ಬೀದರ್ | ಮಾಧ್ಯಮ ಶೋಷಿತರ ದನಿಯಾಗಿ ಬದಲಾಗಲಿ: ತಹಶೀಲ್ದಾರ್ ಶಿವಾನಂದ ಮೇತ್ರೆ

Date:

ಮನುಷ್ಯನ ಅಸಹಾಯಕ ಸಂದರ್ಭದಲ್ಲಿ ಸ್ಪಂದಿಸುವ ಗುಣ ಮತ್ತು ಹೊಣೆಗಾರಿಕೆ ಮಾಧ್ಯಮಕ್ಕಿರಲಿ. ದನಿಯಿಲ್ಲದವರ ಧ್ವನಿಯಾಗಿ ಮಾಧ್ಯಮ ಕಾರ್ಯನಿರ್ವಹಿಸಬೇಕು ಎಂದು ಬೀದರ್ ಜಿಲ್ಲೆಯ ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.

ಈದಿನ.ಕಾಮ್ ಹಾಗೂ ಬಸವಕಲ್ಯಾಣದ ಡಾ. ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನವು ಹುಲಸೂರಿನ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ‘ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು’ ಉಪನ್ಯಾಸ ಸಮಾರಂಭದಲ್ಲಿ ಅವರು ಮಾತನಾಡಿದರು. “ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಮಾಧ್ಯಮವನ್ನು ಉಳಿಸಿಕೊಳ್ಳುವುದೇ ಇಂದು ದೊಡ್ಡ ಸವಾಲಾಗಿದೆ” ಎಂದರು.

ಬಸವಕಲ್ಯಾಣದ ಉಪನ್ಯಾಸಕ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, “ಮಾಧ್ಯಮಗಳು ಲೋಕ ವಿಮರ್ಶೆಯ ಜತೆಗೆ ಸಾಂಸ್ಕೃತಿಕ ಸಂಶೋಧನೆಗೆ ಆಕರವಾಗಿವೆ. ನಮ್ಮ ದೇಶದ ಹಲವು ಚಳುವಳಿಗಳು ರೂಪುಗೊಂಡಿದ್ದೇ ಮುದ್ರಣ ಮಾಧ್ಯಮಗಳಿಂದ. ಜ್ಞಾನ ಮತ್ತು ಮಾಹಿತಿ ನೀಡುವ ಮಾಧ್ಯಮಗಳು ಮಾನವೀಯತೆಯ ತುಡಿತಗಳು ಮೈಗೂಡಿಸಿಕೊಂಡು ಕರ್ತವ್ಯ ನಿರ್ವಹಿಸಿದರೆ ಲೋಕದ ಬದಲಾವಣೆ ಸಾಧಿಸಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾತಂತ್ರ ಚಳುವಳಿ, ಕರ್ನಾಟಕ ಏಕೀಕರಣ, ರೈತ ಚಳುವಳಿ ಹೀಗೆ ಹಲವು ಚಳುವಳಿಗಳು ರೂಪಿಸಿದ ಮುದ್ರಣ ಮಾಧ್ಯಮ ಕನ್ನಡ ಸಾಹಿತ್ಯಿಕ ಜಗತ್ತು ಅತ್ಯಂತ ಎಚ್ಚರದಿಂದ ಕಟ್ಟಿವೆ. ವಿದ್ಯುನ್ಮಾನ ಮಾಧ್ಯಮ ಕಾರ್ಪೊರೇಟಿಕರಣಗೊಂಡು ಉದ್ಯಮವಾದ ಮೇಲೆ ಬದ್ಧತೆಗಿಂತ, ಜನಪರ ಕಾಳಜಿಗಿಂತ, ಲಾಭದ ಲೆಕ್ಕಾಚಾರ ಹೆಚ್ಚಾಯಿತು. ಬಂಡವಾಳ ಹೂಡಿಕೆ, ಟಿಆರ್‌ಪಿ ಲಕ್ಷಣಗಳು ಮಾಧ್ಯಮಕ್ಕೆ ಅಂಟಿಕೊಂಡಂತೆ ಮಾಧಯಮಗಳು ಅಂತಃಕರಣ ಕಳೆದುಕೊಂಡಿತು” ಎಂದು ವಿವರಿಸಿದರು.

“ರೈತರ ಆತ್ಮಹತ್ಯೆ ತಡೆದು ಸ್ವಾವಲಂಬಿ ಬದುಕು ರೂಪಿಸುವ, ಸಂಪಾದಕೀಯ ವರ್ಗದಲ್ಲಿ ಮಹಿಳೆಯರಿಗೆ ಪ್ರಾಮುಖ್ಯತೆ ನೀಡುವ, ಹಳ್ಳಿಗಳ ಅಭಿವೃದ್ಧಿ ಸಾಧಿಸುವ, ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ಬೆಳವಣ ಗೆ ಪಡೆಯುವ ಎಲ್ಲ ಸಾಧ್ಯತೆಗಳು ಮಾದ್ಯಮದಿಂದ ಆಗಬಹುದು. ಇಂಥಹ ದೃಷ್ಟಿ ಧೋರಣೆ ಮಾಧ್ಯಮ ನಿರಂತರ ಕಾಪಾಡಿಕೊಂಡು ಬರಲಿ” ಎಂದು ಅಭಿಪ್ರಾಯಪಟ್ಟರು.

ಈದಿನ.ಕಾಮ್ ಜಿಲ್ಲಾ ಸಂಯೋಜಕ ಬಾಲಾಜಿ ಕುಂಬಾರ ಮಾತನಾಡಿ, “ಜನಸಾಮಾನ್ಯರ ನೋವು, ಕಷ್ಟಗಳು, ಸಮಸ್ಯೆಗಳು ಸರಕಾರಕ್ಕೆ ತಲುಪಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಪತ್ರಿಕೋದ್ಯಮ ವ್ಯಾಪಾರವಲ್ಲ. ಅದು ಕಾಳಜಿಯ, ಕಳಕಳಿಯ ಕೇಂದ್ರವಾಗಿದೆ. ಮಾಧ್ಯಮಗಳು ಬಹುಜನರ ಮುಖವಾಗಬೇಕೆ ಹೊರತು ಕೆಲವು ಉದ್ಯಮಿಗಳ ಸ್ವತ್ತಾಗಬಾರದು. ಒಳ್ಳೆಯ ಪತ್ರಕರ್ತರಿಂದಲೇ ಸಾಮಾಜಿಕ ಬದಲಾವಣೆ ಸಾಧ್ಯ. ದೇಶದ ಎಲ್ಲ ಕ್ಷೇತ್ರಗಳ ಬದಲಾವಣೆಗೆ ಮಾಧ್ಯಮಗಳ ಕೆಲಸ ಮುಖ್ಯ. ಮಾಧ್ಯ್ಯಮ ದೇಶದ ಉರ್ಧ್ವಮುಖಿ ಬೆಳವಣಿಗೆಗೆ ಶ್ರಮಿಸಬೇಕು” ಎಂದರು.

ಕಸಾಪ ತಾಲೂಕು ಉಪಾಧ್ಯಕ್ಷ ಬಸವಕುಮಾರ ಕವಟೆ ಮಾತನಾಡಿ, “ಸಮಾಜಕ್ಕೆ, ಸರಕಾರಕ್ಕೆ ಎಚ್ಚರಿಸುವ ಕೆಲಸ ಮಾಧ್ಯಮಗಳಿಂದ ನಿರಂತರ ನಡೆಯಬೇಕು. ಮಾಧ್ಯಮಗಳಿಂದ ಜ್ಞಾನ ವೃದ್ಧಿಸುವ ಜತೆಗೆ ಸಂವಿಧಾನದ ನಾಲ್ಕನೇ ಅಂಗವಾಗಿ ಎಲ್ಲ ಕಾಲಕ್ಕೂ ಜನರನ್ನು ಸ್ಪಂದಿಸುತ್ತಿರಬೇಕು” ಎಂದರು.

ಕಾಲೇಜು ಪ್ರಾಚಾರ್ಯ ಪ್ರೊ. ಮಲ್ಲಿಕಾರ್ಜುನ ಕಾಂಬಳೆ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಸಿದ್ರಾಮಪ್ಪ ಬಣಗಾರ ನಿರೂಪಿಸಿ ಸ್ವಾಗತಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...