ಬೀದರ್ | ನನ್ನ ರಾಜಕೀಯ ಮುಗಿದಿಲ್ಲ, ಹೊಸ ಅಧ್ಯಾಯ ಆರಂಭವಾಗಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Date:

ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ. 91ನೇ ವಯಸ್ಸಿನಲ್ಲೂ ಕೂಡ ನೀವು ಯಾರೂ ಹೆದರಬೇಡಿ ಎಂದು ನಮಗೆ ಧೈರ್ಯ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.

“ಬಂಡೆಪ್ಪ ಅವರದ್ದು ರಾಜಕೀಯ ಮುಗಿತು ಎಂದುಕೊಳ್ಳಬೇಡಿ. ಈಗ ಹೊಸ ಅಧ್ಯಾಯ ಆರಂಭವಾಗಿದೆ. ಜನರಿಗೋಸ್ಕರ ನಾವು ಕೆಲಸ ಮಾಡುತ್ತೇವೆ. ರಾಜಕೀಯ ಉಲ್ಟಾ ಪಲ್ಟಾ ಆಗುತ್ತಿರುತ್ತದೆ. ನಾವೆಲ್ಲರೂ ಸೇರಿ ಜನರಿಗಾಗಿ ಕೆಲಸ ಮಾಡೋಣ” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮದು ರಾಜಕೀಯ ಹಿನ್ನೆಲೆಯ ಕುಟುಂಬವಲ್ಲ. ನಮ್ಮ ತಂದೆಯವರ ಕಾಲದಿಂದಲೂ ದಾನ ಧರ್ಮ ಮಾಡಿಕೊಂಡು ಬಂದಿರುವ ಕುಟುಂಬವಾಗಿದೆ. ಅಂದಿನಿಂದ ಇಲ್ಲಿಯವರೆಗೂ ದಾನ ಧರ್ಮ ಮಾಡಿಕೊಂಡು ಸಾಗುತ್ತಿದ್ದೇವೆ. ಚುನಾವಣೆಗೆ ನಿಲ್ಲಬೇಕು, ಶಾಸಕ ಆಗಬೇಕು ಎಂಬ ಆಸೆಯಂತೂ ಅಂದು ನನಗೆ ಇರಲಿಲ್ಲ. ಜನರ ಪ್ರೀತಿ ವಿಶ್ವಾಸದಿಂದಾಗಿ ರಾಜಕೀಯಕ್ಕೆ ಬಂದಿದ್ದೇನೆ. ಜನರಿಗೆ ಒಳಿತು ಮಾಡುವ ಉದ್ದೇಶದಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಸೋಲು ಗೆಲುವು ಎರಡನ್ನೂ ಕಂಡಿದ್ದೀನಿ. ರಾಜಕೀಯ ನದಿ ಇದ್ದಂತೆ, ಹರಿಯುತ್ತ ಸಾಗುತ್ತಿರುತ್ತದೆ. ನನ್ನ ಐದು ಚುನಾವಣೆಗಿಂತ ಹೆಚ್ಚಿನ ಬೆಂಬಲ ಈ ಚುನಾವಣೆಯಲ್ಲಿ ನನಗೆ ಸಿಕ್ಕಿತ್ತು. ಆದರೂ ಸೋಲಾಗಿದೆ” ಎಂದರು.

“ಈಗ ಚುನಾವಣೆ ಮುಗಿದಿದೆ. ನಾನು ಅಧಿಕಾರದಲ್ಲಿ ಇಲ್ಲದಿದ್ದಾಗಲೂ ಜನರ ಸೇವೆ ಮಾಡಿದ್ದೇನೆ. ಅಧಿಕಾರದಲ್ಲಿ ಇದ್ದಾಗಲೂ ಜನಪರ ಕೆಲಸ ಮಾಡಿದ್ದೇನೆ. ಪಕ್ಷ ಬದಲಾವಣೆ ಮಾಡುವುದಿಲ್ಲ. ಈ ಹಿಂದೆ ಸೋತ ಸಂದರ್ಭದಲ್ಲಿ ಕೂಡ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಿದ್ದೇನೆ. ಈಗಲೂ ಮಾಡುತ್ತೇನೆ” ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಸ್ಥಳೀಯ ಚುನಾವಣೆಗಳಿಗೆ ಸಿದ್ದರಾಗೋಣ:

ಕೆಲವೇ ತಿಂಗಳಲ್ಲಿ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗಳು ನಡೆಯಲಿವೆ. ಜೆಡಿಎಸ್ ಅಧಿಕಾರಕ್ಕೆ ಬರುವಂತೆ ನಾವೆಲ್ಲರೂ ಸೇರಿ ಕೆಲಸ ಮಾಡಬೇಕಾಗಿದೆ. ತಳಮಟ್ಟದಿಂದ ಪಕ್ಷ ಸಂಘಟಿಸುವುದನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಬೇಕಾಗಿದೆ. ಎಲ್ಲರೂ ಒಗ್ಗೂಡಿ ಪಕ್ಷ ಸಂಘಟನೆ, ಬಲವರ್ಧನೆ ಮಾಡೋಣ” ಎಂದು ಬೀದರ್ ದಕ್ಷಿಣ ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ್ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ನಮ್ಮ ಪಕ್ಷದವರಿಂದಲೇ ನಮ್ಮ ತೇಜೋವಧೆಯಾಗುತ್ತಿದೆ; ಡಿವಿಎಸ್‌ ಆಕ್ರೋಶ

ಈ ವೇಳೆ ಜೆಡಿಎಸ್ ಪ್ರಮುಖರಾಗಿರುವ ಮಾರುತಿ ಖಾಶೆಂಪುರ್, ಸಂಜುರೆಡ್ಡಿ ನಿರ್ಣಾ, ವಿಜಯಕುಮಾರ್ ಖಾಶೆಂಪುರ್, ಶಾಂತಲಿಂಗ ಸಾವಳಗಿ, ದೇವೇಂದ್ರ ಸೋನಿ, ರಾಜು ಕಡ್ಯಾಳ, ಸಂತೋಷ ರಾಸೂರು, ಶಿವರಾಜ್ ಹುಲಿ, ಸಜ್ಜದ್ ಸಾಹೇಬ್, ಇಸ್ಮಾಯಿಲ್ ಕಮಠಾಣಾ, ರಾಜಶೇಖರ ಜವಳೆ, ಮನು ನಾಯ್ಕ್, ಪುಂಡಲೀಕ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...