ಬೀದರ್‌ | ಸುಳ್ಳು ದಾಖಲೆ ಸೃಷ್ಟಿಸಿ ₹9.25 ಕೋಟಿ ತೆರಿಗೆ ವಂಚಿಸಿದ ವ್ಯಕ್ತಿ ಬಂಧನ : ಯಾಸ್ಮಿನ್ ವಾಲಿಕಾರ

Date:

ಕಳೆದ ನಾಲ್ಕು ವರ್ಷಗಳಿಂದ ₹34 ಕೋಟಿ ವ್ಯವಹಾರ ನಡೆಸಿ ವಿವಿಧ ನಾಲ್ಕು ಸಂಸ್ಥೆಗಳ ಮುಖಾಂತರ ಸುಳ್ಳು ದಾಖಲೆ ಸೃಷ್ಟಿಸಿ, ನಕಲಿ ಬಿಲ್‌ ನೀಡಿ 132 ಜನರಿಗೆ ವಂಚಿಸಿ ಸರ್ಕಾರದ ಬೊಕ್ಕಸಕ್ಕೆ ₹9.25 ಕೋಟಿ ತೆರಿಗೆ ಕಟ್ಟದೆ ವಂಚಿಸಿದ ಆರೋಪದ ಮೇರೆಗೆ ಬೀದರ್‌ ಜಿಲ್ಲೆಯ ನಿವಾಸಿ ರಾಹುಲ ಕಿಶನ ಕುಲಕರ್ಣಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಕಲಬುರಗಿ ಪೂರ್ವ ವಲಯ ವಾಣಿಜ್ಯ ತೆರಿಗೆ (ಜಾರಿ) ಇಲಾಖೆಯ ಜಂಟಿ ಆಯುಕ್ತೆ ಯಾಸ್ಮಿನ್ ಬೇಗಂ ಜಿ ವಾಲಿಕಾರ ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ʼತೆರಿಗೆ ವಂಚನೆ ಮಾಡಿರುವ ರಾಹುಲ್‌ ಎಂಬಾತನನ್ನು ಕಲಬುರಗಿಯ ಪೂರ್ವ ವಲಯದ ಜಾರಿ ವಿಭಾಗದ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಅಧಿಕಾರಿಗಳು ಹಾಗೂ ತೆಲಂಗಾಣ ರಾಜ್ಯದ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ ಸಹಯೋಗದಿಂದ ಹೈದರಾಬಾದ್‌ನಲ್ಲಿ ದಸ್ತಗಿರಿ ಮಾಡಿ ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆʼ ಎಂದು ಮಾಹಿತಿ ನೀಡಿದರು.

ʼಅಪಾದಿತ ತೆರಿಗೆದಾರ ತನ್ನ ಕುಟುಂಬ ಸದಸ್ಯರ ಹಾಗೂ ಸ್ನೇಹಿತರ ಆಧಾರ, ಪ್ಯಾನ್ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಂಡು, ಜಿಎಸ್‌ಟಿ ನೋಂದಣಿಗಳನ್ನು ಪಡೆದು, ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಾ ಸರಕು ಅಥವಾ ಸೇವೆಗಳನ್ನು ಪೂರೈಕೆ ಮಾಡದೇ ನಕಲಿ ಬಿಲ್ಲುಗಳನ್ನು ನೀಡಿ ಆ ಮೂಲಕ ನಕಲಿ ಹೂಡುವಳಿ ತೆರಿಗೆಯ ಕ್ಲೇಮ್ ಮಾಡಲು ಸಹಕರಿಸುತ್ತಿದ್ದನು. ಈ ಪ್ರಕರಣದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿದ್ದು ಇವರಲ್ಲಿ ಬಹುತೇಕ ಲಾಭಾಂಶಿಗಳು ಕಾಮಗಾರಿ ಗುತ್ತಿಗೆದಾರರಾಗಿದ್ದು, ಇವರು ಪಡೆದಿರುವ ನಕಲಿ ಹೂಡುವಳಿ ತೆರಿಗೆಯ ಬಗ್ಗೆ ತನಿಖೆ ಪ್ರಗತಿಯಲ್ಲಿರುತ್ತದೆ. ನಕಲಿ ಹೂಡುವಳಿ ತೆರಿಗೆ ಪಡೆದಿರುವ ಎಲ್ಲಾ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಕಲಿ ಹೂಡುವಳಿ ತೆರಿಗೆ ಕ್ಲೇಮ್ ಮಾಡಿದವರಿಂದ ತೆರಿಗೆಯನ್ನು ಬಡ್ಡಿ ಮತ್ತು ದಂಡದ ಸಮೇತ ವಸೂಲಿ ಮಾಡಲಾಗುವುದು.‌ ಈ ರೀತಿ ಸರ್ಕಾರಕ್ಕೆ ವಂಚಿಸಿದ ಆರೋಪ ಸಾಬೀತಾದರೆ ನ್ಯಾಯಾಲಯವು ಆರೋಪಿಗೆ ಕನಿಷ್ಠ 5 ವರ್ಷ ಜೈಲು ಹಾಗೂ ದಂಡ ವಿಧಿಸುವ ಕಾನೂನು ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದು ಅತಿ ದೊಡ್ಡ ತೆರಿಗೆ ವಂಚನೆ ಪ್ರಕರಣವಾಗಿದೆʼ ಎಂದು ಯಾಸ್ಮಿನ್ ವಾಲಿಕಾರ ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಇಲಾಖೆಯ ಬೀದರ್ ಸಹಾಯಕ ಆಯುಕ್ತ ಪರ್ವತಗೌಡ.ಎಸ್, ಇಲಾಖೆಯ ಅಧಿಕಾರಿಗಳಾದ ಖಾಜಾ ಖಲಿಲೂಲ್ಲಾ, ಶಿವಕುಮಾರ ಸ್ವಾಮಿ, ಅಶೋಕ ಶೆಂಬೆಳ್ಳೆ, ಮಹೇಶಕುಮಾರ ಮಾಶೆಟ್ಟೆ ಮತ್ತಿತರರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...