ಬೀದರ್ | ಪ್ರೊಜೆಕ್ಟರ್ ಖರೀದಿ ಹೆಸರಲ್ಲಿ ಹಣ ದುರ್ಬಳಕೆ : ಆರೋಪ

Date:

ಔರಾದ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ರಕ್ಷಾಳ(ಕೆ) ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರೊಜೆಕ್ಟರ್ ಅಳವಡಿಸದೆ ಗ್ರಾಮ ಪಂಚಾಯತ್ ಸದಸ್ಯರು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

2024ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಗ್ರಾಮ ಪಂಚಾಯತ್ ಸದಸ್ಯರು ರಕ್ಷಾಳ(ಕೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ₹79,062 ಹಣದಲ್ಲಿ ಪ್ರೊಜೆಕ್ಟರ್ ಖರೀದಿಸಬೇಕೆಂದು ಕ್ರಿಯಾ ಯೋಜನೆ ಸಿದ್ಧಪಡಿಸಿದರು. ಆದರೆ ಶಾಲೆಯಲ್ಲಿ ಮೈಕ್ ಮಾತ್ರ ಅಳವಡಿಸಿದ್ದಾರೆ. ಆದರೆ ಪ್ರೊಜೆಕ್ಟರ್ ಖರೀದಿಸಿಲ್ಲ ಎಂದು ರಕ್ಷಾಳ(ಕೆ) ಗ್ರಾಮದ ಮುಖಂಡ ಬೀರಪ್ಪ ಮೇತ್ರೆ ಆರೋಪಿಸಿದ್ದಾರೆ.

‘ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರೊಜೆಕ್ಟರ್ ಮುಖಾಂತರ ಪರಿಣಾಮಕಾರಿ ಬೋಧನೆಗೆ ಉಪಯುಕ್ತ ಆಗಲೆಂದು ಅನುದಾನ ಮೀಸಲಿಡಲಾಗಿತ್ತು. ಆದರೆ ಸದಸ್ಯರು ಪ್ರೊಜೆಕ್ಟರ್ ಖರೀದಿಸದೆ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಬಿಲ್ ಎತ್ತಿದ್ದಾರೆ’ ಎಂದು ಅವರು ದಾಖಲೆ ಸಮೇತ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004577046

ಈ ಬಗ್ಗೆ ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಕೇಳಿದರೆ, ‘ಗ್ರಾಮ ಪಂಚಾಯತ್ ಇಬ್ಬರು ಸದಸ್ಯರು ತಲಾ ₹40 ಸಾವಿರದಂತೆ ಒಟ್ಟು ₹80 ಸಾವಿರದಲ್ಲಿ ರಕ್ಷಾಳ(ಕೆ) ಶಾಲೆಗೆ ಮೈಕ್ ಹಾಗೂ ಪ್ರೊಜೆಕ್ಟರ್ ನೀಡುವುದಾಗಿ ಅನುದಾನ ಪಡೆದರು. ಶಾಲೆಗೆ ಮೈಕ್ ಖರೀದಿಸಿ ಕೊಟ್ಟಿದ್ದಾರೆ. ಆದರೆ ಪ್ರೊಜೆಕ್ಟರ್ ಖರೀದಿಸಿದ ಪೋಟೋ ಕಳಿಸಿ, ಬಿಲ್ ಪಡೆದಿದ್ದಾರೆ. ಅವರ ನಂಬಿಕೆ ಮೇಲೆ ಬಿಲ್ ನೀಡಿದ್ದೇನೆ. ಈ ಬಗ್ಗೆ ಶಾಲಾ ಶಿಕ್ಷಕರಿಗೆ ಕೇಳಿದರೆ, ಮೈಕ್ ಕೊಟ್ಟಿದ್ದಾರೆ, ಪ್ರೊಜೆಕ್ಟರ್ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು’ ಎಂದು ಬೀರಪ್ಪ ಮೇತ್ರೆ ‘ಈದಿನ’ಕ್ಕೆ ತಿಳಿಸಿದ್ದಾರೆ.

’15ನೇ ಹಣಕಾಸು ಯೋಜನೆಯಡಿ ನಡೆಸಬೇಕಾದ ಕಾಮಗಾರಿ ಹೆಸರಲ್ಲಿ ಹಣ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಗ್ರಾ.ಪಂ. ಪಿಡಿಒ, ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...