ಬೀದರ್‌ | ಸಂಕಷ್ಟದಲ್ಲಿರುವ ಮಹಿಳೆಗೆ ಸಹಾಯಹಸ್ತ ಚಾಚಿದ ಕ್ರಾಂತಿ ಕಲವಾಡಿಕರ್‌ : ಮಾಸಿಕ ₹500 ನೀಡುವ ಭರವಸೆ

Date:

ಔರಾದ್‌ ತಾಲ್ಲೂಕಿನ ರಕ್ಷಾಳ (ಬಿ) ಗ್ರಾಮದಲ್ಲಿ ಸಂಕಷ್ಟದ ಬದುಕು ದೂಡುತ್ತಿರುವ ಶಿವಮ್ಮಾ ದಶರಥ ಎನ್ನುವ ಮಹಿಳೆಗೆ ಸಮಾಜ ಸೇವಕಿ, ಕೆ.ಎಲ್.ಇ ಸಂಸ್ಥೆಯ ನಿರ್ದೇಶಕಿ ಕ್ರಾಂತಿ ಕಲವಾಡಿಕರ್ ಅವರು ಮಹಿಳೆಗೆ ನೆರವಾಗುವ ಮೂಲಕ ಸಹಾಯಹಸ್ತ ಚಾಚಿದ್ದಾರೆ.

ಮಹಿಳೆ ಯಾರೊಬ್ಬರ ಆಶ್ರಯವಿಲ್ಲದೆ ಸಂಕಷ್ಟದ ಬದುಕು ನಡೆಸುತ್ತಿರುವ ಬಗ್ಗೆ ಗ್ರಾಮದ ರಾಜಕುಮಾರ ಮೇತ್ರೆ ಅವರು ಕ್ರಾಂತಿ ಕಲವಾಡಿಕರ್‌ ಅವರ ಗಮನಕ್ಕೆ ತಂದಿದ್ದರು. ಅದಕ್ಕೆ ಸ್ಪಂದಿಸಿ ಅವರು ಮಂಗಳವಾರ ಮಹಿಳೆಗೆ ಮನೆಗೆ ತೆರಳಿ ಆಹಾರ ಸಾಮಾಗ್ರಿ ಕಿಟ್‌ ಜೊತೆಗೆ ಜೀವಿತಾವಧಿ ತನಕ ಮಾಸಿಕ ₹500 ಕೊಡುವುದಾಗಿ ಭರವಸೆ ನೀಡಿದ್ದಾರೆ.

ಬಳಿಕ ಕ್ರಾಂತಿ ಕಲವಾಡಿಕರ್‌ ಅವರು ಮಾತನಾಡಿ, ʼಸಮಾಜದಲ್ಲಿ ಅನೇಕ ಜನರು ಜೀವನ ನಿರ್ವಹಣೆಗಾಗಿ ಪರದಾಡಬೇಕಾದ ಸ್ಥಿತಿ. ಅಂತವರನ್ನು ಗುರುತಿಸಿ ಸರ್ಕಾರದ ಸೌಲಭ್ಯ ಜೊತೆಗೆ ಅವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡುವುದು ಅಗತ್ಯವಿದೆ. ಬಡ, ನಿರ್ಗತಿಕ, ಅನಾಥರಿಗೆ ಸಹಾಯಧನ ಮಾಡುವುದೆಂದರೆ ದೇವರ ಸೇವೆ ಮಾಡಿದಂತಾಗುತ್ತದೆ. ಪ್ರತಿಯೊಬ್ಬರೂ ಶ್ರಮದ ಅಲ್ಪ ಹಣವನ್ನು ಸಮಾಜದ ಒಳಿತಿಗಾಗಿ ಮೀಸಲಿಡಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 10 09 at 6.04.31 AM
ಕೆ.ಎಲ್.ಇ ಸಂಸ್ಥೆಯ ನಿರ್ದೇಶಕಿ ಕ್ರಾಂತಿ ಕಲವಾಡಿಕರ್ ಅವರು ಶಿವಮ್ಮಾ ಅವರಿಗೆ ಆತ್ಮಸ್ಥೈರ್ಯ ತುಂಬಿ ಸಹಾಯಧನ ಒದಗಿಸಿದರು.

ಇದನ್ನೂ ಓದಿ : ಬೀದರ್‌ | ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ

ಈ ಸಂದರ್ಭದಲ್ಲಿ ಬ್ರೇನ್ ಪೌಂಡೇಶನ್ ಸಂಸ್ಥಾಪಕ ನಂದಾದೀಪ ಬೊರಳೆ, ಉಪನ್ಯಾಸಕ ರಮೇಶ ಪವಾರ್, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಾಜಿ ಪಾಟೀಲ್ ಪ್ರಮುಖರಾದ ಅನೀತಾ, ಶ್ರೀಕಾಂತ್ ಮೂಲಗೆ, ಮಹೇಶ್ ಮಾನಕೋಜಿ, ರಾಜಕುಮಾರ ರಕ್ಷಾಳ, ಶಾದುಲ, ವೀರನಾಥ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...