ಬೀದರ್‌ | ಜಯದೇವಿತಾಯಿ ಲಿಗಾಡೆ ಕನ್ನಡ ಪ್ರೀತಿ ಅನುಕರಣೀಯ: ನಾಗರಾಜ ಹಾವಣ್ಣ

Date:

ಡಾ.ಜಯದೇವಿತಾಯಿ ಲಿಗಾಡೆ ಅವರು ಕನ್ನಡದ ಅಂತಃಕರಣದ ಪರಿಚಾರಕಿಯಾಗಿದ್ದರು. ಅವರ ಇಡೀ ಬದುಕು ಕನ್ನಡಮಯವಾಗಿತ್ತು ಎಂದು ಹುಲಸೂರ ತಾಲೂಕು ಕಸಾಪ ಅಧ್ಯಕ್ಷ ನಾಗರಾಜ ಹಾವಣ್ಣ ಹೇಳಿದರು.

ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ತಾಲೂಕು ಮತ್ತು ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಡಾ.ಜಯದೇವಿತಾಯಿ ಲಿಗಾಡೆ ಅವರ ಜಯಂತ್ಯೋತ್ಸವ ಹಾಗೂ ಉಪನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼಲಿಗಾಡೆ ತಾಯಿ ಅವರು ಮಂಡ್ಯದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷೆತೆಗೆ ಭಾಜನರಾಗಿದ್ದು ಹೆಮ್ಮೆಯ ವಿಚಾರ. ಕನ್ನಡವೇ ಕನ್ನಡಿಗರ ನಿಜವಾದ ಧರ್ಮ ಎಂಬ ಸಿದ್ಧಾಂತವನ್ನು ಲಿಗಾಡೆ ತಾಯಿಯವರು ಪ್ರತಿಪಾದಿಸಿದ್ದರು. ಅವರ ಸಾಹಿತ್ಯದ ಮತ್ತು ಸಮಾಜದ ಸೇವೆ ಎಲ್ಲರಿಗೂ ಅನುಕರಣೀಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಕಲ್ಯಾಣದ ಐ ಸ್ಕೂಲ್ ಸಂಸ್ಥಾಪಕ ಯುವರಾಜ ಪಾಟೀಲ ಮಾತನಾಡಿ, ʼಕರ್ನಾಟಕದಲ್ಲಿ ನೆಲೆಸಿದ ಎಲ್ಲರಿಗೂ ಓದು, ಬರಹ ಮತ್ತು ಮಾತನಾಡಲು ಕನ್ನಡ ಬರಲೇಬೇಕು. ಮಾತೃಭಾಷೆಯಿಂದ ಸಮಾಜವನ್ನು ಚೆನ್ನಾಗಿ ತಿಳಿದುಕೊಳ್ಳಲು ಸಾಧ್ಯ. ಲಿಗಾಡೆ ತಾಯಿಯವರ ಕನ್ನಡ ಪ್ರೇಮ ಇಡೀ ನಾಡಿಗೆ ಮಾದರಿʼ ಎಂದರು.

WhatsApp Image 2025 06 24 at 8.12.28 PM

ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ನಿರ್ದೇಶಕ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ʼಲಿಗಾಡೆ ತಾಯಿಯವರು ವಚನಕಾರರ ವೈಚಾರಿಕ ನಿಲುವು ತಮ್ಮ ಸಾಹಿತ್ಯ ಮತ್ತು ಬದುಕಿನಲ್ಲಿ ಅಳವಡಿಸಿಕೊಂಡಿದ್ದರು. ಮಹಿಳಾ ಶಿಕ್ಷಣ, ಸ್ವಾವಲಂಬನೆ, ಸ್ವಾತಂತ್ರ್ಯಕ್ಕೆ, ಮಹಿಳೆಯರ ಆರೋಗ್ಯಕ್ಕೆ ಹೆಚ್ಚು ಮನ್ನಣೆ ನೀಡಿದ್ದರುʼ ಎಂದು ತಿಳಿಸಿದರು.

ʼಸ್ವಾತಂತ್ರ್ಯ ಚಳುವಳಿ, ಕರ್ನಾಟಕ ಏಕೀಕರಣ ಅವರ ಕನಸಾಗಿತ್ತು. ಕನ್ನಡ ನುಡಿ ಮತ್ತು ನಾಡಿನ ಬೆಳವಣಿಗೆ ಅವರ ಬದುಕಿನ ಪ್ರಧಾನ ಭಾಗವಾಗಿತ್ತು. ಅದಕ್ಕಾಗಿಯೇ ಬದುಕಿನುದ್ದಕ್ಕೂ ಶ್ರಮಿಸಿದ್ದರು. ಕಾವ್ಯ, ಮಹಾಕಾವ್ಯ ಬರೆದ ಅವರು ಶೂನ್ಯ ಸಂಪಾದನೆ ಮತ್ತು ವಚನಗಳು ಮರಾಠಿಗೆ ಅನುವಾದಿಸಿದರು. ಲಿಗಾಡೆ ತಾಯಿಯವರು ಕನ್ನಡ ಮತ್ತು ಮರಾಠಿ ಬಾಂಧವ್ಯದ ಸಾಂಸ್ಕೃತಿಕ ಸೇತುವೆʼ ಎಂದು ನುಡಿದರು.

ಇದನ್ನೂ ಓದಿ : ಬೀದರ್‌ | ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ : ಎಸ್ಪಿ ಪ್ರದೀಪ ಗುಂಟಿ

ಗ್ರಾಮ ಪಂಚಾಯಿತಿ ಸದಸ್ಯ ಅಶೋಕ ತೇಲಂಗ, ಮುಖಂಡರಾದ ಬಾಬುರಾವ ಪಾಟೀಲ, ಧೂಳಪ್ಪ ಭರಮಶೆಟ್ಟೆ, ಅಖಿಲೇಶ ಪಾಟೀಲ, ಲಹು ವಾಗ್ದರೆ, ರವಿ ಸ್ವಾಮಿ, ನಾಗಪ್ಪ ಮೇತ್ರಿ, ಪ್ರಮೋದ್ ಭರಮಶೆಟ್ಟೆ, ಗೋರಖ ಖಪಲೆ, ದತ್ತಾತ್ರಿ ಮೇತ್ರಿ, ಯುವರಾಜ ವಗ್ಗೆ, ಶಿವಕುಮಾರ್ ಮೇತ್ರೆ, ಶಂಕರ್ ಅಟ್ಟೂರೆ ಮೊದಲಾದವರಿದ್ದರು. ಹುಲಸೂರ ವಲಯ ಕಸಾಪ ಅಧ್ಯಕ್ಷ ದೀಪಕ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಿವಕುಮಾರ ಭರಮಶೆಟ್ಟೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...