ಬೀದರ್‌ | ಅಕ್ಕ ಮಹಾದೇವಿ ವಚನ ಮನುಕುಲಕ್ಕೆ ದಾರಿದೀಪ : ಪ್ರಭುದೇವ ಸ್ವಾಮೀಜಿ

Date:

ವಚನಕಾರ್ತಿ ಅಕ್ಕ ಮಹಾದೇವಿ ವಚನಗಳು ಆಧ್ಯಾತ್ಮಿಕ ಆಗರವಾಗಿದ್ದು, ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಹೇಳಿದರು.

ಲಿಂಗಾಯತ ಮಹಾ ಮಠದ ವತಿಯಿಂದ ಇಲ್ಲಿಯ ಬಸವಗಿರಿಯಲ್ಲಿ ಶನಿವಾರ ನಡೆದ ಅಕ್ಕ ಮಹಾದೇವಿ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿ, ʼಅಕ್ಕನ ಆದರ್ಶ ಮೈಗೂಡಿಸಿಕೊಂಡವರ ಬಾಳು ಬಂಗಾರವಾಗುತ್ತದೆʼ ಎಂದು ತಿಳಿಸಿದರು.

ʼಅಕ್ಕ ಉಡುತಡಿಯಲ್ಲಿ ಜನಿಸಿ, ಕೈ ಹಿಡಿಯಲು ಮುಂದಾದ ರಾಜ ಕೌಶಿಕನನ್ನು ಧಿಕ್ಕರಿಸಿ, ದೇವನೆ ಪತಿಯೆಂದು ಬಸವಣ್ಣನವರ ಕಲ್ಯಾಣಕ್ಕೆ ಆಗಮಿಸಿದ್ದು ಬಹು ರೋಚಕ ಹೆಜ್ಜೆ. ಅನೇಕ ಕಷ್ಟ-ನಷ್ಟಗಳನ್ನು ಅನುಭವಿಸಿ, ಲಿಂಗಾಂಗ ಸಾಮರಸ್ಯದ ಗುರಿ ಸಾಧಿಸಿದ್ದು ವಿಶೇಷ. ಪ್ರಭುದೇವರ ಪರೀಕ್ಷೆ ಎದುರಿಸಿ, ಸೈ ಎನಿಸಿಕೊಂಡು ಅನುಭವ ಮಂಟಪದ ಮಾಣಿಕ್ಯವಾಗಿ ಪ್ರಜ್ವಲಿಸಿದರು. ಶ್ರೀಶೈಲ ಸಮೀಪದ ಕದಳಿಯಲ್ಲಿ ಐಕ್ಯವಾದ ಅಕ್ಕ ವಿಶ್ವದ ಮೊದಲ ಕವಯತ್ರಿʼ ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಯೋಗ ಸಾಧಕರ ಕೂಟದಿಂದ ಆಯೋಜಿಸಿದ್ದ ಸಾಮೂಹಿಕ ಶಿವಯೋಗದಲ್ಲಿ ಪ್ರಾಣ ಲಿಂಗಾರ್ಚನೆ ಹೇಳಿಕೊಟ್ಟ ಸಾಹಿತಿ ರಮೇಶ ಮಠಪತಿ ಅವರು ಮಾತನಾಡಿ, ʼಕಿರಿಯ ವಯಸ್ಸಿನಲ್ಲೇ ಹಿರಿಯ ಸಾಧನೆಗೈದ ಜಗದಕ್ಕ ಅಮರಳಾದಳು. ಅಕ್ಕ ಆತ್ಮವಿಶ್ವಾಸ, ಧೈರ್ಯದ ಸಂಕೇತ. ಅಕ್ಕನ ಪ್ರತಿ ಉಸಿರು ಹೋರಾಟಮಯʼ ಎಂದು ಹೇಳಿದರು.

ʼ900 ವರ್ಷಗಳ ಹಿಂದೆ ಯೌವ್ವನದಲ್ಲಿ ಏಕಾಂಗಿಯಾಗಿ ಉಡುತಡಿಯಿಂದ ಕಲ್ಯಾಣಕ್ಕೆ, ಕಲ್ಯಾಣದಿಂದ ಕದಳಿ ವರೆಗೆ ಕಾಲ್ನಡಿಗೆಯಲ್ಲೇ ಸಂಚರಿಸಿದ್ದು ಅಸಾಮಾನ್ಯ. ಅಕ್ಕನಂಥ ಧೀರ ಮಹಿಳೆ ಇತಿಹಾಸದಲ್ಲಿ ಮತ್ತಾರನ್ನು ಕಾಣಲಾರೇವು. ಅಕ್ಕ ಮಹಾದೇವಿ ಕನ್ನಡ ನಾಡಿನವರೆಂಬುದು ಹೆಮ್ಮೆಯ ಸಂಗತಿ. ಅಕ್ಕನ ದರ್ಶನದಿಂದ ಜೀವನ ಪಾವನವಾಗುತ್ತದೆʼ ಎಂದು ತಿಳಿಸಿದರು.

ನೀಲಮ್ಮನ ಬಳಗದ ಸಹೋದರಿಯರು ಅಕ್ಕನ ತೊಟ್ಟಿಲು ಇಟ್ಟು, ಜೋಗುಳ ಹಾಡಿ ನಲಿದರು. ಪ್ರತಿ ಮನೆಯಲ್ಲಿ ಅಕ್ಕ ಮಹಾದೇವಿ ಜನಿಸಿ ಬರಲೆಂದು ಹರಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ ಸಾಹಿತ್ಯ ಹೊರ ಜಗತ್ತಿಗೆ ಪಸರಿಸುವ ಅಗತ್ಯವಿದೆ : ವಿಕ್ರಮ ವಿಸಾಜಿ

ಪ್ರಮುಖರಾದ ಅಶೋಕ ಎಲಿ, ಮಾಣಿಕಪ್ಪ ಗೋರನಾಳೆ, ರಾಜಕುಮಾರ ಪಾಟೀಲ, ಚನ್ನಬಸಪ್ಪ ಹಂಗರಗಿ, ಅಣವೀರ ಕೊಡಂಬಲ, ಮಾರುತಿ ಪಾಟೀಲ, ಜಗನ್ನಾಥ ಚಿಮಕೋಡೆ, ವೈಜಿನಾಥ ಹುಣಸಗೇರಿ, ವೀರೇಶ್ ರೂಗನ್, ಅಭಿಷೇಕ ಮಠಪತಿ ಉಪಸ್ಥಿತರಿದ್ದರು.
ಪರುಷ ಕಟ್ಟೆಯ ಚನ್ನಬಸವಣ್ಣ ಪ್ರಾರ್ಥನೆ ನಡೆಸಿಕೊಟ್ಟರು. ಶ್ರೀದೇವಿ ಮಠಪತಿ, ನೀಲಮ್ಮ ರೂಗನ್, ಲಾವಣ್ಯ ಹಂಗರಗಿ, ಶಾಮಲಾ ಎಲಿ ಸುಶ್ರಾವ್ಯವಾಗಿ ವಚನ ಗಾಯನ ಮಾಡಿದರು. ಸಿ.ಎಸ್. ಗಣಾಚಾರಿ ಭಕ್ತಿ ದಾಸೋಹಗೈದರು. ಸಂಗೀತಾ ಗಣಚಾರಿ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...