ಬೀದರ್‌ | ಮಳೆಗೆ ಜಮೀನು ಜಲಾವೃತ : ಬೆಳೆ ಹಾನಿ ಆತಂಕದಲ್ಲಿ ರೈತರು

Date:

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ.

ಸತತ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿ ಇರುವ ಹೊಲಗಳಲ್ಲಿ ಮಳೆ ನೀರು ನಿಂತಿದೆ. ಹೆಸರು, ಉದ್ದು, ತೊಗರಿ ಸೇರಿದಂತೆ ಕಬ್ಬು ತೋಟಗಾರಿಕೆ ಬೆಳೆಗಳು ನೀರಿನಲ್ಲಿ ಮುಳುಗುತ್ತಿವೆ. ಬಿತ್ತನೆಯಾದ ಕೆಲ ದಿನಗಳ ವೇಳೆ ಮಳೆ ಬಾರದಕ್ಕೆ ರೈತರು ಎದುರು ನೋಡುತ್ತಿದ್ದರು. ಇದೀಗ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆಗಳು ಹಚ್ಚಹಸಿರಿನಿಂದ ನಳನಳಿಸುವ ದೃಶ್ಯ ಒಂದು ಕಡೆಯಾದರೆ, ಬೆಳೆ ಹಾನಿಯ ಚಿಂತೆ ಮತ್ತೊಂದೆಡೆ ರೈತರನ್ನು ಕಾಡುತ್ತಿದೆ.

WhatsApp Image 2025 08 17 at 9.54.27 PM
ಬೀದರ್‌ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಿರ್ಜಾಪುರ (ಟಿ) ಗ್ರಾಮದಲ್ಲಿ ರೈತರ ಹೊಲದಲ್ಲಿ ನೀರು ಸಂಗ್ರಹಗೊಂಡಿರುವುದು.

ಬಿಡುವು ನೀಡದ ಮಳೆಯಿಂದ ರೈತರ ಕೃಷಿ ಚಟುವಟಿಕೆ ಸ್ತಬ್ಧಗೊಂಡಿವೆ. ಹೆಸರು ಮತ್ತು ಉದ್ದು ಬೆಳೆಗಳಿಗೆ ಕೀಟಗಳ ಹಾವಳಿ ನಿಯಂತ್ರಣಕ್ಕೆಂದು ಕೀಟನಾಶಕ ಸಿಂಪಡಿಸುವ ಕೆಲಸ ನಿಂತಿದೆ. ಕೆಲವೆಡೆ ಹೆಸರು ಕಟಾವಿಗೆ ಬಂದರೆ, ಇನ್ನೂ ಹಲವು ಕಡೆ ಕಾಯಿಯಾಗಿರುವ ಹಂತದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರಿ ಮಳೆ ಬರುತ್ತಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹೊಲಗಳಲ್ಲಿ ತೇವಾಂಶ ಅಧಿಕಗೊಂಡು ಕೆಸರು ಗದ್ದೆಯಾಗಿ ಮಾರ್ಪಟ್ಟಿವೆ. ನದಿ, ಜಲಾಶಯ, ಕೆರೆ, ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

ಇದನ್ನೂ ಓದಿ : ಬೀದರ್‌ | ಅಂಗವಿಕಲ ಸಹೋದರಿಯರಿಗೆ ಕೆಎಲ್‌ಇ ಸೊಸೈಟಿಯಿಂದ ʼಸಹಾಯ ಹಸ್ತʼ

‘ಕಾರಂಜಾ ಜಲಾಶಯ ಹರಿವು ಹೆಚ್ಚಾದ ಹಿನ್ನೆಲೆ ನೀರು ಹರಿಸಲಾಗುತ್ತಿದ್ದು, ಇದರಿಂದ ಜೋಳದಾಬಕಾ, ಗೋಧಿ ಹಿಪ್ಪರಗಾ ಸೇರಿದಂತೆ ವಿವಿಧೆಡೆ ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ. ಸರ್ಕಾರ ಶೀಘ್ರ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು’ ಎಂದು ಭಾಲ್ಕಿ ತಾಲೂಕಿನ ರೈತ ಸಿದ್ದು ಜಮಾದರ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...