ಬೀದರ್‌ | ಕನ್ನಡದ ಅಸ್ಮಿತೆಯ ಕವಯಿತ್ರಿ ಜಯದೇವಿತಾಯಿ ಲಿಗಾಡೆ : ಚಂದ್ರಕಾಂತ ಶಾಬಾದಕರ್

Date:

ಕನ್ನಡವನ್ನು ತಮ್ಮ ತನು, ಮನ, ಭಾವ ತುಂಬಿಕೊಂಡಿದ್ದ ಡಾ.ಜಯದೇವಿತಾಯಿ ಲಿಗಾಡೆ ಕನ್ನಡದ ಅಸ್ಮಿತೆಯ ಕವಯಿತ್ರಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಶಹಬಾದಕರ ನುಡಿದರು.

ಬೀದರ ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ನಗರದ ಬಸವಕೇಂದ್ರದಲ್ಲಿ ಆಯೋಜಿಸಲಾದ ಡಾ.ಜಯದೇವಿತಾಯಿ ಲಿಗಾಡೆ ಜಯಂತ್ಯುತ್ಸವ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ʼಕನ್ನಡದಲ್ಲಿ ಮಹಾಕಾವ್ಯ ರಚಿಸಿದ ಲಿಗಾಡೆ ತಾಯಿಯವರು ಮರಾಠಿಗೆ ವಚನಗಳನ್ನು ಅನುವಾದಿಸಿ ಮರಾಠಿ ಮತ್ತು ಕನ್ನಡದ ಮಧ್ಯ ಭಾಷಿಕ ಸೌಹಾರ್ದತೆ ಬೆಳೆಸಿದವರು. ಅವರ ಜಯಂತ್ಯುತ್ಸವ ದಿನದಂದು ಸಾಧಕರಿಗೆ ಅಭಿನಂದಿಸುತ್ತಿರುವುದು ಶ್ಲಾಘನೀಯ ಕಾರ್ಯʼ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಕನ್ನಡ ಸಾಹಿತ್ಯಕ್ಕೆ ಜಯದೇವಿತಾಯಿ ಲಿಗಾಡೆ ಅವರ ಕೊಡುಗೆ ಅಪಾರವಾಗಿದೆ. ಕರ್ನಾಟಕ ಏಕೀಕರಣ ಚಳವಳಿಗೆ ಹೋರಾಡಿದಂತೆ ಕರ್ನಾಟಕಕ್ಕೆ ಸೇರಬೇಕಾದ ಪ್ರದೇಶಗಳಿಗಾಗಿ ಏಕೀಕರಣ ಹೋರಾಟ ಮಾಡಿದವರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷರಾಗಿದ್ದ ಅವರ ಹೆಸರಲ್ಲಿ ಮತ್ತು ಪ್ರಭುರಾವ ಕಂಬಳಿವಾಳೆ ಅವರ ಹೆಸರಲ್ಲಿ ಉದ್ದೇಶಿತ ಟ್ರಸ್ಟ್ ಇನ್ನು ನನೆಗುದಿಗೆ ಬಿದ್ದಿರುವುದು ನೋವಿನ ಸಂಗತಿ. ಜಿಲ್ಲಾಡಳಿತ ಮತ್ತು ಸರಕಾರ ಈ ಬಗ್ಗೆ ಲಕ್ಷವಹಿಸಬೇಕೆಂದು ಮನವಿ ಮಾಡಿದರು.

ವಿಧಾನ ಪರಿಷತ್ತಿನ ಮಾಜಿ ಶಾಸಕ ಅರವಿಂದ್ ಕುಮಾರ ಅರಳಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ʼಬಸವಣ್ಣನವರ ಚಿಂತನೆಗಳೆ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಆದ್ದರಿಂದ ಸಂವಿಧಾನ ಮತ್ತು ಬಸವತತ್ವದ ಆಶೋತ್ತರ ಒಂದೇ ಆಗಿದ್ದು, ನಮ್ಮ ನಡೆ-ನಡಿ ಕೂಡಾ ಒಂದಾಗಿರಬೇಕುʼ ಎಂದು ಹೇಳಿದರು.

ಭಾಷಾಂತರ ನಿರ್ದೇಶನಾಲಯದ ಉಪ ನಿರ್ದೇಶಕ ಭಕ್ತರಾಜ ಪಾಟೀಲ ಮಾತನಾಡಿ, ʼಪ್ರಾಮಾಣಿಕ ಕಾರ್ಯಗಳಿಗೆ ಯಾವತ್ತೂ ಜನಮನ್ನಣೆ ಇರುತ್ತದೆ. ಆದರೆ ಕಾರ್ಯ ನಿರ್ವಹಿಸುವಾಗ ಧೈರ್ಯವಿರಬೇಕು ಯಶಸ್ಸು ಖಂಡಿತʼ ಎಂದು ಹೇಳಿದರು.

ಪ್ರಾಚಾರ್ಯ ಡಾ.ಮನ್ಮತ ಡೋಳೆ ಮಾತನಾಡಿ, ʼಸರ್ವಸಮತೆ ಸಾರಿದ ಬಸವಾದಿ ಶರಣರ ವಾರಸುದಾರರಾದ ನಾವು ಸೌಹಾರ್ದತೆ ನಮ್ಮ ಅಂತಃಶಕ್ತಿಯಾಗಲಿ, ಜಾಗತಿಕ ಶಾಂತಿ ಪ್ರೀತಿ ಪುನಃ ನೆಲೆಗೊಳ್ಳಬೇಕಾದಲ್ಲಿ ಬುದ್ಧ, ಬಸವಣ್ಣನವರ ಚಿಂತನೆಯ ಆಚರಣೆ ಅಗತ್ಯ ಎಂದು ತಿಳಿಸಿದರು.

ಜೀ ಕನ್ನಡ ಸರಿಗಮಪ 21ನೇ ಸೀಸನ್‌ನಲ್ಲಿ ವಿಜೇತರಾದ ಶಿವಾನಿ ಶಿವದಾಸ ಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ್ ಕುಮಾರ ಅರಳಿ ಹಾಗೂ ನಾಲಂದಾ ಪಪೂ ಕಾಲೇಜು ಪ್ರಾಚಾರ್ಯ ಡಾ. ಮನ್ಮಥ ಡೋಳೆ ಅವರಿಗೆ ಸುಡಾನ್‌ದಲ್ಲಿ ಜರುಗಿದ ಅಂತರರಾಷ್ಟ್ರೀಯ ವಾಲಂಟರಿ ಶಾಂತಿ ಪುರಸ್ಕಾರ ಮತ್ತು ಬೆಂಗಳೂರು ಭಾಷಾಂತರ ನಿರ್ದೇಶನಾಲಯ ಉಪ ನಿರ್ದೇಶಕ ಭಕ್ತರಾಜ ಪಾಟೀಲ ಅವರಿಗೆ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದ ಪ್ರಯುಕ್ತ ಅಭಿನಂದಿಸಲಾಯಿತು.

ಕರ್ನಾಟಕ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು.‌ ಕಾರ್ಯಕ್ರಮದಲ್ಲಿ ಸಾಹಿತಿಗಳು, ಕನ್ನಡಪರ ಚಿಂತಕರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ಶರಣರ ಪರಿಸರ ಕಾಳಜಿ ಎಲ್ಲರಿಗೂ ಮಾದರಿಯಾಗಲಿ : ಬಸವರಾಜ ಬಲ್ಲೂರ್

ಸರ್ಕಾರಿ ಮತ್ತು ಅರೆ ಸರ್ಕಾರಿ ನೌಪಸ ಸಂಘದ ಬೀದರ್ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮತ್ತು ಬೀದರ ಅನುದಾನಿತ ಪದವಿ ಪೂರ್ವ ಕಾಲೇಜು ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ವಿಜಯಕುಮಾರ ಕೆ.ಪಾಟೀಲ, ರೂಪಾ ಪಾಟೀಲ್‌, ಸಿದ್ದರೂಢ ಭಾಲ್ಕೆ, ದೇವೆಂದ್ರ ಕರಂಜೆ ಸೇರಿದಂತೆ ಮತ್ತಿತರರು ಉಪಸ್ಥಿತರರಿದ್ದರು. ಬೀದರ್ ತಾಲೂಕು ಕಸಾಪ ಅಧ್ಯಕ್ಷ ಟಿ.ಎಂ.ಮಚ್ಚೆ ಸ್ವಾಗತಿಸಿದರು, ವೀರಶೆಟ್ಟಿ ಚನಶಟ್ಟಿ ವಂದಿಸಿದರು. ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ಉಮೇಶ ಜಾಬಾ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...