ಬೀದರ್‌ | ತಗ್ಗದ ಮಾಂಜ್ರಾ ಪ್ರವಾಹ : ನಿಟ್ಟೂರ(ಬಿ) ಸೇತುವೆ ಮುಳುಗಡೆ; ಸಂಚಾರ ಸ್ಥಗಿತ

Date:

ಜಿಲ್ಲಾದ್ಯಂತ ನಿನ್ನೆಯಿಂದ ಮಳೆ ಬಿಡುವು ಕೊಟ್ಟಿದ್ದರಿಂದ ರೈತಾಪಿ ವರ್ಗ ಒಂದಿಷ್ಟು ನಿಟ್ಟುಸಿರು ಬಿಟ್ಟರೂ ಪ್ರವಾಹ ಮಾತ್ರ ಇನ್ನೂ ತಗ್ಗಿಲ್ಲ. ಮಾಂಜ್ರಾ ನದಿ ಪಾತ್ರದ ಗ್ರಾಮಗಳ ಜನರ ಮೊಗದಲ್ಲಿ ನೆರೆ ಭೀತಿಯ ಛಾಯೆ ಆವರಿಸಿದೆ.

ಮಹಾರಾಷ್ಟ್ರದ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಬಿಟ್ಟಿರುವುದರಿಂದ ಮಾಂಜ್ರಾ ನದಿ ಈಗಲೂ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯ ಹುಲಸೂರ, ಭಾಲ್ಕಿ, ಕಮಲನಗರ, ಔರಾದ್‌ ಹಾಗೂ ಬೀದರ್‌ ತಾಲ್ಲೂಕಿನ ಹಲವು ಗ್ರಾಮಗಳ ನಡುವೆ ಈಗಲೂ ಸಂಪರ್ಕ ಕಡಿತಗೊಂಡಿದೆ. ಸಾವಿರಾರು ಎಕರೆ ಬೆಳೆ ಜಲಾವೃತಗೊಂಡಿದೆ.

ಭಾನುವಾರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಲಾಗುತ್ತಿದೆ. ಇದರಿಂದ ಮಾಂಜ್ರಾ ಮತ್ತಷ್ಟು ಭೋರ್ಗರೆಯುತ್ತಿದ್ದು, ಕೆಲವೆಡೆ ಮನೆಗಳಿಗೆ ನುಗ್ಗಿ ನುಗ್ಗಿದರೆ, ಹಲವು ಗ್ರಾಮಗಳಿಗೆ ತೆರಳುವ ರಸ್ತೆ ಸಂಪರ್ಕ ಕಡಿತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಂಜ್ರಾ ನದಿಗೆ ಹೆಚ್ಚಿನ ನೀರು ಹರಿಬಿಟ್ಟಿದ್ದರಿಂದ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮ ಸಮೀಪದ ಸೇತುವೆ ಮೇಲೆ ಸೋಮವಾರ ಬೆಳಿಗ್ಗೆಯಿಂದ ನೀರು ಬರಲಾರಂಭಿಸಿತು. ಸಂಜೆ ಪೊಲೀಸ್‌ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ಸೇತುವೆ ಮೇಲಿಂದ ಸಂಚಾರ ಮಾಡದಂತೆ ಮುಳ್ಳು ಕಂಟಿ ಹಚ್ಚಿದ್ದರು. ಮಂಗಳವಾರ ಸೇತುವೆ ಮೇಲಿಂದ ನೀರು ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಸ್ಥಗಿತವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

WhatsApp Image 2025 09 30 at 8.24.12 AM
ಬೀದರ್‌ ತಾಲ್ಲೂಕಿನ ಚಿಲ್ಲರ್ಗಿ ಗ್ರಾಮದ ಕೆಲ ಮನೆ ಬಾಗಿಲಿಗೆ ಮಾಂಜ್ರಾ ನದಿ ನೀರು ಹೊಕ್ಕಿರುವುದು

ಬೀದರ್‌ ತಾಲ್ಲೂಕಿನ ಚಿಲ್ಲರ್ಗಿ ಗ್ರಾಮದ ಕೆಲ ಮನೆಗಳಿಗೆ ಪ್ರವಾಹದ ನೀರು ಹೊಕ್ಕಿದ್ದರಿಂದ ದವಸ ಧಾನ್ಯ, ಸಾಮಾಗ್ರಿಗಳು ನೀರುಪಾಲಾಗಿದೆ. ಮಳೆ ನಿಂತರೂ ಪ್ರವಾಹ ತಗ್ಗಿಲ್ಲ, ಪ್ರವಾಹ ಭೀತಿ ಕಾಡುತ್ತಿದೆ ಎಂದು ಹೇಳುತ್ತಿದ್ದಾರೆ.

ಮಾಂಜ್ರಾ ನದಿ ತೀರದ ಗ್ರಾಮಗಳಾದ ಕೌಠಾ(ಬಿ), ಬಾಬಳಿ, ಚಂದಾಪುರ, ಇಸ್ಲಾಂಪುರ, ಬಳತ, ಸಾವಳಿ, ಹುಲಸೂರ ಕೊಂಗಳ, ಲಖನಗಾಂವ, ನಿಟ್ಟೂರ, ನಾಗರಾಳ, ಚಿಮಕೋಡ, ಗಡಿಕುಶನೂರ, ಖಾನಾಪುರ, ಕಂದಗೂಳ ಸೇರಿದಂತೆ ಹಲವು ಗ್ರಾಮಗಳ ಸಾವಿರಾರು ಎಕರೆ ಭೂಮಿ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ಇದನ್ನೂ ಓದಿ : ಬೀದರ್‌ | ವೀರಶೈವ ʼಲಿಂಗಾಯತ ಧರ್ಮʼದ ಒಂದು ಉಪಪಂಗಡ : ಬಸವಲಿಂಗ ಪಟ್ಟದ್ದೇವರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...