ಬೀದರ್‌ | ಮಣಿಪುರ ಘಟನೆ; ಆ.7ರಂದು ಪ್ರತಿಭಟನೆಗೆ ಕರೆ

Date:

ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರಜ್ಞಾವಂತ ನಾಗರಿಕರ ವೇದಿಕೆಯಿಂದ ಬೀದರ್‌ನಲ್ಲಿ ಆಗಸ್ಟ್‌ 7ರ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಮಂಗಳವಾರ ವಿವಿಧ ಸಂಘ- ಸಂಸ್ಥೆಗಳ ಪ್ರಮುಖರು, ಸಾಮಾಜಿಕ ಚಿಂತಕರು ಒಗ್ಗೂಡಿ ರೂಪಿಸಿದ ಪ್ರಜ್ಞಾವಂತ ನಾಗರಿಕರ ವೇದಿಕೆಯ ಪೂರ್ವಭಾವಿ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.

“ಮಣಿಪುರ ಹಿಂಸಾಚಾರದಲ್ಲಿ ಸುಮಾರು 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 300ಕ್ಕೂ ಹೆಚ್ಚು ಚರ್ಚುಗಳನ್ನು ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದ 50 ಸಾವಿರಕ್ಕೂ ಅಧಿಕ ಕಟುಂಬಗಳು ಬೀದಿ ಪಾಲಾಗಿವೆ. ಇದಕ್ಕೆಲ್ಲ ಯಾರು ಹೊಣೆಗಾರರು. ಇಬ್ಬರು ಹೆಣ್ಣುಮಕ್ಕಳನ್ನು ನಗ್ನ ಮಾಡಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ” ಎಂದು ಸಂಘಟನಾಕಾರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರ್ಘಟನೆಗೆ ಸಾಕ್ಷಿಯಾದ ಮಣಿಪುರ ರಾಜ್ಯ ಸರ್ಕಾರವನ್ನು ಕಿತ್ತೊಗೆದು ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಸಲ್ಲಿಸಲಾಗುವುದು. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಹಲವು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಸಾಮಾಜಿಕ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮಣಿಪುರ ಸರ್ಕಾರವನ್ನು ವಜಾಗೊಳಿಸಿ: ಸಂಘಟನೆಗಳ ಆಗ್ರಹ

ಸಭೆಯಲ್ಲಿ ಸಂಘ ಸಂಸ್ಥೆಗಳ ಪ್ರಮುಖರುಗಳಾದ ಅಬ್ದುಲ್ ಖದೀರ್, ಅನಿಲ್ ಕುಮಾರ ಬೆಲ್ದಾರ್, ದರ್ಬಾರ್ ಸಿಂಗ್, ಪೂಜ್ಯ ಭಧಂತಿ ಬೋಧಿ ಪ್ರಜ್ಞಾ, ಮಾರುತಿ ಬೌದ್ಧೆ, ಎಸ್‌ ಎಂ ಜನವಾಡಕರ್, ಭಾರತಿ ವಸ್ತ್ರದ, ವಿನೋದ್ ರತ್ನಾಕರ್, ಮಹೇಶ್ ಗೊರನಾಳಕರ್, ಜಗದೀಶ್ವರ ಬಿರಾದಾರ, ಓಂಪ್ರಕಾಶ್ ರೊಟ್ಟೆ, ಸಾವಿತ್ರಿ ಚಿಕ್ಕಮಠ, ನಿಜಾಮೋದ್ದೀನ್, ರಫೀಕ್ ಅಹ್ಮದ್, ಬಸವರಾಜ ಮಾಳಗೆ, ಪ್ರಕಾಶ್ ರಾವಣ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...