ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಇವರ ಸಹಯೋಗದಲ್ಲಿ ಬೀದರ್ ನಗರದ ಅಕ್ಕ ಮಹಾದೇವಿ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ಈಚೆಗೆ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ನಡೆಯಿತು.
ಎರಡು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಒಟ್ಟು 17 ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದವು. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಅಗ್ರಸ್ಥಾನ ಪಡೆದಿದೆ. ಬೈಲುಹೊಂಗಲ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ದ್ವೀತಿಯ ಸ್ಥಾನ ಗಳಿಸಿದರೆ, ತೃತೀಯ ಸ್ಥಾನದಲ್ಲಿ ರಾಣಿಬೆನ್ನೂರಿನ ಕೆ.ಎಲ್.ಇ.ಎಸ್ ಮಹಿಳಾ ವಿದ್ಯಾಲಯ ತೃಪ್ತಿಪಟ್ಟಿದೆ.
ಕಾರ್ಯಕ್ರಮ ಉದ್ಘಾಟಿಸಿದ ವಿಜಯಪುರ ಕಾಲೇಜಿನ ದೈಹಿಕ ನಿರ್ದೇಶಕ ಡಾ.ವಿಶ್ವನಾಥ ನಡುಕಟ್ಟಿ, ʼವಿದ್ಯಾರ್ಥಿಗಳು ಪಠ್ಯೆದ ಜೊತೆಗೆ ದೈಹಿಕ, ಮಾನಸಿಕವಾಗಿ ಸದೃಢರಾಗಿರಬೇಕು. ಕ್ರೀಡೆಯಿಂದ ಮಾನಸಿಕ ನೆಮ್ಮದಿ ಸಾಧ್ಯ ಎಂದ ಅವರು ಅಂತರ ಕಾಲೇಜು ಪಂದ್ಯವಾಳಿಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಬೀದರ್ ಅಕ್ಕಮಹಾದೇವಿ ಕಾಲೇಜಿನ ಮಕ್ಕಳ ಕ್ಷೇಮಾಭಿವೃದ್ದಿ ಅಧಿಕಾರಿ ಡಾ.ಗಂಗಾಂಬಿಕಾ ಪಾಟೀಲ್ ಮಾತನಾಡಿ, ʼವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಇತ್ತೀಚೆಗೆ ದೇಶದ ಕ್ರೀಡೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಹಿಳೆಯರು ಸಾಧನೆಗೈಯುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಮುಂದಿನ ದಿನಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಸಾಧನೆಗೆ ಮುಂದಾಗಬೇಕುʼ ಎಂದರು.
ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎ.ಡಿ.ಡೋಲೆ ಮಾತನಾಡಿ, ʼಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖ ಇದ್ದಂತೆ ಜೀವನದಲ್ಲಿ ಎಲ್ಲವನ್ನು ತೆಗೆದುಕೊಂಡು ಹೋಗಬೇಕು. ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡು ಕಾಲೇಜಿನ ಕೀರ್ತಿ ತರಬೇಕುʼ ಎಂದು ಹುರಿದುಂಬಿಸಿದರು.
ಕಾಲೇಜು ಪ್ರಾಂಶುಪಾಲ ಡಾ.ರಂಜನಾ ಪಾಟೀಲ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಧ್ಯಾಪಕ ಡಾ.ಸುನೀಲ್ ನಡುಕಟ್ಟಿ ಮಾತನಾಡಿದರು.
ಇದನ್ನೂ ಓದಿ : ಬೀದರ್ | ಶಾಲಾ ಅವ್ಯವಸ್ಥೆ ಸುಧಾರಣೆಗೆ ಮನೆ-ಮನೆಗೆ ಭಿಕ್ಷೆ ಬೇಡಿದ ಕೆಆರ್ಎಸ್ ಕಾರ್ಯಕರ್ತರು
ವಿದ್ಯಾರ್ಥಿನಿ ಅಂಜಲಿ ಶಿವಕುಮಾರ ಸ್ವಾಗತಿಸಿದರು. ಪಲ್ಲವಿ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ದೈಹಿಕ ನಿರ್ದೇಶಕರಾದ ಡಾ.ಸುನಂದಾ ಗಂಗೂ ಸ್ವಾಗತಿಸಿದರು.ಪ್ರಾಧ್ಯಾಪಕ ಡಾ.ಶಿವಾನಂದ್ ಸಕ್ಪಾಲ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಹಾಗೂ ಎನ್ಎಸ್ಎಸ್ ಮತ್ತು ಎನ್ಸಿಸಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.





