ಬೀದರ್‌ | ರಿಶೈನ್‌ ಸಂಸ್ಥೆಯ ʼಹಸಿವು ಮುಕ್ತ ಸಮಾಜʼ ಕಾರ್ಯಕ್ಕೆ ಸಂಸದ ಸಾಗರ ಖಂಡ್ರೆ ಶ್ಲಾಘನೀಯ

Date:

ಬಡ, ನಿರ್ಗತಿಕ, ಅನಾಥರಿಗೆ ಅನ್ನ ಹಂಚುವುದು ಸೇರಿದಂತೆ ಅನೇಕ ಮಾನವೀಯ ಕಾರ್ಯಗಳಿಂದ ಬೀದರ್‌ ಜಿಲ್ಲಾದ್ಯಂತ ಹೆಸರುವಾಸಿಯಾಗಿರುವ ರಿಶೈನ್‌ ಆರ್ಗನೈಜೇಶನ್ ತಂಡದ ಸದಸ್ಯರು ಸಂಸದ ಸಾಗರ್ ಖಂಡ್ರೆ ಅವರನ್ನು ಬೀದರ್‌ನ ಅವರ ಕಚೇರಿಯಲ್ಲಿ ಭೇಟಿಯಾಗಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು.

ಜಿಲ್ಲೆಯ ವಿವಿಧ ಸಭೆ, ಸಮಾರಂಭಗಳಲ್ಲಿ ಹೆಚ್ಚುವರಿಯಾದ ಆಹಾರ ವಿತರಣೆ ಕಾರ್ಯವನ್ನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿಸ್ತರಿಸಲು ಅಗತ್ಯವಿರುವ ಬಗ್ಗೆ ಮನವರಿಕೆ ಮಾಡಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಗೆ ಅಗತ್ಯ ಅನುದಾನ ಒದಗಿಸಲು ಹಾಗೂ ಸಿಎಸ್‌ಆರ್ ಉಪಕ್ರಮಗಳ ಸಹಾಯಧನವನ್ನು ಸಂಸ್ಥೆಗೆ ಒದಗಿಸುವ ಕುರಿತು ಸಹಕರಿಸುವಂತೆ ಮನವಿ ಪತ್ರ ಸಲ್ಲಿಸಿದರು.

ಕಳೆದ ಎಂಟು ವರ್ಷಗಳಿಂದ ಬೀದರ್ ಜಿಲ್ಲೆಯ ಹಸಿವು ಮತ್ತು ಅಪೌಷ್ಠಿಕತೆಯ ವಿರುದ್ಧ ಪಣ ತೊಟ್ಟು ಶ್ರಮಿಸುತ್ತಿರುವ ರಿಶೈನ್ ಸಂಸ್ಥೆಯ ಸೇವೆಯನ್ನು ಸಂಸದರು ಮುಕ್ತ ಮನಸ್ಸಿನಿಂದ ಶ್ಲಾಘಿಸಿದರು. ಮದುವೆ, ಹೋಟೆಲ್ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಉಳಿದ ಆಹಾರವನ್ನು ಸಂಗ್ರಹಿಸಿ ಪ್ರತಿದಿನ 1,500ಕ್ಕೂ ಹೆಚ್ಚು ಜನರಿಗೆ ಪೂರೈಕೆ ಮಾಡುವ ರಿಶೈನ್ ಸಂಸ್ಥೆಯ ವಿಶಿಷ್ಟ ಮತ್ತು ಪರಿಣಾಮಕಾರಿ ಮಾದರಿಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಸಿವಿನಿಂದ ಬಳಲುತ್ತಿರುವ ನಿರ್ಗತಿಕ, ಅನಾಥರಿಗೆ, ಕಾರ್ಮಿಕರಿಗೆ ಆಹಾರ ಒದಗಿಸುವ ಈ ಮಾದರಿಯ ಕಾರ್ಯ ನಾನು ಮೆಟ್ರೋ ನಗರಗಳಲ್ಲಿ ನೋಡಿದ್ದೇನೆ. ನಮ್ಮ ಜಿಲ್ಲೆಯಲ್ಲಿ ಅಂತಹದೇ ಒಂದು ವಿಭಿನ್ನ ಕಾರ್ಯವನ್ನು ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಮಾಡುತ್ತಿರುವ ರಿಶೈನ್ ಸಂಸ್ಥೆಯನ್ನು ಕಂಡು ನನಗೆ ಹೆಮ್ಮೆ ಆಗುತ್ತಿದೆ. ಸಂಸ್ಥೆಯ ಉದ್ದೇಶದಂತೆ ಬೀದರ್‌ನ ಪ್ರಮುಖ ಕೈಗಾರಿಕೆಗಳಿಂದ ಸಿಎಸ್‌ಆರ್ ಉಪಕ್ರಮದ ಸಹಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಬೀದರ್ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ ಉಪಸ್ಥಿತರಿದ್ದು, ಸಂಸ್ಥೆಯ ಮಾನವೀಯ ಸೇವೆಯನ್ನು ಶ್ಲಾಘಿಸಿ, ಸಂಸ್ಥೆಗೆ ಅಗತ್ಯವಿರುವ ಸೌಲಭ್ಯ ಕುರಿತು ಸಂಸದರಿಗೆ ತಿಳಿಸಿದರು.‌

ಇದನ್ನೂ ಓದಿ : ಬೀದರ್‌ | ದ.ರಾ.ಬೇಂದ್ರೆ ಸಾಹಿತ್ಯದಲ್ಲಿ ದೇಶಿ ಸೊಗಡು ಅಪಾರ : ಶಿವಾಜಿ ಮೇತ್ರೆ

ರಿಶೈನ್ ಸಂಸ್ಥೆಯ ಸಂಸ್ಥಾಪಕ ರೋಹನ್ ಕುಮಾರ, ಸದಸ್ಯರಾದ ಅಂಬರೀಶ್ ಕೆಂಚಾ, ಕಾರ್ತೀಕ, ಶ್ರೀಧರ ಸೋಮನೋರ್, ಸಿದ್ಧಾರ್ಥ ಮಂತಾಳೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...