ಬೀದರ್‌ | ಲಿಂಗಾಯತ ಧರ್ಮಗ್ರಂಥ, ವಚನ ಸಾಹಿತ್ಯದ ಭವ್ಯ ಮೆರವಣಿಗೆ

Date:

ಬಸವ ಸೇವಾ ಪ್ರತಿಷ್ಠಾನದಿಂದ ಆಯೋಜಿಸಲಾದ 23ನೇ ವಚನ ವಿಜಯೋತ್ಸವ ಅಂಗವಾಗಿ ಬೀದರ್ ನಗರದ ಬಸವೇಶ್ವರ ವೃತ್ತದಿಂದ ಬಸವಗಿರಿಯವರೆಗೆ ಲಿಂಗಾಯತ ಧರ್ಮಗ್ರಂಥ, ವಚನ ಸಾಹಿತ್ಯದ ಭವ್ಯ ಮೆರವಣಿಗೆ ನಡೆಯಿತು.

ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ, ಶಿವಯೋಗೇಶ್ವರ ಮಹಾಸ್ವಾಮಿ, ಶಿವಾನಂದ ಮಹಾಸ್ವಾಮಿ, ಡಾ.ಗಂಗಾಂಬಿಕಾ ಅಕ್ಕ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಜೊತೆಯಾದರು.

ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ವಚನ ಪಠಣ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ʼಬಸವಣ್ಣ ಈ ಭೂಮಿಯ ಸಂಪತ್ತು, ಬಸವಣ್ಣನವರು ಬರೆದ ವಚನಗಳಿಗೆ ಡಾ.ಅಂಬೇಡ್ಕರ್‌ ಅವರು ಕಾನೂನು ರೂಪ ಕೊಟ್ಟು ಸಂವಿಧಾನ ರಚಿಸಿದರು. ಬಸವಣ್ಣ ಓರ್ವ ದಾರ್ಶನಿಕ, ಸಮಾನತೆಯ ಹರಿಕಾರರು, ಇವನಮ್ಮವ ಇವನಮ್ಮವ ಎಂದು ಎಲ್ಲರನ್ನೂ ಇಂಬಿಟ್ಟುಕೊಂಡ ಮಹಾಮಾನವತವಾದಿʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾನಿದ್ಯವಹಿಸಿದ ಡಾ.ಗಂಗಾಂಬಿಕಾ ಅಕ್ಕ ಮಾತನಾಡಿ, ʼಜಗ ಬದುಕಲಿ ಜನ ಬದುಕಲೆಂದು ಬಸವಾದಿ ಶರಣರು ಪ್ರಾಣತ್ಯಾಗ ಮಾಡಿ ವಚನ ಸಾಹಿತ್ಯವನ್ನು ಸಂರಕ್ಷಿಸಿದ್ದಾರೆ. ಕಲ್ಯಾಣ ಕ್ರಾಂತಿಯ ಫಲವಾಗಿ ಸ್ವಾತಂತ್ರ್ಯ, ಸಮಾನತೆಗೆ ಬೆಲೆ ಬಂದಿದೆʼ ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ʼವಚನಗಳನ್ನು ತಲೆಯ ಮೇಲೆ ಹೊತ್ತುಕೊಂಡು ಹುತ್ತವ ಬಡಿದೆ ಹಾವು ಸಾಯಬಲ್ಲದು ಎಂಬ ವಚನವನ್ನು ಪಠಿಸಿ, ಬಸವಣ್ಣನವರು ಜಗತ್ತಿಗೆ ನೀಡಿದ ಕಾಯಕ ಸಿದ್ಧಾಂತ ಅತ್ಯಂತ ಮಹತ್ವದ್ದಾಗಿದೆʼ ಎಂದರು.

WhatsApp Image 2025 02 12 at 10.24.20 PM

ಹೂವಿನಿಂದ ಅಲಂಕೃತವಾದ ವಚನ ಗ್ರಂಥ ಹೊತ್ತ ರಥವು ಮೆರವಣಿಗೆಯ ಕೇಂದ್ರ ಬಿಂದುವಾಗಿತ್ತು. ಶರಣ-ಶರಣೆಯರು ಬಿಳಿ ವಸ್ತ್ರ ಧರಿಸಿ ಷಟಸ್ಥಲ ಚಿಹ್ನೆ ಇರುವ ಸ್ಕಾರ್ಪ್, ತಲೆಯ ಮೇಲೆ ಟೋಪಿ ಧರಿಸಿ, ವಚನ ಗ್ರಂಥಗಳನ್ನು ತಲೆಯ ಮೇಲೆ ಹೊತ್ತು ಮೆರವಣಿಗೆಯಲ್ಲಿ‌ ಹೆಜ್ಜೆ ಹಾಕಿದರು. ಛತ್ರಿ ಚಾಮರಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು. ಡೊಳ್ಳು ಕುಣಿತ, ಹೆಜ್ಜೆ ಮೇಳ, ಭಜನಾ ಮೇಳ ಸೇರಿದಂತೆ ವಿವಿಧ ಕಲಾ ತಂಡಗಳು ಮೆರಗು ಹೆಚ್ಚಿಸಿದವು.

ಬಸವಣ್ಣ, ಅಲ್ಲಮ ಪ್ರಭು, ಅಕ್ಕಮಹಾದೇವಿ, ಸಿದ್ಧರಾಮ, ಚೆನ್ನಬಸವಣ್ಣ ವೇಷಧಾರಿಗಳು ಮುಂಚೂಣಿಯಲ್ಲಿದ್ದು ಗಮನ ಸೆಳೆದವು. ವಚನ ವಿಜಯೋತ್ಸವ ಮೆರವಣಿಗೆ ಸಮಿತಿ ಅಧ್ಯಕ್ಷ ಜಯರಾಜ ಖಂಡ್ರೆ ದಂಪತಿ ಗುರು ಪೂಜೆಗೈದರು. ಮುಖಂಡ ಗುರುನಾಥ ಕೊಳ್ಳೂರ ಷಟಸ್ಥಲ ಧ್ವಜಾರೋಹಣ ಮಾಡಿದರು. ಪಂಚಾಕ್ಷರಿ ಸ್ವಾಮಿಗಳು, ಮಹಾಲಿಂಗದೇವರು, ಶಿವಾನಂದ ದೇವರು ನೇತೃತ್ವ ವಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೈಹಿಡಿದ ನರೇಗಾ ಯೋಜನೆ; ಕೃಷಿಕನ ಬದುಕು ರಂಗೇರಿಸಿದ ಗುಲಾಬಿ ಹೂವು

ಮೆರವಣಿಗೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬಸವರಾಜ ಧನ್ನೂರು ಸೋಮಶೇಖರ ಗಾದಗಿ, ಬಸವರಾಜ ಪಾಟೀಲ ಅಷ್ಟೂರ, ಬವಸರಾಜ ಬುಳ್ಳಾ, ಬಸವರಾಜ ಭತಮುರ್ಗೆ, ಸುರೇಶ ಚನ್ನಶೆಟ್ಟಿ, ಬಾಬುವಾಲಿ, ಆನಂದ ದೇವಪ್ಪ, ಬಸವಣಪ್ಪ ನೇಳಗಿ, ರಾಜೇಂದ್ರಕುಮಾರ ಗಂದಗೆ, ರಾಜೇಂದ್ರ ಜೊನ್ನಿಕೇರಿ, ಪ್ರಕಾಶ ಟೊಣ್ಣೆ, ಶಶಿಧರ ಹೊಸಳ್ಳಿ, ಸಂತೋಷ ಪಾಟೀಲ ಮುಂತಾದವರು ಭಾಗವಹಿಸಿದರು. ಸುರೇಶ ಸ್ವಾಮಿ ನಿರೂಪಿಸಿದರು. ರವಿ ಪಾಪಡೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...