‌ಬೀದರ್ | ಯಾವ ಹುದ್ದೆಗೂ ಸಲ್ಲಿಕೆಯಾಗದ ನಾಮಪತ್ರ : ಪತ್ರಕರ್ತರ ಸಂಘಕ್ಕೆ ಪುನಃ ಚುನಾವಣೆ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಬೀದರ್‌ ಜಿಲ್ಲಾ ಘಟಕದ 2025-28ನೇ ಅವಧಿಯ ಕಾರ್ಯಕಾರಿ ಸಮಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕಡೆ ದಿನವಾದ ಅಕ್ಟೋಬರ್‌ 27ರಂದು ಯಾವುದೇ ಸ್ಥಾನಕ್ಕೆ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿರುವುದಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ನಿಯಮಾನುಸಾರ ಚುನಾವಣೆ ಅಧಿಸೂಚನೆ ಹೊರಡಿಸುವ ಮೂಲಕ ಚುನಾಯಿತ ಕಾರ್ಯಕಾರಿ ಸಮಿತಿಯನ್ನು ನೆಲೆಗೊಳಿಸುವ ಪ್ರಕ್ರಿಯೆ ನಡೆಯಲಿದೆ’ ಎಂದು ಸಂಘದ ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ ಎಸ್‌. ಶೆಂಬೆಳ್ಳಿ ತಿಳಿಸಿದರು.

ಬೀದರ್ ನಗರದ ವಾರ್ತಾ ಇಲಾಖೆ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼಸಂಘದ ಅರ್ಹ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ಇರುವುದರಿಂದ ಜಿಲ್ಲಾ ಘಟಕದ ಆಯ್ಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎನ್‌. ರವಿಕುಮಾರ ಅವರು ಆದೇಶ ಹೊರಡಿಸಿದ್ದಾರೆʼ ಎಂದು ಹೇಳಿದರು.

ʼಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ್ ಜಿಲ್ಲಾ ಘಟಕಕ್ಕೆ ಚುನಾವಣಾ ಪ್ರಕ್ರಿಯೆ ಹೊರತಾದ ಯಾವುದೇ ವ್ಯವಸ್ಥೆಯಡಿ ಅಧ್ಯಕ್ಷ ಸ್ಥಾನವನ್ನು ಒಳಗೊಂಡಂತೆ ಇತರೆ ಯಾವುದೇ ಪದಾಧಿಕಾರಿಗಳ ಸ್ಥಾನಕ್ಕೆ ಯಾರನ್ನೂ ನಾಮ ನಿರ್ದೇಶನ/ನೇರ ನೇಮಕಾತಿ ನಡೆದಿರುವುದಿಲ್ಲʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗಳು ಪ್ರಜಾಪ್ರಭುತ್ವದ ಜೀವಾಳ. ಚುನಾವಣೆಗಳನ್ನು ‘ಪ್ರಜಾಪ್ರಭುತ್ವದ ಹಬ್ಬ’ ಎಂದೇ ವ್ಯಾಖ್ಯಾನಿಸಲಾಗುತ್ತದೆ. ಇಂತಹ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಗೊಳಿಸುವಲ್ಲಿ ಕಾರ್ಯನಿರತ ಪತ್ರಕರ್ತರ ಸಹಭಾಗಿತ್ವ ಮತ್ತು ಬೆಂಬಲ ಅಗತ್ಯ. ಚುನಾವಣಾ ನಿಯಮಗಳಿಗೆ ಅನುಗುಣವಾಗಿ ಚುನಾವಣೆ ನಡೆಸಲು ಚುನಾವಣಾ ಸಮಿತಿ ಬದ್ಧವಾಗಿದೆʼ ಎಂದು ವಿವರಿಸಿದರು.

ʼಸಂಘದ ಬೀದರ್‌ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಒಟ್ಟು 25 ಹುದ್ದೆಗಳ ಚುನಾವಣೆಗೆ ಅಕ್ಟೋಬರ್‌ 13ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅ. 19ರಿಂದ ಅ. 27ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ, ಯಾವುದೇ ಹುದ್ದೆಗೂ ನಾಮಪತ್ರ ಸಲ್ಲಿಕೆಯಾಗಿಲ್ಲ. ಚುನಾವಣಾ ಕಣದಲ್ಲಿ ಯಾರೂ ಇಲ್ಲʼ ಎಂದರು.

ʼಇಡೀ ಚುನಾವಣಾ ಪ್ರಕ್ರಿಯೆ ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಕಾನೂನುಬದ್ಧವಾಗಿ ನಡೆದಿದೆ. ಎಲ್ಲ ಸದಸ್ಯರ ಸಹಕಾರದಿಂದ ಇದು ಸಾಧ್ಯವಾಗಿದ್ದು, ಚುನಾವಣಾಧಿಕಾರಿ ಕಚೇರಿ ಎಲ್ಲರಿಗೂ ಕೃತಜ್ಞವಾಗಿದೆ. ಮುಖ್ಯ ಚುನಾವಣಾಧಿಕಾರಿ ಸೂಚನೆ, ನಿರ್ದೇಶನದ ಪ್ರಕಾರ, ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಕೆಲಸ ನಿರ್ವಹಿಸಲಿದೆʼ ಎಂದು ಹೇಳಿದರು.

ಗೌರವ ಧನ ಸ್ವೀಕರಿಸದಿರಲು ನಿರ್ಧಾರ :

‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡ ಜಿಲ್ಲಾ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಹಾಗೂ ಸಹಾಯಕ ಸಿಬ್ಬಂದಿಗೆ ನೀಡಲಾಗುವ ಗೌರವ ಧನ ಸ್ವೀಕರಿಸದಿರಲು ಸಂಘದ ಬೀದರ್‌ ಜಿಲ್ಲಾ ಘಟಕದ ಎಲ್ಲಾ ಚುನಾವಣಾಧಿಕಾರಿಗಳು, ಸಿಬ್ಬಂದಿ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ ಎಸ್‌. ಶೆಂಬೆಳ್ಳಿ ತಿಳಿಸಿದರು.

ʼಚುನಾವಣಾ ಕೆಲಸಕ್ಕೆ ಕೊಡಲಾಗುವ ಗೌರವ ಧನದ ಹಣವನ್ನು ಕೆಯುಡಬ್ಲ್ಯೂ ಏಳಿಗೆ, ಬೆಳವಣಿಗೆಗೆ ಬಳಸಿಕೊಳ್ಳಬೇಕು. ಈ ಸಂಬಂಧ ಮುಖ್ಯ ಚುನಾವಣಾಧಿಕಾರಿ ಎನ್‌. ರವಿಕುಮಾರ್‌ ಅವರಿಗೆ ಕೋರಿಕೆಯ ಪತ್ರ ಸಲ್ಲಿಸಲಾಗುತ್ತದೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಶಾಲಾ ಅವ್ಯವಸ್ಥೆ ಸುಧಾರಣೆಗೆ ಮನೆ-ಮನೆಗೆ ಭಿಕ್ಷೆ ಬೇಡಿದ ಕೆಆರ್‌ಎಸ್ ಕಾರ್ಯಕರ್ತರು

ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರೂ ಆದ ನೋಡಲ್‌ ಅಧಿಕಾರಿ ಮಂಜುನಾಥ ಸುಳ್ಳೋಳಿ, ಕಾರ್ಮಿಕ ಇಲಾಖೆಯ ಅಧಿಕಾರಿ, ನೋಡಲ್‌ ಅಧಿಕಾರಿ ಮಹೇಶ ಕುಲ್ಲೋಳಿ, ಸಹಾಯಕ ಚುನಾವಣಾಧಿಕಾರಿ/ಸಿಬ್ಬಂದಿ ಸೋಮನಾಥ ಬಿರಾದಾರ, ಬಾಲಾಜಿ ಕುಂಬಾರ, ಚಿತ್ರಸೇನ್‌ ವ್ಹಿ. ಫುಲೆ, ಲೋಕೇಶ ವಿ. ಬಿರಾದಾರ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...