ಬೀದರ್‌ | ಬಸವತತ್ವಕ್ಕೆ ಬದ್ಧರಾಗಿ ಬದುಕೋಣ : ಶಶಿಕಾಂತ ಶೆಂಬೆಳ್ಳಿ

Date:

ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಆಯೋಜಿಸಿದ್ದ ಮಾಸಿಕ ವಚನ ಮಂಟಪ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.

ʼಇಂದು ಬಸವ ತತ್ವದ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಬಸವಪರ ಸಂಘಟನೆಗಳು ಇನ್ನಷ್ಟು ಸಂಘಟಿತರಾಗಬೇಕು. ಬಸವಾನುಯಾಯಿಗಳು ಜಾಗೃತರಾಗಿರಬೇಕು. ಬಸವತತ್ವದ ಬೆಳವಣಿಗೆಗೆ ಶ್ರಮಿಸುತ್ತಿರುವವರನ್ನು ಎಲ್ಲರೂ ಪ್ರೋತ್ಸಾಹಿಸಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಸಾನಿಧ್ಯ ವಹಿಸಿ ಮಾತನಾಡಿ, ʼಬಸವಣ್ಣನವರು ಜಗಕ್ಕೆ ಜ್ಯೋತಿಯಾಗಿದ್ದರು. ಅವರ ಅನುಯಾಯಿಗಳು ವೈಯಕ್ತಿಕ ಬದುಕಿಗಾದರೂ ಜ್ಯೋತಿಯಾಗಬೇಕು. ಬಸವಣ್ಣನವರು ಜಗಜ್ಯೋತಿ ಎನಿಸಿಕೊಂಡ ಏಕೈಕ ಮಹಾಪುರುಷರು. ಆ ಪದವಿ ಇನ್ನಾರಿಗೂ ಇಲ್ಲʼ ಎಂದು ಹೇಳಿದರು.

ʼಬಸವರಾಜ ಧನ್ನೂರ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ವಚನಗಳ ಚಿಂತನ- ಮಂಥನಕ್ಕಾಗಿ ಮಾಸಿಕ ವಚನ ಮಂಟಪ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಪ್ರಶಂಸನೀಯʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಅವರು ʼಕರ್ತನಟ್ಟಿದಡೆ ಮರ್ತ್ಯದಲ್ಲಿ ಮಹಾಮನೆಯ ಕಟ್ಟಿದೆʼ ವಿಷಯ ಕುರಿತು ಮಾತನಾಡಿ, ʼಬಸವಣ್ಣನವರು 12ನೇ ಶತಮಾನದಲ್ಲಿ ಮರ್ತ್ಯದ ಮಹಾಮನೆ ಕಟ್ಟಿದ್ದರು. ಆ ಮಹಾಮನೆ ಪ್ರೀತಿ, ಆನಂದ, ಮಾನವೀಯತೆ, ಸಮಾನತೆಯಿಂದ ತುಂಬಿ ತುಳುಕುತ್ತಿತ್ತು. ಅಂತಹ ಮಹಾ ಮನೆ ಕಟ್ಟಿದ್ದಕ್ಕಾಗಿಯೇ ಜನರು ಬಸವಣ್ಣನವರತ್ತ ಆಕರ್ಷಿತರಾದರು. ಜಗತ್ತಿನ ಮೂಲೆ ಮೂಲಗಳಿಂದ ಕಲ್ಯಾಣದೆಡೆಗೆ ಬಂದರುʼ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ʼಸದ್ಯ ಬಸವತತ್ವ ಪ್ರಚಾರ ಹೆಚ್ಚಾಗಿ ಕರ್ನಾಟಕದಲ್ಲಿ ನಡೆಯುತ್ತಿದೆ. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬಸವತತ್ವ ಪಸರಿಸಲು ಮಠ-ಮಾನ್ಯಗಳು ಬಹುಭಾಷಾ ತತ್ವ ಪ್ರಚಾರಕರನ್ನು ತಯಾರು ಮಾಡಬೇಕಿದೆ. ಹಿಂದಿ, ಇಂಗ್ಲಿಷ್‍ನಲ್ಲಿ ಬಸವ ತತ್ವದ ಪ್ರವಚನ ಮಾಡುವವರ ಕೊರತೆಯಿದ್ದು, ಅದನ್ನು ನೀಗಿಸಬೇಕಿದೆʼ ಎಂದು ತಿಳಿಸಿದರು.

ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿದರು.ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಕೌನ್ಸಿಲ್ ಸದಸ್ಯರಾಗಿ ನೇಮಕಗೊಂಡ ಹಿರಿಯ ಸಿವಿಲ್ ಎಂಜಿನಿಯರ್ ಹಾವಶೆಟ್ಟಿ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಕಲಾವಿದ ಆದಿತ್ಯ ಪಾಂಚಾಳ ವಚನ ಗಾಯನ ನಡೆಸಿಕೊಟ್ಟರು.

ಇದನ್ನೂ ಓದಿ : ಬೀದರ್‌ | ರಿಶೈನ್‌ ಸಂಸ್ಥೆಯ ʼಹಸಿವು ಮುಕ್ತ ಸಮಾಜʼ ಕಾರ್ಯಕ್ಕೆ ಸಂಸದ ಸಾಗರ ಖಂಡ್ರೆ ಶ್ಲಾಘನೀಯ

ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಖಜಾಂಚಿ ಬಂಡೆಪ್ಪ ಗಡ್ಡೆ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಗೌರವ ಸಲಹೆಗಾರ ಶರಣಪ್ಪ ಮೈಲೂರಕರ್ ಲಾಡಗೇರಿ ಉಪಸ್ಥಿತರಿದ್ದರು. ಉಚಾ ಮಿರ್ಚೆ ಸ್ವಾಗತಿಸಿದರು. ಸ್ವರೂಪರಾಣಿ ಪಾಟೀಲ ನಿರೂಪಿಸಿದರು. ಉಮೇಶ ಗಾಯಗೊಂಡ ವಂದಿಸಿದರು. ರಾಜಪ್ಪ ಹಜ್ಜರಗಿ ಭಕ್ತಿ ದಾಸೋಹಗೈದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...