ಬೀದರ್‌ | ವಿದ್ಯಾರ್ಥಿಗಳಿಗೆ ʼಗಣಿತ ಉದ್ಯಾನʼ ಪ್ರೇರಣೆಯಾಗಲಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

3,900 ಕ್ಕೂ ಹೆಚ್ಚು ಗಣಿತ ಸೂತ್ರಗಳು ರಚಿಸುವ ಮೂಲಕ ಶ್ರೀನಿವಾಸ್ ರಾಮಾನುಜನ್ ಅವರು ಜಾಗತಿಕ ಗಣಿತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸರಳ ಪದ್ಧತಿಯ ಮೂಲಕ ಲೆಕ್ಕ ಮಾಡುವುದನ್ನು ಕಲಿಸಿದ ರಾಮಾನುಜನ್ ಗಣಿತವನ್ನು ಸರಳೀಕರಿಸದರು. ಅವರ ಹೆಸರಿನ ಮೇಲೆ ನಿರ್ಮಿಸಲಾದ ʼಗಣಿತ ಉದ್ಯಾನʼ ವಿದ್ಯಾರ್ಥಿಗಳಿಗೆ ದೊಡ್ಡ ಪ್ರೇರಣೆಯಾಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ನುಡಿದರು.

ಬುಧವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಗದಲ್‌ನಲ್ಲಿ ಶ್ರೀನಿವಾಸ ರಾಮಾನುಜನ್ ಗಣಿತ ಉದ್ಯಾನ ಉದ್ಘಾಟಿಸಿ ಅವರು ಮಾತನಾಡಿದ ಅವರು, ʼಗಣಿತ ಕ್ಲೀಷ್ಟಕರವಲ್ಲ, ಬದಲಾಗಿ ಅತಿ ಸರಳ ಎನ್ನುವುದನ್ನು ವಿನ್ಯಾಸಗಳ ಮೂಲಕ ಈ ಗಣಿತ ಉದ್ಯಾನ ಕಲಿಸಿಕೊಡುತ್ತದೆ. ಇದನ್ನು ಅರ್ಥೈಸಿಕೊಂಡು ಮಕ್ಕಳು ಗಣಿತ ಮತ್ತು ಇತರೆ ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಕೀರ್ತಿ ತರಬೇಕು. ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರಂತರ ಶತ ಪ್ರತಿಶತ ಫಲಿತಾಂಶ ನೀಡುತ್ತಿರುವುದು ಶ್ಲಾಘನೀಯ. ಈ ವರ್ಷ 10 ರಲ್ಲಿ 3 ರ‍್ಯಾಂಕ್ ನೀಡಲು ಪ್ರಯತ್ನಿಸಬೇಕುʼ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ ಪಟವಾಡಿ ಮಾತನಾಡಿ, ʼಗಣಿತ ಅತ್ಯಂತ ಕಠಿಣ ಅನ್ನುವ ತಪ್ಪು ಕಲ್ಪನೆ ಜನಜನಿತವಾಗಿದೆ. ಗಣಿತವನ್ನು ಪ್ರೀತಿಸಿದರೆ ಅದರಷ್ಟು ಸರಳ ವಿಷಯ ಮತ್ತೊಂದಿಲ್ಲ. ಜೀವನದ ಸಂಕೀರ್ಣ ಸಮಸ್ಯೆ ಬಿಡಿಸುವ ಮನೋಬಲ ತುಂಬುವ ಗಣಿತವನ್ನು ಆಸಕ್ತಿಯಿಂದ ಕಲಿಯಬೇಕುʼ ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 10 at 5.20.02 PM
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಪ್ರಾಚಾರ್ಯ ಚೆನ್ನಬಸವ ಹೇಡೆ ಪ್ರಾಸ್ತಾವಿಕವಾಗಿ ಮಾತನಾಡಿ, ʼಗಣಿತ ಉದ್ಯಾನದ ಮೂಲಕ ಕಠಿಣ ಪರಿಕಲ್ಪನೆ ಸರಳೀಕರಣಗೊಳಿಸುವ ಕಾರ್ಯ ಮಾಡಲಾಗಿದೆ. ಅಧ್ಯಯನದಲ್ಲಿ ಆಸಕ್ತಿ ಹೆಚ್ಚಿಸಲು ಇದು ಪೂರಕವಾಗಿದೆ. ಈ ಉದ್ಯಾನದ ಸದುಪಯೋಗ ಮಕ್ಕಳು ಪಡೆದುಕೊಂಡರೆ ಉದ್ಯಾನ ನಿರ್ಮಿಸಿದಕ್ಕೂ ಸಾರ್ಥಕವಾಗುತ್ತದೆʼ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಸತಿ ಶಾಲೆಯಿಂದ ವರ್ಗಾವಣೆ ಹೊಂದಿದ ಗಣಿತ ಶಿಕ್ಷಕಿ ನಜಿಮಾ ಪರವಿನ್ ಹಾಗೂ ಉಪ ಪ್ರಾಂಶುಪಾಲರಾಗಿ ನಿಯುಕ್ತರಾದ ಗೌತಮ ಕುದರೆ ಅವರನ್ನು ಸನ್ಮಾನಿಸಲಾಯಿತು. ಉದ್ಯಾನ ಲೋಕಾರ್ಪಣೆ ಪ್ರಯುಕ್ತ ವಿದ್ಯಾರ್ಥಿಗಳು ತಯ್ಯಾರಿಸಿದ 25 ಗಣಿತ ಮಾದರಿಗಳ ಪ್ರದರ್ಶನ ಮತ್ತು ವಿವರಣೆ ನಡೆಸಿಕೊಡಲಾಯಿತು.

ಇದನ್ನೂ ಓದಿ : ಬಾಲಗಂಗಾಧರ ತಿಲಕರ ‘ಭಗವದ್ಗೀತಾವಾದ’ ಬಗ್ಗುಬಡಿದ ಬಾಬಾಸಾಹೇಬರು

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಂಗೀತಾ ಬಿರಾದಾರ, ಕ್ರೈಸ್ ಜಿಲ್ಲಾ ಸಮನ್ವಯ ಅಧಿಕಾರಿ ಶರಣಪ್ಪ ಬಿರಾದಾರ, ಪ್ರಾಂಶುಪಾಲ ಗೋವಿಂದ ತಾಮಗೋಳೆ, ವೀರಭದ್ರಪ್ಪ ಮಾಶೆಟ್ಟಿ, ವಿಜಯಕುಮಾರ ಅಕ್ಕಣ್ಣ, ಹಾವಪ್ಪ ಅಬ್ಬೆಂದೆ, ಪ್ರದೀಪ ನಿಡೋದೆ, ಸಿದ್ಧಲಿಂಗಯ್ಯ ಮಠಪತಿ, ಅಶೋಕ ರಾಠೋಡ, ಮಾಣಿಕ ಸಾಗರ, ಮುದಾಸ್ಸಿರ್ ಅಲಿ, ಶ್ರೀದೇವಿ ಸಾಲಿಮಠ, ಸವಿತಾ ಮಾಶೆಟ್ಟಿ, ವೈಭವಿ ಮಾಣಿಕ, ಶ್ರಾವಂತಿ ಅಂಬೆಸಿಂಗೆ, ಶಿವರಾಜ ನಳಗೀರೆ, ವಸಂತ ರಾಠೋಡ ಸೇರಿದಂತೆ ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...