ಬೀದರ್ | ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅಗತ್ಯ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

ಸುದ್ದಿ ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಅತ್ಯಂತ ಮುಖ್ಯವಾಗಿದ್ದು, ಮುದ್ರಣ ಮಾಧ್ಯಮಗಳು ಇಂದಿಗೂ ಆ ವಿಶ್ವಾಸ ಉಳಿಸಿಕೊಂಡಿವೆ. ಅದೇ ರೀತಿ ಪತ್ರಕರ್ತರು, ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು, ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟರು.

ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ, ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.

“ಪ್ರಜಾಪ್ರಭುತ್ವದ ಉಳಿವಿಗೆ ಭದ್ರವಾದ ಬುನಾದಿ ಹಾಕುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂಬುದು ಅತಿಶಯೋಕ್ತಿಯ ಮಾತಲ್ಲ. ಜನಾಭಿಪ್ರಾಯ ರೂಪಿಸುವ ಮಹತ್ವದ ಜವಾಬ್ದಾರಿಯನ್ನು ಮಾಧ್ಯಮಗಳು ಮಾಡುತ್ತಿವೆ. ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುತ್ತಿರುವ ಜನರಿರುವ ಸಮಾಜದಲ್ಲಿ ಮಾಧ್ಯಮಗಳ ಪಾತ್ರ, ಜವಾಬ್ದಾರಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸತ್ಯಾನ್ವೇಷಣೆ ಮಾಡಿ ಜನರ ಮುಂದೆ ಸುದ್ದಿ ತಂದರೆ, ಜನಕ್ಕೆ ಸಮಾಜಕ್ಕೆ ಒಳಿತಾಗುತ್ತದೆ. ಭಾರತೀಯರಲ್ಲಿ ಭಾವನಾತ್ಮಕತೆ ಇದೆ. ಭಾವನಾತ್ಮಕ ವಿಚಾರ ಕೆರಳಿಸಿ ಲಾಭ ಮಾಡುವವರ ಕಾಲ ಇದಾಗಿದ್ದು, ಮಾಧ್ಯಮದವರು ಹೆಚ್ಚು ಜಾಗೃತರಾಗಿರಬೇಕು” ಎಂದರು.

5 ಸಾವಿರ ಕೋಟಿ ರೂ. ಸದ್ಬಳಕೆ

ಗಡಿ ಭಾಗದ ಬೀದರ್ ಜಿಲ್ಲೆಯ ಇಂದಿನ ಯವಜನರು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ. ಉತ್ತಮ ವೈದ್ಯರು, ವಿಜ್ಞಾನಿಗಳು, ಎಂಜಿನಿಯರ್‌ಗಳು, ರಾಜಕಾರಣಿಗಳು, ಶಿಕ್ಷಕರು, ಪತ್ರಕರ್ತರು ಎಲ್ಲರೂ ಇದ್ದಾರೆ. ಹಾಗೆಯೇ ಜಿಲ್ಲೆಯ ತಲಾದಾಯ ಹೆಚ್ಚಳವಾಗಬೇಕು. ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳು ಹೆಚ್ಚಿನ ಪ್ರಗತಿ ಹೊಂದಬೇಕು. ಸರ್ಕಾರ ಈ ಎಲ್ಲದರ ಬಗ್ಗೆ ಗಮನ ಹರಿಸುತ್ತದೆ. ಈ ಬಾರಿ ಬಜೆಟ್‌ನಲ್ಲಿ 3 ಸಾವಿರ ಕೋಟಿ ರೂ. ನೀಡಿದ್ದು, ಹಿಂದಿನ ವರ್ಷ ಖರ್ಚಾಗದೆ ಉಳಿದ 2 ಸಾವಿರ ಕೋಟಿ ರೂ. ಇದೆ. ಕೆಕೆಆರ್‌ಡಿಬಿ ವತಿಯಿಂದ ಕ್ರಿಯಾಯೋಜನೆ ರೂಪಿಸಿ ಮುಂದಿನ ಮಾರ್ಚ್ 31ರೊಳಗೆ ಈ ಹಣದ ಸದ್ಬಳಕೆ ಮಾಡಲಾಗುವುದು” ಎಂದು ಹೇಳಿದರು.

ಪಕ್ಷಾತೀತ ಅಭಿವೃದ್ಧಿ

“ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಬೇಕು. ಬಳಿಕ ಪಕ್ಷಾತೀತವಾಗಿ, ಶಾಸಕರು, ಸಚಿವರು, ಸಂಸದರು ಎಲ್ಲರೂ ಒಟ್ಟಾಗಿ ಜಿಲ್ಲೆಯ ಪ್ರಗತಿಗೆ ಶ್ರಮಿಸಬೇಕು” ಎಂದು ಈಶ್ವರ ಖಂಡ್ರೆ ಕಿವಿಮಾತು ಹೇಳಿದರು.

“371 ಜೆ ಪರಿಣಾಮಕಾರಿಯಾಗಿ ಅನುಷ್ಠಾನ ಆಗಬೇಕಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 30 ಸಾವಿರದಿಂದ 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಕೇವಲ ವಿಶ್ವವಿದ್ಯಾಲಯ ಘೋಷಿಸಿ, 2 ಕೋಟಿ ರೂ. ಅನುದಾನ ನೀಡಿದರೆ ಸಾಕಾಗುವುದಿಲ್ಲ. ಈ ಬಗ್ಗೆ ಶೀಘ್ರವೇ ಪರಿಶೀಲಿಸಲಾಗುವುದು” ಎಂದು ಹೇಳಿದರು.

ಪತ್ರಕರ್ತರಿಗೆ ವಿಮೆ, ಬಸ್ ಪಾಸ್

“ಮಾಧ್ಯಮದ ಮಿತ್ರರಲ್ಲಿ ಶೇ.80ರಷ್ಟು ಮಂದಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಆರೋಗ್ಯ ವಿಮೆ ಇವರಿಗೆ ಅಗತ್ಯವಾಗಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಸೇರ್ಪಡೆ ಮಾಡುವ ಬೇಡಿಕೆ ಮತ್ತು ಪತ್ರಕರ್ತರಿಗೆ ಗ್ರಾಮೀಣ ಸಾರಿಗೆಯಲ್ಲಿ ಪ್ರಯಾಣಿಸಲು ಬಸ್ ಪಾಸ್ ನೀಡುವ ಕುರಿತಂತೆ ಮುಖ್ಯಮಂತ್ರಿಯವರೊಂದಿಗೆ ಮಾತನಾಡಲಾಗುವುದು” ಎಂದು ಭರವಸೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಂಡವಾಳಿಗರ ಕೈಯಲ್ಲಿ ಮಾಧ್ಯಮ; ಪ್ರಜಾಪ್ರಭುತ್ವಕ್ಕೆ ಅಪಾಯ: ಸಚಿವ ಶರಣಪ್ರಕಾಶ ಪಾಟೀಲ್

ಹಿರಿಯ ಪತ್ರಕರ್ತರುಗಳಾದ ತಿ ತಾ ಶರ್ಮಾ, ಮೊಹರೆ ಹಣಮಂತರಾವ್, ಖಾದ್ರಿ ಶಾಮಣ್ಣ, ಶ್ಯಾಮರಾವ್, ಪಾಟೀಲ ಪುಟ್ಟಪ್ಪ ಮತ್ತು ಬೀದರ್ ಜಿಲ್ಲೆಯ ಹಿರಿಯ ಪತ್ರಕರ್ತರಾದ, ಶಿವಶರಣಪ್ಪ ವಾಲಿ, ದಮನ್ ಪಟೇಲ್, ವಿಶ್ವನಾಥ್ ಪಾಟೀಲ್, ಖಾಜಿ ಅರ್ಷದ್ ಅಲಿ ಮೊದಲಾದವರು ಪತ್ರಿಕೋದ್ಯಮಕ್ಕೆ ನೀಡಿರುವ ಕೊಡುಗೆ ಸ್ಮರಿಸಿದ ಸಚಿವರು, ಹಿರಿಯ ಆದರ್ಶ ಪಾಲಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...