ಬೀದರ್ | ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ; ತನಿಖೆಗೆ ಕರವೇ ಆಗ್ರಹ

Date:

ಬೀದರ್ ತಾಲೂಕಿನ ಆಣದೂರ, ನಾಗೋರಾ ಹಾಗೂ ಕಮಠಾಣಾ ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆ ಮಾಡದೇ ಅವ್ಯವಹಾರ ನಡೆದಿದ್ದು, ತಪ್ಪಿಸಿಕೊಂಡಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೆಗೌಡ ಬಣ) ಕಾರ್ಯಕರ್ತರು ಒತ್ತಾಯಿಸಿ ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದರು.

“ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಇರುವ 14ನೇ, 15ನೇ ಹಣಕಾಸು ಯೋಜನೆ, ಮನರೇಗಾ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರದೆ ಮನಬಂದಂತೆ ಕ್ರಿಯಾ ಯೋಜನೆ ರೂಪಿಸಿ ಸರ್ಕಾರದ ಹಣ ಲೂಟಿ ಮಾಡಿದ್ದಾರೆ. ಬೀದರ್ ತಾಲೂಕಿನ ಆಣದೂರ, ಕಮಠಾಣಾ ಹಾಗೂ ನಾಗೋರಾ ಗ್ರಾಮ ಪಂಚಾಯತ್ ಪಿಡಿಒ, ಡಾಟಾ ಆಪರೇಟರ್ ಸೇರಿದಂತೆ ಸಂಬಂಧಪಟ್ಟ ಎಂಜಿನಿಯರ್‌ಗಳು ಶಾಮೀಲಾಗಿ ಸುಮಾರು ವರ್ಷಗಳಿಂದ ಕಳಪೆ ಕಾಮಗಾರಿ ನಡೆಸಿ ಸರ್ಕಾರದ ಅನುದಾನ ಬಳಸದೆ ಅವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ತಾಲೂಕು ಪಂಚಾಯತ್ ಇಒಗೆ ಮನವಿ ಪತ್ರ ಸಲ್ಲಿಸಿ ಆರೇಳು ತಿಂಗಳು ಕಳೆದರೂ ಪ್ರಯೋಜನವಾಗಿಲ್ಲ” ಎಂದು ಕಾರ್ಯಕರ್ತರು ಆರೋಪಿಸಿದರು.

“ಸರ್ಕಾರದ ಹಣ ಲೂಟಿ ಹೊಡೆಯಲು ತಾಲೂಕು ಪಂಚಾಯತ್ ಇಒ ಅವರೇ ರಕ್ಷಣೆ ನೀಡುತ್ತಿದ್ದರು ಎಂಬುದು ಮೇಲ್ನೋಟಕ್ಕೆ ಕಾಣುತ್ತಿತ್ತು. ಈಗಾಗಲೇ ಅಮಾನತಾದ ತಾ. ಪಂ. ಇಒ ಮಾಣಿಕರಾವ ಪಾಟೀಲ್ ಅವರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು. ಸದರಿ ಪಂಚಾಯತ್‌ಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ಅವ್ಯವಹಾರ ಎಸಗಿದ ಪಿಡಿಒ, ಸಹಾಯಕ ಎಂಜಿನಿಯರ್ ಹಾಗೂ ಎಂ ಎಸ್ ಕೋ ಆರ್ಡಿನೇಟರ್ ಅವರನ್ನು ಕೂಡಲೇ ವಜಾಗೊಳಿಸಬೇಕು. ಇಂಥ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ಮುಂದುವರೆದಲ್ಲಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಮೊಗೇರ ಸಮುದಾಯವನ್ನು ಪ್ರವರ್ಗ-1ರ ಪಟ್ಟಿಯಿಂದ ಕೈಬಿಡದಂತೆ ದಸಂಸ ಆಗ್ರಹ

ಕರವೇ ಜಿಲ್ಲಾಧ್ಯಕ್ಷ ಅಮೃತ ಮುತ್ತಂಗಿಕರ್, ತಾಲೂಕು ಅಧ್ಯಕ್ಷ ಸುನೀಲ ಚಂದಾ, ಕರ್ನಾಟಕ ಪ್ರಜಾ ಶಕ್ತಿ ಜಿಲ್ಲಾಧ್ಯಕ್ಷ ಸಾಯಿ ಸಿಂಧೆ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರಾದ ರಮೇಶ್ ಪಾಸ್ವಾನ್, ಪ್ರಶಾಂತ ಭಾವಿಕಟ್ಟಿ, ರಾಜಕುಮಾರ್ ಭಾವಿದೊಡ್ಡಿ, ಗೌತಮ ಮುತ್ತಂಗಿಕರ್, ಶಿವಸಾಗರ, ಪುಟ್ಟರಾಜ ದೀನೆ, ಸಂತೋಷ ಏಣಕೂರ, ಪ್ರಶಾಂತ ಹೊನ್ನಾ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...