ಬೀದರ್ | ಕೈಕೊಟ್ಟ ಮುಂಗಾರು ಮಳೆ; ರೈತರಲ್ಲಿ ಆತಂಕ

Date:

ಹವಾಮಾನ ಬದಲಾವಣೆಯಿಂದಾಗಿ ಮಳೆಯ ಕಾಲಮಾನವೇ ಬದಲಾಗಿದೆ. ಜೂನ್ ಅರಂಭದಲ್ಲಿಯೇ ರಾಜ್ಯವನ್ನು ಪ್ರವೇಶಿಸಬೇಕಿದ್ದ ನೈರುತ್ಯ ಮಾರುತಗಳ ಸುಳಿವಿಲ್ಲ. ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸಿದ್ದ ರೈತರು ಕಂಗಾಲಾಗಿದ್ದಾರೆ. ಮುಂಗಾರು ಹಂಗಾಮಿನ ಉದ್ದು, ಹೆಸರು, ಸೋಯಾಬೀನ್, ಹತ್ತಿ ಬಿತ್ತನೆ ಕಾರ್ಯ ನಡೆಯದೇ ಇರುವುದರಿಂದ ರೈತರಲ್ಲಿ ಆತಂಕ ಮೂಡಿದೆ.

ಬೀದರ್ ಜಿಲ್ಲಾದ್ಯಂತ ಜೂನ್ 1 ರಿಂದ 14ರವರೆಗೆ ಕೇವಲ 31-32 ಮೀ.ಮಿ. ಮಳೆಯಾಗಿದೆ. ಇದರಿಂದ ಹೆಸರು, ಉದ್ದು, ತೊಗರಿ ಬಿತ್ತನೆಗೆ ಬಿತ್ತನೆ ಬೀಜ ಖರೀದಿಸಿದ್ದ ರೈತರು, ಬಿತ್ತನೆ ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ. ಇತರ ಬೆಳೆಗಳನ್ನು ಬೆಳೆಯಲು ಚಿಂತಿಸುತ್ತಿದ್ದಾರೆ. ಜೂನ್ ತಿಂಗಳ ಮೊದಲ ವಾರದಲ್ಲಿ ಮಳೆಯಾದರೆ ಮಾತ್ರ ಎಲ್ಲ ಬೆಳೆಗಳು ಹೆಚ್ಚಿನ ಇಳುವರಿ ಬರಲು ಸಾಧ್ಯ, ಬಿತ್ತನೆಗೆ ತಡವಾದರೆ ಬೆಳೆಗಳಲ್ಲಿ ಗುಣಮಟ್ಟ ಕುಸಿಯುತ್ತದೆ ಎಂದು ರೈತರು ಹೇಳಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಒಟ್ಟು ಕೃಷಿ ಭೂಮಿಯ ಅರ್ಧದಷ್ಟು ಭಾಗ ಸೋಯಾಬೀನ್ ಬೆಳೆದರೆ, ಉಳಿದ ಅರ್ಧಭಾಗ ಅನ್ಯ ಬೆಳೆ ಬೆಳೆಯುವ ಗುರಿ ಹೊಂದಿದ್ದಾರೆ.

ಕಳೆದ ವರ್ಷವೂ ಬಿತ್ತನೆ ಕಾರ್ಯಕ್ಕೆ ವಿಳಂಬವಾಗಿತ್ತು. ಈ ಸಲವೂ ಮೃಗಶಿರಾ ಮಳೆ ತಡವಾದ ಕಾರಣಕ್ಕೆ ಭೂಮಿಯಲ್ಲಿ ತೇವಾಂಶ ಇಲ್ಲ. ಎಪ್ರಿಲ್, ಮೇ ತಿಂಗಳಲ್ಲಿ ಆಗಾಗ ಮಳೆಯಾಗಿತ್ತು. ಈಗ ಮಳೆ ಕೈಕೊಟ್ಟಿದೆ. ಉದ್ದು, ಹೆಸರು ಬಿತ್ತನೆ ಮಾಡಿದರೂ ನಿರೀಕ್ಷಿತ ಇಳುವರಿ ಬರುವುದಿಲ್ಲ. ಹವಾಮಾನ ಏರುಪೇರಾದರೂ ಹೊಂದಿಕೊಳ್ಳುವ ಸೋಯಾಬೀನ್ ಬೆಳೆ ಬೆಳೆಯುವುದು ಸೂಕ್ತ. ಹೊಲ ಹದ ಮಾಡಲಾಗಿದೆ, ಬೀಜ ಗೊಬ್ಬರ ದಾಸ್ತಾನು ಖರೀದಿಸಿ ಬಿತ್ತನೆ ಕಾರ್ಯಕ್ಕೆ ಎಲ್ಲಾ ಸಿದ್ಧತೆಗಳು ಮುಗಿದಿವೆ. ಮಳೆಗಾಗಿ ಕಾಯ್ತಾ ಇದ್ದೇವೆ ಎನ್ನುತ್ತಾರೆ ಜನವಾಡ ಗ್ರಾಮದ ರೈತ ಬಸಪ್ಪ ಗುಮ್ಮೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ಕೃಷಿ ಸಂಶೋಧನಾ ಕೇಂದ್ರದ ಹವಾಮಾನ ತಜ್ಞ ಬಸವರಾಜ ಬಿರಾದಾರ ಈದಿನ.ಕಾಮ್ ಜೊತೆ ಮಾತನಾಡಿ, “ಮುಂಗಾರು ಮಳೆ ವಿಳಂಬಕ್ಕೆ ಕಾರಣವಾದ ಸೈಕ್ಲೋನ್ ಜೂನ್ 15 ರಂದು ಅಂತ್ಯವಾಗಿದೆ. ಆದರೂ ಇನ್ನೊಂದು ವಾರ ಮಳೆ ಆಗಲ್ಲ. ಜೂನ್ 21 ನಂತರ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ವಾಡಿಕೆಯಂತೆ ಬಿತ್ತನೆಗೆ 120 ಮಿ.ಮಿ. ಮಳೆಯ ಅಗತ್ಯವಿದೆ. ಆದರೆ 31-32 ಮಿ.ಮಿ. ಮಾತ್ರ ಮಳೆಯಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ಕೃಷಿ ಹೊಂಡಗಳು ನಿರ್ಮಿಸಿಕೊಂಡರೆ ಬಿತ್ತನೆ ಕಾರ್ಯಕ್ಕೆ ಅನುಕೂಲ ಆಗುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...