ಬೀದರ್ | ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳನ್ನು ನಿರ್ಲಕ್ಷಿಸಬೇಡಿ: ಎಸ್ಪಿ ಪ್ರದೀಪ ಗುಂಟಿ

Date:

ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷಿಸದೆ ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ನಡೆದ ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ರಚಿಸಿರುವ ವಿಶೇಷ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ಅಪಹರಣ, ನಾಪತ್ತೆ, ಸ್ವಯಂ ಪ್ರೇರಿತವಾಗಿ ಹಾಗೂ ಪ್ರೀತಿಸಿ ಮನೆ ಬಿಟ್ಟು ಹೋದ 18 ವರ್ಷದೊಳಗಿನ ಮಕ್ಕಳು ಕಾಣೆಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಮೌಲ್ಯಮಾಪನ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. 2018 ರಿಂದ 2025ರ ಜುಲೈವರೆಗೆ ಬಾಕಿ ಉಳಿದಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಾಣೆಯಾದ ಮಕ್ಕಳ ಪೋಷಕರು, ಸಂಬಂಧಿಕರು ಹಾಗೂ ಸ್ನೇಹಿತರರನ್ನು ಸಂಪರ್ಕಿಸಿ ಮಾಹಿತಿಗಳನ್ನು ಪಡೆದು ಅವರನ್ನು ಟ್ರ‍್ಯಾಕ್ ಮಾಡಬೇಕು. ಮೊಬೈಲ್‌ನಿಂದ ಕೊನೆಯ ಕರೆಯ ಲೊಕೇಶನ್ ಟ್ರ‍್ಯಾಕಿಂಗ್ ನಡೆಸಿ ದೇಶದ ಯಾವುದೇ ಸ್ಥಳದಲ್ಲಿದ್ದರೂ ಕರೆತಂದು ಪೋಷಕರಿಗೆ ಒಪ್ಪಿಸಬೇಕು. ಮಕ್ಕಳ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ 30 ದಿನಗಳಲ್ಲಿ ಪ್ರಕರಣ ಪೂರ್ಣಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ನಿರ್ಲಕ್ಷಿಸಿದರೆ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗುವುದುʼ ಎಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಮಾತನಾಡಿ, ʼಶಾಲಾ-ಕಾಲೇಜು ಓದುತ್ತಿರುವ ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಕಾಣೆಯಾದ ಮಕ್ಕಳ ಸ್ನೇಹಿತರನ್ನು ಭೇಟಿ ಮಾಡಿ ಅವರಿಗೆ ತಿಳಿದಿರುವ ಮಾಹಿತಿಗಳನ್ನು ಪಡೆಯಬೇಕು ಮತ್ತು ಪೋಷಕರಿಂದ ಮೂಲ ಮಾಹಿತಿಗಳನ್ನು ಪಡೆದು ಆದಷ್ಟು ಬೇಗ ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಬೇಕುʼ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಮಾತನಾಡಿ, ʼಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆ, ವೇಶ್ಯವಾಟಿಕೆಯಂತಹ ಸಮಾಜದ ಕೆಟ್ಟ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಂದ ಮಕ್ಕಳನ್ನು ರಕ್ಷಿಸಿ ಅವರ ಬಾಲ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆʼ ಎಂದರು.

ಇದನ್ನೂ ಓದಿ : ಆನೆ ದಾಳಿಗೆ ಇಬ್ಬರ ಸಾವು | ಉನ್ನತಾಧಿಕಾರಿಗಳೊಂದಿಗೆ ಸಭೆ, ಆನೆ ಸೆರೆ ಹಿಡಿಯಲು ಸಚಿವ ಈಶ್ವರ ಖಂಡ್ರೆ ಸೂಚನೆ

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಶಾಲಾ ಶಿಕ್ಷಣ ಉಪ ನಿರ್ದೇಶಕ ಸಲಿಂ ಪಾಷಾ, ಜಿಲ್ಲಾ ಮಕ್ಕಳ ಸಮಿತಿ ಅಧ್ಯಕ್ಷ ಶಿವಪ್ಪ, ಬಾಲ ನ್ಯಾಯಾಲಯ ಸದಸ್ಯೆ ಧನ್ವಂತರಿ ಸೇರಿದಂತೆ ಎನ್‌ಜಿಓಗಳ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಕಾಣೆಯಾದ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...