ಬೀದರ್‌ | ಅಂಗನವಾಡಿ ಕೇಂದ್ರ ಬಲವರ್ಧನೆಗೆ ʼಮಿಂಚಿನ ಸಂಚಾರʼ ಕಾರ್ಯಕ್ರಮ : ಶ್ರೀಧರ್

Date:

ಅಂಗನವಾಡಿ ಕೇಂದ್ರಗಳನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲೆಯ ಎಲ್ಲ ಮೇಲ್ವಿಚಾರಕರು ಭೇಟಿ ನೀಡಿ ಕೇಂದ್ರಗಳಲ್ಲಿ ಲೋಪದೋಷಗಳನ್ನು ಪಟ್ಟಿ ಮಾಡಿ ಇಲಾಖೆಗೆ ವರದಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಎಂ. ಹೇಳಿದರು.

ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಂಗನವಾಡಿ ಕೇಂದ್ರಗಳ ಪುನಶ್ಚೇತನಗೊಳಿಸುವ ಬಗ್ಗೆ ಔರಾದ್‌ ತಾಲೂಕಿನ ಸಂತಪುರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸಮಾರೋಪಾದಿ ಭೇಟಿ ಹಾಗೂ ಮಿಂಚಿನ ಸಂಚಾರ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

ʼಅಂಗನವಾಡಿ ಕೇಂದ್ರಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವ ಆಹಾರ ಪದಾರ್ಥಗಳು, ಮಕ್ಕಳ ದಾಖಲಾತಿ, ಗರ್ಭಿಣಿಯರ ಮಾಹಿತಿ ಸೇರಿದಂತೆ ನಾನಾ ವರದಿಗಳನ್ನು ಪಡೆದುಕೊಂಡು ಸಿಬ್ಬಂದಿಗಳಿಗೆ ಹೆಚ್ಚಿನ ಸಲಹೆ ಸೂಚನೆಗಳನ್ನು ನೀಡಲು ಈ ಭೇಟಿ ಹಮ್ಮಿಕೊಳ್ಳಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಂತಪುರ ಶಿಶು ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಔರಾದ್- ಕಮಲನಗರ ತಾಲೂಕಿನ 180ಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳಿಗೆ ಅಧಿಕಾರಿಗಳ ತಂಡದವರು ಭೇಟಿ ನೀಡಿ, ಮಿಂಚಿನ ಸಂಚಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮವಾಗಿದೆ. ಈ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ ಯಶಸ್ವಿಗೊಂಡು ರಾಜ್ಯ ವ್ಯಾಪ್ತಿಗೆ ಪ್ರಚಾರವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕುʼ ಎಂದು ಸೂಚನೆ ನೀಡಿದರು.

ʼಅಂಗನವಾಡಿ ಕೇಂದ್ರಗಳಲ್ಲಿ ಪೋಷಣ ಟ್ರ‍್ಯಾಕರ್‌ನ ಬಳಕೆ, ದಾಖಲಾತಿಗಳ ನಿರ್ವಹಣೆ, ಶಾಲಾ ಪೂರ್ವ ಶಿಕ್ಷಣದ ಅನುಷ್ಠಾನ, ಪೂರಕ ಪೌಷ್ಠಿಕ ಆಹಾರ ಸದ್ಬಳಕೆ ಹಾಗೂ ವಿವಿಧ ಯೋಜನೆಯ ಸೌಲಭ್ಯಕ್ಕೆ ಅರ್ಹರಾಗಿರುವವರ ಮನೆ ಭೇಟಿ ಸೇರಿದಂತೆ ಇತರೆ ಯೋಜನೆಗಳು ಅನುಷ್ಠಾನವನ್ನು ಪರಿಶೀಲನೆ ಮಾಡಿ ಸುಧಾರಣೆಗೆ ಸೂಕ್ತ ಸಲಹೆಗಳನ್ನು ನೀಡಿದರು.

ಇದನ್ನೂ ಓದಿ : ಬೀದರ್‌ | ಸೈಬರ್ ವಂಚನೆ : 3 ವರ್ಷದಲ್ಲಿ ₹8.18 ಕೋಟಿ ದೋಖಾ

ಔರಾದ್‌ ತಾಲೂಕು ಸಿಡಿಪಿಒ ಇಮಾಲಪ್ಪ ಡಿಕೆ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರೂಪಾ ಎಸ್. ಕೋಟೆಗೌಡರ್, ಭಾಲ್ಕಿ ಸಿಡಿಪಿಒ ಎಂ.ಡಿ ಅಬ್ದೂಲ್ ಖಲೀಲ್ ಸೇರಿದಂತೆ ಪ್ರಮುಖರಾದ ಗೌತಮ್ ಸಿಂಧೆ, ಶಾರದಾ, ಶಿವಪ್ರಕಾಶ ಹಿರೇಮಠ, ಮಂಜೂರ್ ಖಾನ್ ,ಯೋಗೇಶ್ವರಿ, ರಾಜೇಶ್ರೀ, ಸುರೇಖಾ, ಶೋಭಾ, ವಿಜಯಲಕ್ಷ್ಮಿ, ನಾಗಮ್ಮ, ಆರತಿ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...