ಬೀದರ್‌ | ʼನನ್ನವ್ವನ ಜನಪದ ಸಿರಿʼ ಕೃತಿ ಬಿಡುಗಡೆ

Date:

ಜನಪದ ಸಂಸ್ಕೃತಿ ಪೋಷಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ʼನನ್ನವ್ವನ ಜನಪದ ಸಿರಿʼ ಕೃತಿ ಮಹತ್ವದ ಪಾತ್ರ ವಹಿಸಲಿದೆ ಎಂದು ಕಲಬುರಗಿಯ ಸಾಹಿತಿ ಡಾ.ಕಾವ್ಯಶ್ರೀ ಮಹಾಗಾಂವಕರ್ ಅಭಿಪ್ರಾಯಪಟ್ಟರು.

ಔರಾದ್ ತಾಲೂಕಿನ ನಾಗೂರ್ (ಬಿ) ಗ್ರಾಮದಲ್ಲಿ ಈಚೆಗೆ ಬಿಡುಗಡೆಯಾದ ‌ʼನನ್ನವ್ವನ ಜನಪದ ಸಿರಿʼ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ʼಆಧುನಿಕತೆ ತಂತ್ರಜ್ಞಾನದ ಪ್ರಸ್ತುತ ಕಾಲದಲ್ಲಿ ಜನಪದ ಸೊಗಡು ತುಂಬಿಕೊಂಡ ಈ ಕೃತಿ ತುಂಬ ವಿಶೇಷವಾಗಿದೆʼ ಎಂದರು.

ʼಈ ಕೃತಿಯಲ್ಲಿ ಬೀದರ್ ಭಾಷೆ ಹಾಗೂ ಹಾಡಿನ ಧಾಟಿಗೆ ಪೂರಕವಾದ ವ್ಯಾಕರಣಾಂಶ ಅನಾವರಣಗೊಳಿಸಿರುವ ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ತನ್ನ ತಾಯಿ ತುಳಸಮ್ಮ ಸಂಗ್ರಾಮ ಸಿಂಧೆ ಅವರಲ್ಲಿನ ಹಾಡುಗಳಿಗೆ ಅಕ್ಷರ ರೂಪ ನೀಡಿರುವುದು ಒಂದು ಸಂಶೋಧನಾ ಕೃತಿಗಿಂತಲೂ ಮಿಗಿಲಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ.ಅಮರವಾಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼನಶಿಸುತ್ತಿರುವ ಜನಪದ ಸಂಸ್ಕೃತಿಯನ್ನು ನಾವುಗಳು ಪೋಷಿಸುವ ಅಗತ್ಯವಿದೆ. ಜನಪದದಲ್ಲಿ ಜೀವನ ಮೌಲ್ಯಗಳು, ನೈತಿಕ ಪಾಠಗಳಿವೆ, ಅವು ಬದುಕಿಗೆ ದಾರಿದೀಪವಾಗುವ ಮಹತ್ವದ ಸಂದೇಶಗಳಿವೆʼ ಎಂದು ನುಡಿದರು.

ʼತುಳಸಮ್ಮ ಸಿಂಧೆ ಅವರಲ್ಲಿನ ನಮ್ಮ ನೆಲಮೂಲ ಸಂಸ್ಕೃತಿ ನಶಿಸದಂತೆ ತನ್ನ ಜನಪದ ತಾಯಿಯನ್ನು ಜೀವಂತವಾಗಿಡುವ ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರ ಕಾರ್ಯ ಅನುಪಮವಾಗಿದೆ. ಯುವ ಸಮೂಹ ಮೊಬೈಲ್‌ಗೆ ಬಲಿಯಾಗದೇ ಇಂತಹ ಕೃತಿಗಳ ಅಧ್ಯಯನ ನಡೆಸಬೇಕು ಮತ್ತು ಗ್ರಾಮೀಣ ಪ್ರದೇಶದಲ್ಲಿನ ಅನೇಕ ತಾಯಿಯಂದಿರಲ್ಲಿನ ಜನಪದ ಹಾಡುಗಳ ಸಂಗ್ರಹಕ್ಕೆ ಮುಂದಾಗಬೇಕುʼ ಎಂದು ಸಲಹೆ ನೀಡಿದರು.

ಹಿರಿಯ ಸಾಹಿತಿ ಹಂಸಕವಿ ಅವರು ನಾಗೂರ್ (ಬಿ) ಗ್ರಾಮದ ಹಿನ್ನೆಲೆ, ವಿಶೇಷತೆ ಮತ್ತು ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರ ಕುರಿತು ಪರಿಚಯ ಮಾಡಿಕೊಟ್ಟರು.

ಇದೇ ಸಂದರ್ಭದಲ್ಲಿ ಜನಪದ ಹಾಡುಗಾರ್ತಿ ತುಳಸಮ್ಮ ಸಿಂಧೆ ಹಾಗೂ ಸಂಪಾದಕಿ ಶಾಂತಮ್ಮ ಬಲ್ಲೂರ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಗ್ರಾಮಸ್ಥರು, ಸಾಹಿತ್ಯಾಸಕ್ತರಿಂದ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ ಜಿಲ್ಲಾಡಳಿತ ಭವನ ನಿರ್ಮಾಣ : ಜಿಲ್ಲಾ ಕಚೇರಿಗಳ ಸ್ಥಳಾಂತರ : ಡಿಸಿ ಶಿಲ್ಪಾ ಶರ್ಮಾ

ಸಮಾರಂಭದಲ್ಲಿ ಶಿಕ್ಷಕರಾದ ಕಲ್ಲಪ್ಪ ಪಾಂಚಾಳ ಹಾಗೂ ಸವಿತಾ ಕರಸೋನೆ ಅವರ ಮಾರ್ಗದರ್ಶನದಲ್ಲಿ ಜ್ಞಾನಭಾರತಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಸಾಹಿತಿ ಚೆನ್ನಮ್ಮ ವಲ್ಲಾಪೂರೆ, ಸ್ಯಾಮಸನ್ ಬಲ್ಲೂರ, ಗುರುನಾಥ ದೇಶಮುಖ, ಪ್ರಕಾಶ ದೇಶಮುಖ, ಬಸವರಾಜ ಮಸ್ಕಲೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...