆಯ ರೈತರ ಜೀವನಾಡಿ ಆಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ದಯಾನಂದ ಸ್ವಾಮಿ, ಶ್ರೀಮಂತ ಬಿರಾದಾರ್, ಶೇಷರಾವ ಕಣಜಿ, ವೈಜಿನಾಥ ವಡ್ಡೆ, ಚಂದ್ರಶೇಖರ ಜಮಖಂಡಿ, ನಾಗಯ್ಯ ಸ್ವಾಮಿ, ಸುಭಾಷ ರಗಟೆ, ಮನೋಹರರಾವ ಹೊರಂಡಿ, ಸತ್ಯವಾನ ಸೂರ್ಯವಂಶಿ, ಸುಧಾಕರ ಬೋಗಡೆ, ಮಲ್ಲಿಕಾರ್ಜುನ ಬಿರಾದಾರ್, ಶಂಕರೆಪ್ಪ ಪಾರಾ, ಪ್ರಕಾಶ ಬಾವುಗೆ, ಭವರಾವ ಪಾಟೀಲ್, ಪ್ರವೀಣ ಕುಲಕರ್ಣಿ, ರಾಮರಾವ ಶೆಡೋಳೆ, ಝರಣಪ್ಪ ದೇಶಮುಖ, ವಿಶ್ವನಾಥ ಧರಣ , ಬಸಪ್ಪ ಮರಖಲ್, ಗಣಪತರಾವ ವಲ್ಲಾಪೆ, ಉತ್ತಮರಾವ ಮಾನೆ, ವಿಠಲ ಪಾಟೀಲ್, ಶಿವಾನಂದ ಹುಡಗೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...