ಬೀದರ್‌ | ಡಿ.7ರಂದು ಉಸ್ಮಾನಾಬಾದ್‌ನಲ್ಲಿ ಲಿಂಗಾಯತ ಮಹಾರ‍್ಯಾಲಿ: ಚನ್ನಬಸವಾನಂದ ಶ್ರೀ

Date:

2025ರ ಡಿಸೆಂಬರ್ 7ರಂದು ಮಹಾರಾಷ್ಟ್ರದ ಉಸ್ಮಾನಾಬಾದನಲ್ಲಿ ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ವತಿಯಿಂದ ಲಿಂಗಾಯತ ಮಹಾರ‍್ಯಾಲಿ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಜಗದ್ಗುರು ಡಾ.ಚನ್ನಬಸವಾನಂದ ಸ್ವಾಮೀಜಿ ನುಡಿದರು.

ಬಸವಕಲ್ಯಾಣ ನಗರದ ಸಸ್ತಾಪುರ ಬಂಗ್ಲಾ ಸಮೀಪದ ಎಂ.ಎಂ. ಬೇಗ್ ಸಭಾಮಂಟಪದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಹಾಗೂ ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ಸಹಯೋಗದಲ್ಲಿ ನಡೆd 4ನೇ ಸ್ವಾಭಿಮಾನಿ ಕಲ್ಯಾಣ ಪರ್ವದ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಬೀದರ್ ಬಸವ ಮಂಟಪದ ಮಾತೆ ಸತ್ಯಾದೇವಿ ಅವರು ಮಾತನಾಡಿ, ʼಗುರು ಭಕ್ತಿಯನ್ನು ಮೈಗೂಡಿಸಿಕೊಂಡು ಶರಣರಿಗೆ ಶರಣಾರ್ಥಿ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸಂಘಟನೆ ಒಡೆಯದಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು. ರಾಷ್ಟ್ರೀಯ ಬಸವ ದಳ ಇಂದಿಗೂ ಗಟ್ಟಿಯಾಗಿರಲು ಧರ್ಮಶೃದ್ಧೆ, ತತ್ವನಿಷ್ಠೆ ಹಾಗೂ ಲಿಂಗಾನಂದ ಸ್ವಾಮೀಜಿ ಮತ್ತು ಮಾತೆ ಮಹಾದೇವಿ ಅವರ ಕಠಿಣ ಪರಿಶ್ರಮ ಕಾರಣವಾಗಿದೆ. ಸಂಘಟನೆಗೆ ಇನ್ನೂ ಹೆಚ್ಚಿನ ಒತ್ತುಕೊಡಿʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಮುನವಳ್ಳಿಯ ಶಿವಪುತ್ರ ಸ್ವಾಮೀಜಿ ಮಾತನಾಡಿ, ʼದೇವನೊಬ್ಬನೇ ತಂದೆ, ಮನುಷ್ಯರೆಲ್ಲರೂ ಒಂದೇ ಎನ್ನುವ ಶರಣರ ಸಂದೇಶ ಎಲ್ಲಾ ಧರ್ಮಿಯರಿಗೂ ಅನ್ವಯಿಸುತ್ತದೆ. ಏಕದೇವೋಪಾಸಕರಾಗಿ ಬದುಕಬೇಕು. ಬಸವಕಲ್ಯಾಣದ ಮಣ್ಣು ಹಣೆಗೆ ಹಚ್ಚಿಕೊಂಡರೆ ಬದುಕು ಸಾರ್ಥಕವಾಗುತ್ತದೆ. ಅವಿಮುಕ್ತ ಕ್ಷೇತ್ರ ಬಸವಕಲ್ಯಾಣವನ್ನು ಅಂತರಾಷ್ಟ್ರೀಯ ತಾಣವಾಗಿ ಮಾಡಲು ಎಲ್ಲರೂ ಪ್ರಯತ್ನಿಸಬೇಕುʼ ಎಂದರು.

ಖಾದ್ರಿ ವೆಲ್ಫೇರ್ ಸೊಸೈಟಿ ಧಾರವಾಡದ ಉಪಾಧ್ಯಕ್ಷ ಸೂಫಿ ಸಂತ ಪಿರೆ ತರಿಕತ್ ಅಬ್ದುಲ್ ರಜಾಕ್ ಮಾತನಾಡಿ, ʼಚನ್ನಬಸವಾನಂದ ಸ್ವಾಮೀಜಿ ಕಾರ್ಯ ಶ್ಲಾಘನೀಯ. ಅವರ ಹೋರಾಟಕ್ಕೆ ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.

ಆರು ನಿರ್ಣಯ ಮಂಡನೆ :

ಡಿ. 7ರಂದು ಮಹಾರಾಷ್ಟ್ರದ ಉಸ್ಮಾನಾಬಾದನಲ್ಲಿ ಲಿಂಗಾಯತ ಮಹಾರ‍್ಯಾಲಿ ಆಯೋಜನೆ. 2026ರ ಜನವರಿ ತಿಂಗಳಲ್ಲಿ ಲಿಂಗಾಯತ ಧರ್ಮಕ್ಕೆ ಮಾನ್ಯತೆಗಾಗಿ ʼದಿಲ್ಲಿ ಚಲೋʼ ಆಯೋಜನೆ. ನ್ಯಾ. ಗವಾಯಿ ಮೇಲೆ ಶೂ ಎಸೆದ ವಕೀಲ ಕಿಶೋರ ಮೇಲೆ ಕಾನೂನು ಕ್ರಮ ಕೈಗೊಳ್ಳದಿದ್ದರೆ ಹೋರಾಟ. ಕನ್ಹೇರಿ ಮಠದ ಸ್ವಾಮಿಗಳು ಬಸವತತ್ವದ ಸ್ವಾಮಿಗಳಿಗೆ ಅವಹೇಳನ ಮಾಡಿದ್ದು ಖಂಡಿಸುತ್ತೇವೆ. ನವೆಂಬರ್ ನಿಂದ ಕರ್ನಾಟಕ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಆರು ರಾಜ್ಯಗಳಲ್ಲಿ ಲಿಂಗಾಯತ ಧರ್ಮ ಜಾಗೃತಿ ಅಭಿಯಾನ ಆರಂಭಿಸುವುದು ಮತ್ತು ನವೆಂಬರ್ 14ಕ್ಕೆ ದುಬೈನಲ್ಲಿ ಚನ್ನಬಸವೇಶ್ವರ ಜಯಂತಿ ಆಚರಣೆ ಮಾಡುವ ನಿರ್ಣಯಗಳನ್ನು ಕೈಗೊಳ್ಳಲಾಯಿತು.

IMG 20251012 WA0063

ಕಾರ್ಯಕ್ರಮದಲ್ಲಿ ಕಲ್ಯಾಣಮಹಾಮನೆ ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ, ಮಾತೆ ಶಾಂತಾದೇವಿ, ಭಾಗ್ಯವಂತಿ ಮಾತಾಜಿ ಬೀದರ, ಪ್ರಮುಖರಾದ ಎಸ್.ದಿವಾಕರ್, ಬಸವರಾಜ ಪಾಟೀಲ ಶಿವಪುರ, ಶಶಿಕುಮಾರ ಪಾಟೀಲ, ಬಸವರಾಜ ಪಾಟೀಲ ಚಿಕ್ಕಪೇಟ, ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಪಾಟೀಲ ಹಾರೂರಗೇರಿ, ಕೆ.ಶರಣಪ್ರಸಾದ ಬೆಳಗಾವಿ, ಜೈರಾಜಹತ್ತಿ, ಸೇರಿದಂತೆ ಹಲವರಿದ್ದರು. ನಿವೃತ್ತ ಕೃಷಿ ವಿವಿ ಡೀನ್ ಡಾ.ಸುರೇಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಅಕ್ಕನಾಗಲಾಂಬಿಕಾ ಮಹಿಳಾ ಗಣದ ಶರಣೆಯರಿಂದ ಬಸವ ಪೂಜೆ ನೆರವೇರಿತು. ಶಿವಕುಮಾರ ಪಾರಾ ನಿರೂಪಿಸಿದರು. ಜ್ಯೊತಿ ಕಟಾಳೆ ಸ್ವಾಗತಿಸಿದರು. ದಿಪಾಲಿ ಬಿರಾದಾರ ವಂದಿಸಿದರು.

ಇದನ್ನೂ ಓದಿ : ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...