ಬೀದರ್‌ | ಅಂಗವಿಕಲ ಸಹೋದರಿಯರಿಗೆ ಕೆಎಲ್‌ಇ ಸೊಸೈಟಿಯಿಂದ ʼಸಹಾಯ ಹಸ್ತʼ

Date:

ಹುಲಸೂರ ತಾಲೂಕಿನ ಮಿರಕಲ್‌ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಂಜರವಾಡಿ ಗ್ರಾಮದಲ್ಲಿ ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಶಾಂತಾ ತ್ರಿಮುಖ ಹಾಗೂ ಚಂದ್ರಕಲಾ ತ್ರಿಮುಖ ಎಂಬ ಅಂಗವಿಕಲ ಸಹೋದರಿಯರಿಗೆ ಕರ್ನಾಟಕ ಲೇಬರ್‌ ಎಜ್ಯೂಕೇಶನ್‌ ಸೊಸೈಟಿಯ ನಿರ್ದೇಶಕಿ ಕ್ರಾಂತಿ ಬಸಪ್ಪಾ ಕಲವಾಡಿಕರ್ ಅವರು ಭಾನುವಾರ ಮನೆಗೆ ಭೇಟಿ ನೀಡಿ ಆಹಾರ ಸಾಮಾಗ್ರಿ ಹಾಗೂ ವೈಯಕ್ತಿಕ ಧನ ಸಹಾಯ ಮಾಡಿದರು.

ಈ ಕುರಿತು ʼಈದಿನ.ಕಾಮ್‌ʼ ನಲ್ಲಿ (ಆ.12) ರಂದು ʼಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತʼ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.

ವರದಿಗೆ ಸ್ಪಂದಿಸಿದ ಅವರು ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಕುಟುಂಬಕ್ಕೆ ಕೈಲಾದಷ್ಟು ಸಹಕಾರ ಮಾಡಬೇಕೆಂದು ಮನೆಗೆ ಭೇಟಿ ನೀಡಿ ಅಕ್ಕಿ, ಗೋಧಿ ಹಿಟ್ಟು, ಸಕ್ಕರೆ, ಎಣ್ಣೆ ಸೇರಿದಂತೆ ಇತರೆ ಅವಶ್ಯ ಆಹಾರ ಸಾಮಾಗ್ರಿಗಳು ವಿತರಿಸಿ ಕುಟುಂಬಸ್ಥರ ಸಮಸ್ಯೆ ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದೇ ಕುಟುಂಬದಲ್ಲಿ ಅಂಗವೈಕಲ್ಯದಿಂದ ಬಳಲುತ್ತಿರುವ ನಿರ್ಗತಿಕರಿದ್ದರೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಹುಲಸೂರ ತಾಲೂಕು ಪಂಚಾಯತಿ ಇಒ ಮಹಾದೇವ ಜಮ್ಮು ಅವರೊಂದಿಗೆ ಮಾತನಾಡಿ ಅಂಗವಿಕಲ ಸಹೋದರಿಯರಿಗೆ ಸರ್ಕಾರದಿಂದ ಸಿಗಬೇಕಾದ ಸೌಕರ್ಯ ಒದಗಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಕ್ರಾಂತಿ ಕಲವಾಡಿಕರ್‌ ಅವರು ಮಾತನಾಡಿ, ʼಶೈಕ್ಷಣಿಕ ಕ್ಷೇತ್ರದ ಸೇವಾ ಕಾರ್ಯದ ಜೊತೆಗೆ ಬಡವರು, ನಿರ್ಗತಿಕರು, ಶೋಷಿತರ ಪರ ಧ್ವನಿಯಾಗಿ ಕೆಲಸ ಮಾಡುವ ಉದ್ದೇಶದಿಂದ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಇಚ್ಛಾಶಕ್ತಿ ಹೊಂದಿರುವೆ, ಮುಂದಿನ ದಿನಗಳಲ್ಲಿ ಸರ್ಕಾರಿ ಸೌಲಭ್ಯ ವಂಚಿತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುವುದು ʼ ಎಂದು ತಿಳಿಸಿದರು.

WhatsApp Image 2025 08 17 at 7.11.04 PM

ʼನಮಗೆ ಒಟ್ಟು ಆರು ಜನ ಹೆಣ್ಣು ಮಕ್ಕಳು, ಅವರಲ್ಲಿ ಇಬ್ಬರು ಹುಟ್ಟು ಅಂಗವಿಕಲರು. ಆದರೆ ಇಲ್ಲಿಯವರೆಗೆ ಅವರಿಗೆ ಮಾಸಾಶನ ಬರುತ್ತಿಲ್ಲ. ಒಬ್ಬರಿಗೆ ಮಾಸಿಕ ₹800 ಬರುತ್ತಿತ್ತು, ಈಗ ಅದೂ ಸ್ಥಗಿತವಾಗಿದೆ. ಇದರಿಂದ ಉಪಜೀವನ ನಡೆಸಲು ತೊಂದರೆಯಾಗುತ್ತಿದೆ. ಕೂಡಲೇ ಸರ್ಕಾರ ನಮ್ಮ ಇಬ್ಬರು ಅಂಗವಿಕಲ ಹೆಣ್ಣು ಮಕ್ಕಳಿಗೆ ಮಾಸಿಕ ₹1,400 ಮಾಸಾಶನ ಮಂಜೂರು ಮಾಡಿಸಲು ಪೋಷಕರು ಸಹಕಾರ ಕೋರಿದರು.

ಇದನ್ನೂ ಓದಿ : ಬೀದರ್‌ | ಈದಿನ ಫಲಶೃತಿ: ವಿಕಲಚೇತನ ಸಹೋದರಿಯರ ಮನೆಗೆ ದೌಡಾಯಿಸಿದ ಅಧಿಕಾರಿಗಳು; ಮಾಸಾಶನದ ಭರವಸೆ

ಈ ಸಂದರ್ಭದಲ್ಲಿ ಕಲವಾಡಿಯ ಮಹಾತ್ಮ ಗಾಂಧಿ ಪ್ರೌಢ ಶಾಲೆ ಮುಖ್ಯಗುರು ಕಿರಣ ಭಾಟಸಾಂಗವಿ, ನಿವೃತ್ತ ಶಿಕ್ಷಕ ಜಯರಾಜ ದಾಬಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ನಂದಾದೀಪ ಬೊರಾಳೆ, ಆಕಾಶ ಸಿಂಧೆ ನಾಗರಾಳ, ನಿರ್ಮಲ ಕುಮಾರ್‌, ಪತ್ರಕರ್ತ ಬಾಲಾಜಿ ಕುಂಬಾರ್‌, ಸ್ಥಳೀಯರಾದ ಗಣೇಶ ಪಾಟೀಲ್‌, ಗುರುಪ್ರಸಾದ ಎಮ್‌ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...