ಬೀದರ್‌ | ಬೊಮ್ಮಗೊಂಡೇಶ್ವರ ತತ್ವಗಳ ಪ್ರಚಾರ ಆಗಲಿ : ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

Date:

ಮಹಾತ್ಮ ಬೊಮ್ಮಗೊಂಡೇಶ್ವರ ತತ್ವಗಳ ಹೆಚ್ಚು ಹೆಚ್ಚು ಪ್ರಚಾರ ಆಗಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವದಲ್ಲಿ ಅವರು ಮಾತನಾಡಿ, ʼಎಲ್ಲರೂ ಬೊಮ್ಮಗೊಂಡೇಶ್ವರ ಇತಿಹಾಸ ಅರಿಯಬೇಕು. ಅವರ ಆದರ್ಶ ತತ್ವಗಳನ್ನು ಪಾಲಿಸಬೇಕುʼ ಎಂದು ತಿಳಿಸಿದರು.

ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ʼಬೊಮ್ಮಗೊಂಡೇಶ್ವರ ಕುರಿತು ಹೆಚ್ಚಿನ ಕೃತಿಗಳು ಹೊರ ಬರಬೇಕುʼ ಎಂದು ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ಮಾತನಾಡಿ, ʼಬೊಮ್ಮಗೊಂಡೇಶ್ವರ ಜೀವನ ಮತ್ತು ಸಾಧನೆಗಳನ್ನು ಯುವ ಪೀಳಿಗೆಗೆ ತಿಳಿಸಲು ಉತ್ಸವ ಹಮ್ಮಿಕೊಳ್ಳಲಾಗಿದೆ. ಎಲ್ಲರ ಸಹಕಾರದಿಂದ ಉತ್ಸವ ಯಶಸ್ವಿಯಾಗಿದೆʼ ಎಂದು ತಿಳಿಸಿದರು.

ಮಹಾತ್ಮ ಬೊಮ್ಮಗೊಂಡೇಶ್ವರ ಪ್ರಶಸ್ತಿ ಸ್ವೀಕರಿಸಿದ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ.ಎಂ. ಮೇತ್ರಿ ಅವರು ಬೊಮ್ಮಗೊಂಡೇಶ್ವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

WhatsApp Image 2025 03 25 at 6.38.33 AM

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬಿಡಿಎ ಮಾಜಿ ಅಧ್ಯಕ್ಷ ಮುರಳಿಧರ ಎಕಲಾರಕರ್ ಮಾತನಾಡಿದರು. ಸಾಹಿತಿ ಸುನಿತಾ ಕೂಡ್ಲಿಕರ್ ರಚಿತ ಸಾಂಸ್ಕೃತಿಕ ವೀರ ಬೊಮ್ಮಗೊಂಡೇಶ್ವರ ಕೃತಿ ಬಿಡುಗಡೆ ಮಾಡಲಾಯಿತು.

ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ನಾಟ್ಯಶ್ರೀ ನೃತ್ಯಾಲಯ ಹಾಗೂ ವಿವಿಧ ಕಲಾ ತಂಡಗಳ ಕಲಾವಿದರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಸಭಿಕರ ಮನರಂಜಿಸಿತು.

ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಉತ್ಸವವನ್ನು ಉದ್ಘಾಟಿಸಿದರು. ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಕನಕ ಗುರುಪೀಠ ತಿಂಥಣಿ ಬ್ರಿಡ್ಜ್‍ನ ಬೀರಲಿಂಗದೇವರು, ಸಿದ್ಧಯ್ಯ ಆಧುನಿಕ ಒಡೆಯರ್, ಭಂತೆ ಸಂಘರಖ್ಖಿತ, ಉಚ್ಚಾದ ಬಾಲ ತಪಸ್ವಿ ಗೋಪಾಲ್ ಮುತ್ಯಾ, ಸರ್ದಾರ್ ಮನ್‍ಮೀತ್ ಸಿಂಗ್ ಗ್ರಂಥಿ ಮುಖಂಡರಾದ ಪಂಡಿತರಾವ್ ಚಿದ್ರಿ, ಗೀತಾ ಚಿದ್ರಿ, ಮಲ್ಲಿಕಾರ್ಜುನ ಬಿರಾದಾರ (ಪರಿಹಾರ), ಬಸವರಾಜ ಧನ್ನೂರ, ಸೋಮಶೇಖರ ಬಿರಾದಾರ, ಮಾಳಪ್ಪ ಅಡಸಾರೆ, ಸುರೇಶ್ ಚನಶೆಟ್ಟಿ, ಡಾ. ಸುಚಿತಾನಂದ್ ಮಲ್ಕಾಪುರೆ, ಡಾ. ಜಿ.ಬಿ. ಮಲ್ಲಿಕಾರ್ಜುನ, ಬಾಬುರಾವ್ ಬರಿದಾಬಾದ್, ಸಂಜೀವಕುಮಾರ ಅತಿವಾಳೆ, ದೇವಪ್ಪ ಜಾಂಬೋಳೆ, ವಿಜಯಕುಮಾರ ಸೋನಾರೆ, ಡಾ. ರಾಜಕುಮಾರ ಹೆಬ್ಬಾಳೆ, ಸುಭಾಷ್ ನಾಗೂರೆ, ಡಾ. ಶರಣಪ್ಪ ಮಲಗೊಂಡ, ಪ್ರಕಾಶ ದೇಶಮುಖ, ಹಣಮಂತ ಮಲ್ಕಾಪುರ, ವಿಜಯಕುಮಾರ ಡುಮ್ಮೆ, ವಿಜಯಕುಮಾರ ಮಲ್ಕಾಪುರೆ, ರವಿ ದುರ್ಗೆ, ಬಾಬುರಾವ್ ಕಾಶೆಂಪುರೆ, ಕೆ.ಡಿ. ಗಣೇಶ್, ಕಲ್ಲಪ್ಪ ರಾಯಗೊಂಡ, ತುಕಾರಾಮ ಚಿಮಕೋಡೆ, ಸಚಿನ್ ಮಲ್ಕಾಪುರ, ಮಲ್ಲಿಕಾರ್ಜುನ್ ಮುರ್ಕಿ, ಎಂ.ಪಿ. ವೈಜಿನಾಥ, ಸಿದ್ದು ಬಾವಗಿ ಮತ್ತಿತರರು ಇದ್ದರು. ನಾಗಪ್ಪ ಜಾನಕನೋರ ನಿರೂಪಿಸಿದರು. ವಿಜಯಕುಮಾರ ಬ್ಯಾಲಹಳ್ಳಿ ಸ್ವಾಗತಿಸಿದರು. ಸುನಿಲ್ ಚಿಲ್ಲರ್ಗಿ ವಂದಿಸಿದರು.

ಬೊಮ್ಮಗೊಂಡೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ :

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವ ನಿಮಿತ್ತ ನಗರದಲ್ಲಿ ಅಲಂಕೃತ ರಥದಲ್ಲಿ ಬೊಮ್ಮಗೊಂಡೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

WhatsApp Image 2025 03 25 at 6.38.44 AM

ಬೊಮ್ಮಗೊಂಡೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್‍ಸಿಂಗ್ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತ, ಗುದಗೆ ಆಸ್ಪತ್ರೆ ಕ್ರಾಸ್, ರೋಟರಿ ಕನ್ನಡಾಂಬೆ ವೃತ್ತದ ಮೂಲಕ ಹಾಯ್ದು ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರಕ್ಕೆ ತಲುಪಿ ಸಮಾರೋಪಗೊಂಡಿತು.

ಪುಷ್ಪಗಳಿಂದ ಶೃಂಗರಿಸಿದ್ದ ರಥದಲ್ಲಿ ಬೊಮ್ಮಗೊಂಡೇಶ್ವರ ಬೃಹತ್ ಭಾವಚಿತ್ರ ಇಡಲಾಗಿತ್ತು. ಡೊಳ್ಳು ಕುಣಿತ, ಲಂಬಾಣಿ ನೃತ್ಯ, ಬ್ಯಾಂಡ್, ಕೋಲಾಟ ತಂಡಗಳು ಮೆರವಣಿಗೆಯ ವೈಭವ ಹೆಚ್ಚಿಸಿದವು.

ಬೊಮ್ಮಗೊಂಡೇಶ್ವರ ವೇಷಧಾರಿಗಳು ನೋಡುಗರ ಗಮನ ಸೆಳೆದರು. ಮೆರವಣಿಗೆಯಲ್ಲಿ ಪಾಲ್ಗೊಂಡವರು ತಲೆ ಮೇಲೆ ಹಳದಿ ಟೊಪ್ಪಿಗೆ ಹಾಗೂ ಕೊರಳಲ್ಲಿ ಶಲ್ಯ ಧರಿಸಿದ್ದರು. ಗಣ್ಯರು, ಯುವಕರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಮೆರವಣಿಗೆ ಉದ್ದಕ್ಕೂ ಮಹಾತ್ಮ ಬೊಮ್ಮಗೊಂಡೇಶ್ವರರಿಗೆ ಜಯವಾಗಲಿ ಎಂಬ ಘೋಷಣೆ ಮೊಳಗಿದವು. ಭಂಡಾರ ಹಾರಿಸಲಾಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ನೇತೃತ್ವ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹುಲಸೂರ ಬಂದ್‌ ಭಾಗಶಃ ಯಶಸ್ವಿ : ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರ

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಚಿದ್ರಿ, ಬಿಡಿಎ ಮಾಜಿ ಅಧ್ಯಕ್ಷ ಮುರಳಿಧರ ಎಕಲಾಕರ್, ಮುಖಂಡರಾದ ಬಾಬುರಾವ್ ಮಲ್ಕಾಪುರ, ಮಲ್ಲಿಕಾರ್ಜುನ ಬಿರಾದಾರ(ಪರಿಹಾರ), ಮಾಳಪ್ಪ ಅಡಸಾರೆ, ಎಂ.ಎಸ್. ಕಟಗಿ, ದೇವಪ್ಪ ಚಾಂಬೋಳೆ, ಸುಭಾಷ್ ನಾಗೂರೆ, ಪಿ.ಎಸ್. ಇಟಕಂಪಳ್ಳಿ, ಕಲ್ಲಪ್ಪ ರಾಯಗೊಂಡ, ಮಲ್ಲಿಕಾರ್ಜುನ ಮುರ್ಕೆ, ಉದಯಕುಮಾರ ಬ್ಯಾಲಹಳ್ಳಿ, ಎಂ.ಪಿ. ವೈಜಿನಾಥ, ಸುನೀಲ್ ಚಿಲ್ಲರ್ಗಿ, ಗೋವಿಂದ ದುರ್ಗೆ, ಶಿವಕುಮಾರ ಹಾಲಹಿಪ್ಪರ್ಗಾ, ಲೋಕೇಶ ಮರ್ಜಾಪುರ, ಕಲ್ಲಪ್ಪ ಯರನಳ್ಳಿ, ಕಾಮಶೆಟ್ಟಿ ಘೋಡಂಪಳ್ಳಿ ಮತ್ತಿತರರು ಭಾಗವಹಿಸಿದ್ದರು. ಜಿಲ್ಲೆಯ ವಿವಿಧೆಡೆಯ ಗೊಂಡ ಸಮುದಾಯದ ಪ್ರತಿನಿಧಿಗಳು ಹಾಗೂ ಬೊಮ್ಮಗೊಂಡೇಶ್ವರ ಅನುಯಾಯಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...