ಬೀದರ್‌ | ಪೊಲೀಸ್‌ ಪೇದೆ ಮನೆ ಮೇಲೆ ಲೋಕಾಯುಕ್ತ ದಾಳಿ; ₹1.80 ಕೋಟಿ ಮೌಲ್ಯದ ಆಸ್ತಿ ಪತ್ತೆ

Date:

ಲೋಕಾಯುಕ್ತ ಪೊಲೀಸರು ಗುರುವಾರ ಬೀದರ್‌ ಜಿಲ್ಲೆಯ ಚಿಟಗುಪ್ಪ ಪೊಲೀಸ್‌ ಠಾಣೆಯ ಕಾನ್ಸ್‌ಟೆಬಲ್‌ ವಿಜಯಕುಮಾರ ಎಂಬುವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ಹಾಗೂ ಜಿಲ್ಲೆಯ ಹಲವೆಡೆ ದಾಳಿ ನಡೆಸಿದ್ದು, ₹1.80 ಕೋಟಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿರುವುದು ತಿಳಿದುಬಂದಿದೆ.

ಜಿಲ್ಲೆಯ ಹುಮನಾಬಾದ್‌ ಪಟ್ಟಣ, ಬೀದರ್‌ ತಾಲೂಕಿನ ಹೊಚಕನ್ನಳ್ಳಿ ಹಾಗೂ ಹಳ್ಳಿಕೇಡ್‌ (ಕೆ), ಚಿಟಗುಪ್ಪ ಪೊಲೀಸ್‌ ಠಾಣೆಯ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಗಿನ ಜಾವ ಏಕಕಾಲಕ್ಕೆ ದಾಳಿ ನಡೆಸಿದರು. ರಾತ್ರಿ 9.30ರ ವರೆಗೂ ಶೋಧ ಕಾರ್ಯ, ದಾಖಲೆಗಳ ಪರಿಶೀಲನೆ, ಆಸ್ತಿಯ ಮೌಲ್ಯ ಲೆಕ್ಕ ಹಾಕುವ ಪ್ರಕ್ರಿಯೆ ಮುಂದುವರೆಸಿದರು.

ಲೋಕಾಯುಕ್ತ ದಾಳಿ 2

ಬೀದರ್ ತಾಲೂಕಿನ ಹೊಚಕನ್ನಳ್ಳಿ ಹಾಗೂ ಹಳ್ಳಿಕೇಡ್ (ಕೆ) ಗ್ರಾಮದಲ್ಲಿ 15 ಎಕರೆ ಕೃಷಿ ಜಮೀನು, ಹುಮನಾಬಾದ್ ಪಟ್ಟಣದಲ್ಲಿ ಒಂದು ಬಂಗಲೆ, ಮೂರು ನಿವೇಶನ, ₹20 ಲಕ್ಷ ಮೌಲ್ಯದ ಜೀವ ವಿಮೆ, ಒಂದು ಕಾರು, ಮೂರು ದ್ವಿಚಕ್ರ ವಾಹನಗಳು,‌ ₹10 ಲಕ್ಷ ಮೌಲ್ಯದ ಗೃಹ ಬಳಕೆಯ ವಸ್ತುಗಳು, ₹5 ಲಕ್ಷ ಬೆಲೆಬಾಳುವ ಚಿನ್ನಾಭರಣಗಳು ಸೇರಿದಂತೆ ಇತರೆ ವಸ್ತುಗಳನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಕುಮಾರ ಅವರಿಗೆ ಸೇರಿದ ಲಾಕರ್‌, ಅಲ್ಮೇರಾ, ಕಾರಿನಲ್ಲಿ ಅವರಿಗೆ ಸಂಬಂಧಿಸಿದ ದಾಖಲೆ ಪತ್ರಗಳು, ನೇಮಕಾತಿ ದಾಖಲೆ, ಸೇವಾ ಮಾಹಿತಿ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್‌ ಲೋಕಾಯುಕ್ತ ಡಿವೈಎಸ್ಪಿ ಎನ್ ಎಂ ಓಲೇಕಾರ್‌ ನೇತೃತ್ವದ ಮೂರು ಪ್ರತ್ಯೇಕ ತಂಡಗಳು ದಾಳಿ ನಡೆಸಿವೆ. 

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಕ್ರಮ ಆಸ್ತಿ ಆರೋಪ; ಕಾನ್ಸ್‌ಟೇಬಲ್‌ ಮನೆ ಮೇಲೆ ಲೋಕಾಯುಕ್ತ ದಾಳಿ

“ದಾಖಲೆಗಳ ಪರಿಶೀಲನೆ, ಆಸ್ತಿ ಲೆಕ್ಕ ಹಾಕುವ ಕೆಲಸ ಇನ್ನೂ ಪ್ರಗತಿಯಲ್ಲಿದೆ. ಸದ್ಯ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ಆದರೆ, ಸರಿಸುಮಾರು 2 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಲೋಕಾಯುಕ್ತ ಪೊಲೀಸರೊಬ್ಬರು ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಯ ಕೆಳಹಂತದ ಸಿಬ್ಬಂದಿಯೊಬ್ಬರು ಅಪಾರ ಮೌಲ್ಯದ ಆಸ್ತಿ ಹೊಂದಿರುವ ವಿಷಯ ಎಲ್ಲೆಡೆ ಹರಡಿ ತೀವ್ರ ಚರ್ಚೆಗೆ ಹುಟ್ಟು ಹಾಕಿದ್ದು, ದಿನವಿಡೀ ಎಲ್ಲೆಡೆ ಇದೇ ವಿಷಯದ ಕುರಿತು ಚರ್ಚೆ ನಡೆದಿರುವುದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...