ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಜುಲೈ12 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 81,508 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಕಕ್ಷಿದಾರರಿಗೆ ₹26.15 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಅವರ ಹಮ್ಮಿಕೊಳ್ಳಲು ನಿರ್ದೇಶನ ನೀಡಿದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಈ ಬಾರಿಯ ಲೋಕ ಅದಾಲತ್ನಲ್ಲಿ 10,697 ಪೆಂಡಿಂಗ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದ್ದು ₹11.05ಐ ಕೋಟಿ ಹಣವನ್ನು ಕಕ್ಷಿದಾರರಿಗೆ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ’ ಎಂದರು.
ಜಿಲ್ಲಾದ್ಯಂತ 70,811 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು ಹಾಗೂ ಕಕ್ಷಿದಾರರಿಗೆ ₹15.09 ಕೋಟಿ ಹಣವನ್ನು ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಎಂದರು.
ಇದನ್ನೂ ಓದಿ : ಮಾದಕ ದ್ರವ್ಯ ಸಾಗಾಟ ಆರೋಪ : ಕಲಬುರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಚ್ಚಾಟನೆ
‘ಈ ಲೋಕ ಆದಾಲತ್ನಲ್ಲಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ 3 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಗ್ಗೂಡಿಸಲಾಗಿದೆ. ನ್ಯಾಯಲಯಗಳಲ್ಲಿ ಬಾಕಿ ಇರುವ ಒಟ್ಟು 7 ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.





