ಬೀದರ್‌ | ಶರಣರ ಪರಿಸರ ಕಾಳಜಿ ಎಲ್ಲರಿಗೂ ಮಾದರಿಯಾಗಲಿ : ಬಸವರಾಜ ಬಲ್ಲೂರ್

Date:

ಬಸವಾದಿ ಶರಣರು ಪರಿಸರ ಕಾಳಜಿ ತೋರಿದ್ದರು. ಪರಿಸರವನ್ನು ತಮ್ಮ ಸ್ವಾರ್ಥಕ್ಕಾಗಿ ಬಲವಂತವಾಗಿ ಬಳಸಲಿಲ್ಲ. ಅದಕ್ಕೆ ಹಾನಿ ಉಂಟು ಮಾಡದಂತೆ ಬದುಕು ಸಾಗಿಸಿದ್ದರು ಎಂದು ಕರ್ನಾಟಕ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರ ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಮಾಸಿಕ ವಚನ ಮಂಟಪ, ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ ಕಾರ್ಯಕ್ರಮದಲ್ಲಿ ‘ಶರಣರ ಪರಿಸರ ಪ್ರೇಮ’ ಕುರಿತು ಅವರು ಮಾತನಾಡಿದರು.

ʼಪರಿಸರ ಪ್ರೀತಿ ಬಾಯಿ ಮಾತಿಗೆ ಸೀಮಿತವಾಗಬಾರದು. ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿಸಬೇಕು.ಪರಿಸರ ಸಂರಕ್ಷಣೆ ಭಾಗವಾಗಿ ಭಾತಂಬ್ರಾದ ಮಠದಲ್ಲಿ ಈವರೆಗೆ 2 ಸಾವಿರ ಸಸಿಗಳನ್ನು ನೆಟ್ಟು ಬೆಳೆಸಲಾಗಿದೆʼ ಎಂದು ಸಾನಿಧ್ಯ ವಹಿಸಿದ್ದ ಬಸವ ಮುಕ್ತಿ ಮಂದಿರದ ಶಿವಯೋಗೀಶ್ವರ ಸ್ವಾಮೀಜಿ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ʼಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಸೆಪೆಂಬರ್‌ ತಿಂಗಳಲ್ಲಿ ರಾಜ್ಯದ್ಯಂತ ಬಸವ ಸಂತತಿ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಪ್ರಯುಕ್ತ ಬಸವ ಸಂಸ್ಕೃತಿಯನ್ನು ಜನ ಮಾನಸಕ್ಕೆ ತಲುಪಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆʼ ಎಂದು ತಿಳಿಸಿದರು.

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಮನದೀಪ್ ಕೌರ್ ಹಾಗೂ ಮನಪ್ರೀತ್‍ಸಿಂಗ್ ದಂಪತಿ, ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿದ್ದಯ್ಯ ಕಾವಡಿ, ಉಪಾಧ್ಯಕ್ಷ ಉದಯಕುಮಾರ ಲದ್ದೆ, ರೋಟರಿ ಕ್ಲಬ್ ಬೀದರ್ ಅಧ್ಯಕ್ಷ ಸೋಮಶೇಖರ ಪಾಟೀಲ, ಜಯದೇವಿತಾಯಿ ಲಿಗಾಡೆ ಪ್ರಶಸ್ತಿ ಪುರಸ್ಕೃತ ಸುವರ್ಣಾ ಚಿಮಕೋಡೆ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಕವಿತಾ ಪ್ರಭಾ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಾಯಕ ಪರಿಸರ ಅಧಿಕಾರಿ ಜಗನ್ನಾಥ ಪರಿಸರ ಸಂರಕ್ಷಣೆ ಪ್ರತಿಜ್ಞೆ ಮಾಡಿಸಿದರು. ಅಶ್ವಿನಿ ರಾಜಕುಮಾರ ವಚನ ಗಾಯನ ನಡೆಸಿಕೊಟ್ಟರು. ಅರಣ್ಯ ಇಲಾಖೆ ಸಹಯೋಗದೊಂದಿಗೆ 250 ಸಸಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು.

ಇದನ್ನೂ ಓದಿ : ಬೀದರ್‌ | ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾರ

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮಿರ್ಚೆ, ಕಾರ್ಯದರ್ಶಿ ಜಯದೇವಿ ಯದಲಾಪುರೆ, ಪ್ರಮುಖರಾದ ಸುವರ್ಣಾ ಧನ್ನೂರ, ರಾಜೇಂದ್ರಕುಮಾರ ಗಂದಗೆ, ಗುಂಡಪ್ಪ ಬಳತೆ, ನಾಗಶೆಟ್ಟೆಪ್ಪ ದಾಡಗಿ, ಮಲ್ಲಿಕಾರ್ಜುನ ಪಂಚಾಕ್ಷರಿ, ವೀರಭದ್ರಪ್ಪ ಬುಯ್ಯಾ, ರಾಜಕುಮಾರ ಹಜ್ಜರಗಿ ಮತ್ತಿತರರು ಇದ್ದರು.
ಯೋಗೇಶ ಶ್ರೀಗಿರಿ ಭಕ್ತಿ ದಾಸೋಹಗೈದರು. ಮಹಾಸಭಾದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೊನ್ನಿಕೇರಿ ಸ್ವಾಗತಿಸಿದರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ಬಸವರಾಜ ಜಕ್ಕಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...