ಬೀದರ್‌ | ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ-ಸಂಸ್ಕೃತಿ ಮುಖ್ಯ : ಮಹೇಶ ಪಾಟೀಲ್

Date:

ನಾಗರೀಕತೆ ನಿರ್ಮಾಣದಲ್ಲಿ ನಮ್ಮ ಮಾತೃಭಾಷೆ ಹಾಗೂ ಸಂಸ್ಕೃತಿ ತಳಪಾಯವಾಗಿರುತ್ತದೆ. ವ್ಯಕ್ತಿತ್ವ ವಿಕಸನಕ್ಕೆ ಸಂಸ್ಕೃತಿ, ಸಾಹಿತ್ಯ ಮುಖ್ಯ ಎಂದು ತಹಸೀಲ್ದಾರ್ ಮಹೇಶ ಪಾಟೀಲ್ ನುಡಿದರು.

ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ತಾಲೂಕು ಆಡಳಿತ ವತಿಯಿಂದ ಆಯೋಜಿಸಿರುವ ಕರುನಾಡು ಸಾಂಸ್ಕೃತಿಕ ಉತ್ಸವ ನಾಡು ನುಡಿ ಚಿಂತನೆ ಉಪನ್ಯಾಸ ಮಾಲಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ʼಕನ್ನಡ ನಾಡು ನುಡಿಗೆ ಉತ್ತರ ಕರ್ನಾಟಕದ ಕೊಡುಗೆ ಮರೆಯುವಂತಿಲ್ಲ. ಕನ್ನಡದ ಶ್ರೀಮಂತಿಕೆಗೆ ಮಹತ್ವದ ಕಾಣಿಕೆ ಕೊಟ್ಟ ವಚನ ಹಾಗೂ ದಾಸ ಸಾಹಿತ್ಯದ ಹುಟ್ಟು ನಮ್ಮ ನೆಲದಲ್ಲಿಯೇ ಇದೆ. ಭಾಷಾಪ್ರೇಮ, ಭಾಷಾಭಿಮಾನ ಮರೆತರೆ ದ್ವೀತಿಯ ದರ್ಜೆ ನಾಗರೀಕರಂತೆ ಬದುಕಬೇಕಾಗುತ್ತದೆ. ನಮ್ಮ ಗ್ರಾಮ, ನಮ್ಮ ಭಾಷೆಯ ಬಗ್ಗೆ ಅಭಿಮಾನವಿರಲಿʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ಅಧ್ಯಕ್ಷ ಬಿ.ಎಂ.ಅಮರವಾಡಿ ಮಾತನಾಡಿ, ʼಕನ್ನಡವೆಂದರೆ ಒಂದು ಭಾಷೆಯಲ್ಲ. ಅದು ಸಮಗ್ರ ಜೀವನ ಮೌಲ್ಯಗಳ ಸಂಗಮವಾಗಿದೆ. ಕನ್ನಡಪರ ಕಾಳಜಿ ಇಟ್ಟುಕೊಂಡು ಗಡಿಯಲ್ಲಿ ಕನ್ನಡದ ಬೆಳವಣಿಗೆಗೆ ವಿಶಿಷ್ಟ ಕಾರ್ಯಕ್ರಮಗಳು ಹಮ್ಮಿಕೊಂಡ ತಾಲೂಕು ಆಡಳಿತದ ಕಾರ್ಯ ಶ್ಲಾಘನೀಯʼ ಎಂದರು.

ಅಮರೇಶ್ವರ ಪದವಿ ಕಾಲೇಜು ಪ್ರಾಚಾರ್ಯೆ ಡಾ. ಪ್ರೇಮಾ ಹೂಗಾರ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಆರ್.ಪಿ ಮಠ ಮಾತನಾಡಿದರು.

ಸಮಾರಂಭದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ತಹಸೀಲ್ದಾರ್ ಮಹೇಶ ಪಾಟೀಲ್, ಹಲವು ಕನ್ನಡದ ಪ್ರಶ್ನೆಗಳು ಕೇಳಿ ಮಕ್ಕಳಲ್ಲಿನ ಕನ್ನಡ ಜ್ಞಾನದ ಕುರಿತು ಪರಿಶೀಲಿಸಿದರು. ಕನ್ನಡ ನಾಡು ನುಡಿ ವಿಚಾರಗಳು, ಕವಿಗಳು, ಲೇಖಕರು, ವಚನಕಾರರು, ಕೀರ್ತನೆಕಾರರು, ಕರ್ನಾಟಕ ಏಕೀಕರಣ, ರಾಜ್ಯೋತ್ಸವಕ್ಕೆ ಸಂಬಂಧಿಸಿದ ಪ್ರಶ್ನೆ ಕೇಳಿದರು.

ಇದನ್ನೂ ಓದಿ : ಔರಾದ್‌ | ಸೋಯಾ ಬಣವಿಗೆ ಬೆಂಕಿ : ₹1.20 ಲಕ್ಷ ಮೌಲ್ಯದ ಸೋಯಾ ನಾಶ

ಪತ್ರಕರ್ತ ಅಮರಸ್ವಾಮಿ ಸ್ಥಾವರಮಠ, ಕಸಾಪ ಸಂಚಾಲಕ ಅಶೋಕ ಶೆಂಬೆಳ್ಳೆ, ಉಪನ್ಯಾಸಕರಾದ ಉತ್ತಮ ಜಾಧವ, ಶಿವರಾಮ ರಾಠೋಡ, ಉತ್ತಮ ದಂಡೆ, ಸಿಕಂದರ್ ಚವ್ಹಾಣ, ಶೇಖ್ ಮುಜೀಬ್, ಪ್ರೀಯಾ ಮಿಲಿಂದ್ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...