ಬೀದರ್‌ | ಬೌದ್ದರ ಧಾರ್ಮಿಕ ಹಕ್ಕಿಗಾಗಿ ಬೃಹತ್ ಪ್ರತಿಭಟನೆ

Date:

ಬೌದ್ದರ ಹಕ್ಕಿಗಾಗಿ ಹಾಗೂ ಬಿ.ಟಿ ಕಾಯ್ದೆ-1949 ಅನ್ನು ರದ್ದುಗೊಳಿಸಿ ಬುದ್ದಗಯಾದ ಮಹಾಬೋಧಿ ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ದರಿಗೆ ನೀಡಲು ದೇಶಾದ್ಯಂತ ಆಲ್ ಇಂಡಿಯಾ ಬುದ್ದಿಷ್ಟ್ ಫೋರಮ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಬೆಂಬಲಿಸಿ ಬೀದರ್‌ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಬೀದರ್ ಬುದ್ದಿಷ್ಟ ವಿಹಾರದ ಸಂಸ್ಥಾಪಕರಾದ ಭಂತೆ ಧಮ್ಮಾನಂದ ಮಹಾಥೆರೊ, ಅಧ್ಯಕ್ಷರಾದ ಭಂತೆ ಜ್ಞಾನ ಸಾಗರ, ಕಾರ್ಯದರ್ಶಿ ಭಂತೆ ಸಂಘರಖ್ಖೀತ, ರೇಕುಳಗಿ ಮೌಂಟ್‌ನ ಭಂತೆ ಧರ್ಮಪಾಲ, ಭಾಲ್ಕಿಯ ಭಂತೆ ನೌಪಾಲ ಹಾಗೂ ಭಿಕ್ಕು ಸಂಘ ಹಾಗೂ ವಿವಿಧ ಬೌದ್ಧ ಸಂಘಟನೆಗಳು, ದಲಿತ ಸಂಘಟನೆಗಳ ಮತ್ತು ಸಂವಿಧಾನ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಜರುಗಿತು.

ನಗರದ ಜನವಾಡ ರಸ್ತೆಯಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಭಗತಸಿಂಗ್ ವೃತ್ತ, ತಹಸೀಲ್ ಕಚೇರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ತಲುಪಿತು. ರಾಜ್ಯದ ಮುಖ್ಯಮಂತ್ರಿ, ಪ್ರಧಾನ ಮಂತ್ರಿ, ರಾಷ್ಟ್ರಪತಿ ಹಾಗೂ ಬುದ್ದಗಯಾ ಬಿಹಾರದಲ್ಲಿರುವ ಕಾರಣ ಬಿಹಾರದ ರಾಜ್ಯಪಾಲ, ಮುಖ್ಯಮಂತ್ರಿಗಳು ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ

ಪ್ರತಿಭಟನೆಯಲ್ಲಿ ಬೌದ್ಧ ಆಚಾರ್ಯ ಮಿಲಿಂದ ಗೂರುಜಿ, ಮುಖಂಡರಾದ ಧರ್ಮರಾಯ ಘಾಂಗ್ರೆ, ರಮೇಶ ಡಾಕುಳಗಿ, ಅನೀಲಕುಮಾರ ಬೆಲ್ದಾರ್, ಬಾಬು ಪಾಸ್ವಾನ್, ರಾಜಕುಮಾರ ಮೂಲಭಾರತಿ,‌ ಶ್ರೀಪತರಾವ ದೀನೆ, ಶಿವಕುಮಾರ ನೀಲಿಕಟ್ಟಿ, ಮಹೇಶ ಗೋರನಾಳಕರ್, ಸುರೇಶ ಜೋಜನಾಕರ್, ಅಂಬಾದಾಸ ಚಕ್ರವರ್ತಿ, ಕಾಶಿನಾಥ ಚೆಲ್ವಾ, ರಾಜಪ್ಪಾ ಗೂನಳ್ಳಿಕರ್, ಬಾಬುರಾವ ಮಿಠಾರೆ, ಚಂದ್ರಕಾಂತ ನಿರಾಟೆ, ಅರುಣ ಪಟೇಲ್, ಅವಿನಾಶ ದಿನೆ, ಭರತ ಕಾಂಬಳೆ, ರಾಜಕುಮಾರ ವಾಘಮಾರೆ, ಸಂದೀಪ ಕಾಂಟೆ, ಪ್ರಕಾಶ ರಾವಣ, ವಿನೋದಕುಮಾರ ಶಾಕ್ಯಪಾಲ್, ಪ್ರದೀಪ ನಾಟೆಕರ್, ಚಂದ್ರಕಲಾ ಬಡಿಗೇರ, ಮಂಜುಳಾ ಭಾವಿದೊಡ್ಡಿ ಪುನಿತಾ ಗಾಯಕವಾಡ, ಗಂಗಮ್ಮ ಫುಲೆ, ಲಕ್ಷ್ಮಿ ಹೊಸಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...