ಬೀದರ್‌ | ಶಾಲಾ ಅವ್ಯವಸ್ಥೆ ಸುಧಾರಣೆಗೆ ಮನೆ-ಮನೆಗೆ ಭಿಕ್ಷೆ ಬೇಡಿದ ಕೆಆರ್‌ಎಸ್ ಕಾರ್ಯಕರ್ತರು

Date:

ಔರಾದ್‌ ತಾಲೂಕಿನ ಬಲ್ಲೂರ(ಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆ ಸುಧಾರಣೆಗೆ ಸ್ಪಂದಿಸದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸೋಮವಾರ ಗ್ರಾಮದ ಮನೆ-ಮನೆಗೆ ಭಿಕ್ಷೆ ಬೇಡುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಬೆಳಿಗ್ಗೆ ಬಲ್ಲೂರ(ಜೆ) ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ʼನಿಮ್ಮ ಗ್ರಾಮದ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅದಕ್ಕೆ ನೀವು ದೇಣಿಗೆ ಕೊಡಿ, ಆ ಹಣದಿಂದ ನಾವಾದರೂ ನಿಮ್ಮೂರ ಶಾಲೆ ಸುಧಾರಣೆ ಮಾಡ್ತೇವೆʼ ಎಂದು ಹೇಳುತ್ತಾ ದೇಣಿಗೆ ಪಡೆದರು.

ಗ್ರಾಮದ ಒಂದು ಬಡಾವಣೆಗೆ ತೆರಳಿ ಭಿಕ್ಷೆ ಪಡೆದ ಕಾರ್ಯಕರ್ತರಿಗೆ ಕೆಲವರು ಸ್ಪಂದಿಸಿ ಹಣ ಹಾಕಿದ್ದಾರೆ. ಹೀಗಾಗಿ ಒಟ್ಟು ₹1,036 ಹಣ ಜಮೆಯಾಗಿದೆ ಎಂದು ಪಕ್ಷದ ಕಾರ್ಯಕರ್ತರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಲ್ಲೂರ (ಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು 1 ರಿಂದ 7ನೇ ತರಗತಿಯವರೆಗೆ ಇದೆ. ಈ ಶಾಲೆಯಲ್ಲಿ ಮೂರು ವರ್ಷಗಳ ಹಿಂದೆ 110 ಮಕ್ಕಳ ಸಂಖ್ಯೆ ಇತ್ತು. ಪ್ರಸಕ್ತ ವರ್ಷ ಆ ಸಂಖ್ಯೆ 19ಕ್ಕೆ ಕುಸಿದಿದೆ. ಶಾಲೆಯಲ್ಲಿ 4 ಕೊಠಡಿಗಳು ಶಿಥಿಲಗೊಂಡಿವೆ. ಇನ್ನು ಮೂಲಭೂತ ಸೌಕರ್ಯ ಕೊರತೆ ಕಾರಣಕ್ಕೆ ಪಾಲಕರು ಈ ಶಾಲೆಗೆ ಮಕ್ಕಳಿಗೆ ಸೇರಿಸಲು ಆಸಕ್ತಿ ತೋರುತ್ತಿಲ್ಲʼ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಣಮಂತ ಮಟ್ಟೆ ತಿಳಿಸಿದ್ದಾರೆ.

ʼಶಾಲಾ ಕೊಠಡಿ, ಮೂಲಸೌಕರ್ಯ ಸೇರಿದಂತೆ ಇತರೆ ಅವ್ಯವಸ್ಥೆ ಸರಿಪಡಿಸಬೇಕೆಂದು ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಕೌಠಾ(ಬಿ) ಗ್ರಾಮ ಪಂಚಾಯತಿ ಪಿಡಿಓ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿಯ ಮುಖ್ಯ ಅಧಿಕಾರಿಗಳಿಗೆ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಮನವಿ ಪತ್ರ ಸಲ್ಲಿಸುತ್ತಿದ್ದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ಸಣ್ಣ ಮಳೆಯಾದರೂ ಶಾಲಾ ಆವರಣದಲ್ಲಿ ನೀರು ಸಂಗ್ರಹಗೊಂಡು ಮಕ್ಕಳ ಓಡಾಟಕ್ಕೆ ತೊಂದರೆಯಾಗುತ್ತದೆʼ ಎಂದು ದೂರಿದ್ದಾರೆ.

WhatsApp Image 2025 10 27 at 9.55.05 PM
ಭಿಕ್ಷೆ ಬೇಡುವ ಅಭಿಯಾನಕ್ಕೆ ಸ್ಪಂದಿಸಿ ಮಹಿಳೆಯೊಬ್ಬರು ಹಣ ದೇಣಿಗೆ ನೀಡಿ ಬೆಂಬಲಿಸಿದರು.

ʼಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಇಂದು ಮೊದಲ ದಿನ ಒಂದು ಬಡಾವಣೆಯಲ್ಲಿ ಭಿಕ್ಷೆ ಬೇಡಿ ಹಣ ಸಂಗ್ರಹ ಮಾಡಲಾಗಿದೆ. ಇದೇ ರೀತಿ ಗ್ರಾಮದ ಎಲ್ಲಾ ಓಣಿಗಳಿಗೂ ತೆರಳಿ ಭಿಕ್ಷೆ ಬೇಡುವ ವಿನೂತನ ಅಭಿಯಾನ ಮುಂದುವರೆಯುತ್ತದೆ. ಆ ಹಣದಿಂದ ಶಾಲೆಯ ಶೌಚಾಲಯ, ಆಟದ ಮೈದಾನ, ಶುದ್ಧ ಕುಡಿಯುವ ನೀರು ಹಾಗೂ ತರಗತಿ ಕೊಠಡಿಗಳಂತಹ ಅಗತ್ಯ ಸೌಕರ್ಯಗಳ ಅಭಿವೃದ್ಧಿ ಮಾಡಿಸಲಾಗುವುದು. ದೇಣಿಗೆ ಹಣದ ಲೆಕ್ಕಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದುʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ದೆಹಲಿಯಲ್ಲಿ ಫೆ.12ರಂದು ಬುದ್ಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ ಆಂದೋಲನ

ಈ ಅಭಿಯಾನದಲ್ಲಿ ಕೆಆರ್‌ಎಸ್ ಜಿಲ್ಲಾ ಉಪಾಧ್ಯಕ್ಷ ಶಿವರಾಜ ಶ್ರೀಮಂಗಲೇ, ಕಾರ್ಯದರ್ಶಿ ವಿಠ್ಠಲರಾವ ಚಟ್ನಳ್ಕರ್ ಹಾಗೂ ಸಂಜುಕುಮಾರ್ ತುಗಾಂವೆ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...