ಬೀದರ್ | ಸಂತಪೂರ ಪದವಿ ಪೂರ್ವ ಕಾಲೇಜಿನಲ್ಲಿ ‘ಸಾಕ್ಷರತಾ ಜಾಥಾ’ ಕಾರ್ಯಕ್ರಮ

Date:

ಜನರ ಜೀವನ ಮಟ್ಟ ಮತ್ತು ಕೌಶಲ್ಯವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಆಧುನಿಕ ಸಮಾಜದಲ್ಲಿ ನಿತ್ಯ ಬದುಕಿನ ಸಾಧನವಾದ ಶಿಕ್ಷಣವು ಬಡತನದ ವಿರುದ್ಧ ಹೋರಾಡಲು ಅಸ್ತ್ರವಾಗಿದೆ ಎಂದು ಔರಾದ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಓಂಪ್ರಕಾಶ್ ದಡ್ಡೆ ಅಭಿಪ್ರಾಯಪಟ್ಟರು.

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಗ್ರಾಮದ ಜನತಾ ಪ್ರವೀಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಸಾಕ್ಷರತಾ ಜಾಥಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪ್ರಾಚೀನ ಕಾಲದಲ್ಲಿ ನಮ್ಮ ದೇಶವು ಜ್ಞಾನ ಮತ್ತು ವಿಜ್ಞಾನದ ಅಧ್ಯಯನದಲ್ಲಿ ಪ್ರವರ್ತಕನಾಗಿದ್ದರಿಂದ ವಿಶ್ವಗುರು ಸ್ಥಾನವನ್ನು ಹೊಂದಿತ್ತು. ಅದನ್ನು ಮತ್ತೆ ಪಡೆಯಲು ಶಿಕ್ಷಣಕ್ಕೆ ಉತ್ತೇಜನ ನೀಡುವುದು ಅಗತ್ಯವಾಗಿದೆ” ಎಂದರು.

ಜಿಲ್ಲಾ ಸಾಕ್ಷರತಾ ಅಧಿಕಾರಿ ಶಿವರಾಜ ಪಾಟೀಲ ಮಾತನಾಡಿ, “ಸಂಪೂರ್ಣ ಸಾಕ್ಷರತೆ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬ ನಾಗರಿಕನ ಒಳಗೊಳ್ಳುವಿಕೆ ಮುಖ್ಯವಾಗಿರುತ್ತದೆ. ಸಂಪೂರ್ಣ ಸಾಕ್ಷರತೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಸಂಘ ಸಂಸ್ಥೆಗಳ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಕರ್ತ ಪರಮೇಶ ವಿಳಸಪೂರೆ ಮಾತನಾಡಿ, “ಕಲಿಕೆಗೆ ವಯಸ್ಸಿನ ಮಿತಿ ಇಲ್ಲ. ಯಾವುದೇ ವಯಸ್ಸಿನಲ್ಲಿ ಎಲ್ಲರೂ ಎಲ್ಲರಿಗಾಗಿ ಕಲಿಸಬೇಕು. ಇದರಿಂದ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಬಹುದು, ಜಗತ್ತಿನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯು ಸಾಮಾಜಿಕ ಮತ್ತು ವೈಯಕ್ತಿಕ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಸಾಕ್ಷರತಾ ದಿನದ ಆಚರಣೆಯ ಪ್ರಮುಖ ಉದ್ದೇಶವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ.ಶಿವರಾಜ ಜುಕಾಲೆ, ತಾಲೂಕು ಸಾಕ್ಷರತಾ ಅಧಿಕಾರಿ ವೆಂಕಟ್ ಕೋಳೆಕರ್, ಶಿವರಾಜ ಮಲ್ಕಾಪುರೆ, ರಮೇಶ್, ಕಲಾವಿದ ದೇವಿದಾಸ ಚಿಮ್ಕೊಡ್, ಬಕ್ಕಪ್ಪಾ ದಂಡಿನ್, ವಿರಶೆಟ್ಟಿ ಹಾಗೂ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...