ಬೀದರ್‌ | ಕುಂದು ಕೊರತೆ : ಅಪಾಯ ಆಹ್ವಾನಿಸುವ ಸೇತುವೆ ತಡೆಗೋಡೆ, ವಿದ್ಯುತ್‌ ಕಂಬ, ಚರಂಡಿ

Date:

ಜಿಲ್ಲೆಯ ವಿವಿಧ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ ಬೆಳಕು ಚೆಲ್ಲುವ ಕಾರ್ಯ ʼಈದಿನ.ಕಾಮ್‌ʼ ನಿರಂತರವಾಗಿ ಮಾಡುತ್ತಿದೆ.

ಈ ಕುರಿತು ಈದಿನ.ಕಾಮ್‌ ಬೀದರ್‌ ಮೀಡಿಯಾ ಸಹಾಯವಾಣಿಗೆ ಸಾರ್ವಜನಿಕರು ಕಳುಹಿಸಿದ ಕುಂದು ಕೊರತೆ ವರದಿ ಇಲ್ಲಿದೆ.

ಬೀದರ್‌ದಿಂದ ವಡಗಾಂವ(ದೇ) ಗ್ರಾಮ ಸೇರಿದಂತೆ ಹತ್ತಾರು ಪ್ರಮುಖ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕಂದಗೂಳ ಗ್ರಾಮದ ಬಳಿಯ ಸೇತುವೆಯ ಒಂದು ಬದಿಯ ತಡೆಗೋಡೆ ಶಿಥಿಲಗೊಂಡಿದ್ದು, ದುರಸ್ತಿ ಕಾರ್ಯಕ್ಕೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಗಣೇಶ ಚತುರ್ಥಿ ಸಂದರ್ಭದಲ್ಲಿ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಸೇತುವೆಯ ಒಂದು ಭಾಗ ಶಿಥಿಲಗೊಂಡಿದೆ. ಇದರಿಂದ ವಡಗಾಂವ್(ದೇ), ಚಿಂತಾಕಿ, ಜಮಗಿ ಸೇರಿದಂತೆ ಹತ್ತಾರು ಗ್ರಾಮಗಳ ಜನರು ನಿತ್ಯ ಸಂಚರಿಸುತ್ತಾರೆ. ಸೇತುವೆ ಶಿಥಿಲಗೊಂಡಿರುವುದರಿಂದ ಕೆಲ ದಿನಗಳ ಎಮ್ಮೆ ಕರು ಮಂಜಾ ನದಿಯಲ್ಲಿ ಬಿದ್ದು ಸಾವನಪ್ಪಿದ ಘಟನೆ ಜರುಗಿದೆ ಎಂದು ಸ್ಥಳೀಯರು ಹೇಳಿದರು.

WhatsApp Image 2024 11 04 at 12.17.14 PM
ಕಂದಗೂಳ ಗ್ರಾಮದ ಬಳಿಯ ಸೇತುವೆಯ ತಡೆಗೋಡೆ ಶಿಥಿಲಗೊಂಡಿರುವುದು.

ʼಈ ರಸ್ತೆಯಲ್ಲಿ ನಿತ್ಯ ತೆರಳುವ ಪ್ರಯಾಣಿಕರು, ರೈತಾಪಿ ವರ್ಗದವರು, ದನ ಕುರಿಗಾಯಿಗಳು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ದುಸ್ಥಿತಿ ಬಂದೊದಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಿ ಸೇತುವೆ ತಡೆಗೋಡೆ ನಿರ್ಮಿಸಿ, ಮುಂದೆ ಅನಾಹುತವಾಗದಂತೆ ಎಚ್ಚರವಹಿಸಬೇಕುʼ ಎಂದು ಖಾನಾಪುರ ಗ್ರಾಮಸ್ಥ ಕಾಶಿನಾಥ ಬೆಲ್ಲೆ ಆಗ್ರಹಿಸಿದ್ದಾರೆ.

ಚರಂಡಿ ಸ್ವಚ್ಛಗೊಳಿಸಿ :

ಔರಾದ ತಾಲೂಕಿನ ಸಂತಪೂರ ಗ್ರಾಮದ ವಾರ್ಡ್‌ ನಂ. 3ರಲ್ಲಿ ಸುಮಾರು ತಿಂಗಳಿನಿಂದ ಚರಂಡಿಯಲ್ಲಿ ನಿಯಮಿತವಾಗಿ ಸ್ವಚ್ಛಗೊಳಿಸದ ಕಾರಣ ನೀರು ಸರಾಗವಾಗಿ ಮುಂದಕ್ಕೆ ಹೋಗುತ್ತಿಲ್ಲ. ಸೊಳ್ಳೆಗಳ ಕಾಟ ಮಿತಿಮೀರಿದೆ. ಇದರಿಂದ ಗಬ್ಬು ವಾಸನೆ ಬರುತ್ತಿದ್ದು, ಸಾಂಕ್ರಾಮಿಕ ರೋಗದ ಭೀತಿಯೂ ಕಾಡುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌ ಪಿಡಿಒ, ಸದಸ್ಯರಿಗೆ ತಿಳಿಸಿದರೂ ಕ್ಯಾರೆ ಅನ್ನುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2024 11 04 at 12.15.33 PM
ಸಂತಪೂರ ಗ್ರಾಮದ ವಾರ್ಡ್-‌3ರಲ್ಲಿ ಚರಂಡಿಯಲ್ಲಿ ತ್ಯಾಜ್ಯ ಸಂಗ್ರಹವಾಗಿರುವುದು.

ʼಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತವಾಗಿರು ಸಂತಪೂರ ಗ್ರಾಮ ಪಂಚಾಯತ್‌ ಕೇಂದ್ರದ ಕೆಲ ವಾರ್ಡ್‌ಗಳಲ್ಲಿ ಸ್ವಚ್ಛತೆ ಇಲ್ಲದೇ ಇರುವುದು ವಿಪರ್ಯಾಸವಾಗಿದೆ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಚರಂಡಿ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡಬೇಕುʼ ಎಂದು ವಾರ್ಡ್‌ ನಿವಾಸಿ, ಕೆಆರ್‌ಎಸ್ ಪಕ್ಷದ ಮುಖಂಡ ವಿಠ್ಠಲರಾವ್‌ ಚಟ್ನಾಳಕರ್‌ ಒತ್ತಾಯಿಸಿದ್ದಾರೆ.

ಶಿಥಿಲಗೊಂಡ ವಿದ್ಯುತ್‌ ಕಂಬ ಬದಲಾಯಿಸಿ :

ಭಾಲ್ಕಿ ತಾಲೂಕಿನ ಬಾಳೂರ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಜೈನಾಪುರ ಗ್ರಾಮದ ಶಿವಪುತ್ರ ಕಾಶಿನಾಥ ಅವರ ಮನೆ ಎದುರುಗಡೆ ಇರುವ ವಿದ್ಯುತ್‌ ಕಂಬ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಕೂಡಲೇ ಕಂಬ ಬದಲಾಯಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

WhatsApp Image 2024 11 04 at 12.16.30 PM
ಶಿಥಿಲಗೊಂಡ ವಿದ್ಯುತ್‌ ಕಂಬ ಅಪಾಯ ಆಹ್ವಾನಿಸುತ್ತಿದೆ.

ಕಳೆದ ಹಲವು ತಿಂಗಳಿಂದ ವಿದ್ಯುತ್‌ ಕಂಬ ಶಿಥಿಲಗೊಂಡು ಕಬ್ಬಿಣದ ಸರಳು ತೇಲಿವೆ. ಈ ಕುರಿತು ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಎರಡು ತಿಂಗಳು ಕಳೆದರೂ ನಿರ್ಲಕ್ಷಿಸುತ್ತಿದ್ದಾರೆ. ವಿದ್ಯುತ್‌ ಕಂಬ ನೆಲಕ್ಕುರಳಿ ಅನಾಹುತ ಸಂಭವಿಸತ್ತದೆ ಎಂಬ ಮುನ್ನೆಚರಿಕೆಯಿಂದ ಸ್ಥಳೀಯರು ಕಂಬಕ್ಕೆ ಹಗ್ಗ ಕಟ್ಟಿ ನಿಲ್ಲಿಸಲಾಗಿದೆ. ಕಂಬ ಉರುಳಿದರೆ ಸುತ್ತಲಿನ ನಿವಾಸಿಗಳಿಗೆ, ದನಕರುಗಳಿಗೆ ಅಪಾಯ ಕಟ್ಟಿಟ್ಟಬುತ್ತಿ ಎಂಬಂತಿದೆ. ಈಗಲಾದರೂ ಅಧಿಕಾರಿಗಳು ವಿದ್ಯುತ್‌ ಕಂಬ ಬದಲಾಯಿಸಬೇಕುʼ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಜೋರು ಮಳೆಯಾದ್ರೆ ಅಂಗನವಾಡಿಗೆ ರಜೆ :

ಬೀದರ್‌ ತಾಲೂಕಿನ ರೇಕುಳಗಿ ಗ್ರಾಮದ ಅಂಗನವಾಡಿ ಕೇಂದ್ರ-1ರ ಎದುರುಗಡೆ ಸ್ವಚ್ಛತೆ ಎಂಬುದು ಮರಿಚೀಕೆಯಾಗಿದ್ದು, ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಹೋಗುವುದು ಕಷ್ಟಕರವಾಗಿದೆ.

ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿ ತೆರೆದ ಚರಂಡಿ ಹರಿಯುತ್ತದೆ. ಮಕ್ಕಳು ಅದನ್ನು ದಾಟಿಕೊಂಡು ಹೋಗಬೇಕು. ಅಯಾತಪ್ಪಿ ಚರಂಡಿಯಲ್ಲಿ ಬಿದ್ದರೆ ಅನಾಹುತ ಸಂಭವಿಸುವ ಆತಂಕವಿದೆ. ಇನ್ನು ಜೋರು ಮಳೆಯಾದರೆ ಅಂಗನವಾಗಿ ಕೇಂದ್ರ ಆವರಣ ಜಲಾವೃತವಾಗುತ್ತದೆ. ಹೆಚ್ಚಿನ ನೀರು ಸಂಗ್ರಹವಾಗುವ ಕಾರಣ ಮಕ್ಕಳು ಅಂಗನವಾಡಿಗೆ ಬರಲು ದಾರಿ ಇಲ್ಲದಿಂತಾಗುತ್ತದೆ. ಹೀಗಾಗಿ ಅಂದು ಅಂಗನವಾಡಿಗೆ ರಜೆ ಕೊಡುವುದು ಅನಿವಾರ್ಯ ಎಂಬಂತಾಗಿದೆʼ ಎಂದು ಗ್ರಾಮ ಪಂಚಾಯತ್‌ ಸದಸ್ಯ ಕ್ರಿಸ್ಟೋಫರ್ ದೂರಿದ್ದಾರೆ.

WhatsApp Image 2024 11 04 at 12.41.42 PM
ಬೀದರ್‌ ತಾಲೂಕಿನ ರೇಕುಳಗಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ-1ರ ಮುಂಭಾಗದಲ್ಲಿ ಅನೈರ್ಮಲ್ಯ

ʼಅಂಗನವಾಡಿ ಮುಂದೆ ಗ್ರಾಮದ ಚರಂಡಿ ನೀರು ಹರಿದು ಹೋಗುವ ಕಾರಣ ಸೊಳ್ಳೆ ಕಾಟ ಹೆಚ್ಚಾಗುತ್ತಿದೆ. ಚರಂಡಿ ದಾಟಿ ಹೋಗುವ ವೇಳೆ ಮಕ್ಕಳು ಚರಂಡಿಯಲ್ಲಿ ಬೀಳುವ ಭಯ ಕಾಡುತ್ತಿದೆ. ಕೂಡಲೇ ಕ್ಷೇತ್ರದ ಶಾಸಕರು, ಗ್ರಾಮ ಪಂಚಾಯತ್‌ ಅಧಿಕಾರಿಗಳು ಗಮನಹರಿಸಿ ಅಂಗನವಾಡಿ ಕೇಂದ್ರದ ಮುಂಭಾಗ ಸ್ವಚ್ಛಗೊಳಿಸಿ, ಸೂಕ್ತವಾದ ಚರಂಡಿ ನಿರ್ಮಾಣಕ್ಕೆ ಮುಂದಾಗಬೇಕುʼ ಎಂದು ಒತ್ತಾಯಿಸಿದ್ದಾರೆ.

  • ನಿಮ್ಮ ಊರು, ನಗರ, ಪಟ್ಟಣದ ಕುಂದು ಕೊರತೆಗಳ ಪೋಟೋ, ವಿಡಿಯೋ ಮಾಹಿತಿಯನ್ನು
    ಈದಿನ.ಕಾಮ್ ಮೀಡಿಯಾ ಬೀದರ್ ಸಹಾಯವಾಣಿ 9035053805 ವಾಟ್ಸಪ್ ನಂಬರ್‌ಗೆ ಕಳುಹಿಸಿ.
WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...