ಬೀದರ್‌ | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಅಧಿಸೂಚನೆ ಪ್ರಕಟ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ ಜಿಲ್ಲಾ ಘಟಕದ ಜಿಲ್ಲಾ ಚುನಾವಣಾ ಅಧಿಕಾರಿ ಕಚೇರಿಯನ್ನು ಬೀದರ ನಗರದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯ ಕಚೇರಿಯ ಮೊದಲ ಮಹಡಿಯಲ್ಲಿ ಅಕ್ಟೋಬರ್ 13ರಂದು ಚಾಲನೆ ನೀಡಲಾಗಿದೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಧಿಸೂಚನೆ ಹಾಗೂ ಸದಸ್ಯರ ಪಟ್ಟಿಯನ್ನು ಪ್ರಕಟಿಸಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ಕೊಡಲಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ ಎಸ್ ಶೆಂಬೆಳ್ಳಿ, ನೋಡಲ್ ಅಧಿಕಾರಿಗಳಾದ ಮಹೇಶ ಕುಲಳ್ಳಿ, ವಿಜಯಕೃಷ್ಣ, ಸಹಾಯಕ ಚುನಾವಣಾಧಿಕಾರಿಗಳಾದ ಮಹಾರುದ್ರ ಡಾಕುಳಗಿ, ಸತ್ಯಜೀತ ಇವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅಧಿಸೂಚನೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ ಎಸ್. ಶೆಂಬೆಳ್ಳಿ ಮಾತನಾಡಿ, ʼ ಬರುವ ಅ.13 ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಅ.16 ರಂದು ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅ.18ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ, ಅ.19ರಂದು ನಾಮಪತ್ರ ಸಲ್ಲಿಕೆ ಆರಂಭ, ಅ. 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಅ.28 ರಂದು ನಾಮಪತ್ರಗಳ ಪರಿಶೀಲನೆ, ಅ.30 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಅಂದೇ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದುʼ ಎಂದು ವಿವರಿಸಿದರು.

WhatsApp Image 2025 10 13 at 5.51.39 PM

ನವೆಂಬರ್‌ 9ರಂದು ಭಾನುವಾರ ಬೆ. 9ರಿಂದ ಮಧ್ಯಾಹ್ನ 3ರ ವರೆಗೆ ಅಗತ್ಯ ಬಿದ್ದಲ್ಲಿ ಮತದಾನ, ಅಂದೇ ಮಧ್ಯಾಹ್ನ 3.30 ರ ನಂತರ ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟಣೆ ಮಾಡಲಾಗುವುದು ಎಂದು ಹೇಳಿದರು.

ಅ. 20 ರಿಂದ 22ರ ವರೆಗೆ ದೀಪಾವಳಿ ಹಬ್ಬದ ಪ್ರಯುಕ್ತ ರಜೆಯಿದ್ದು, ಪ್ರತಿದಿನ ಬೆ. 11 ರಿಂದ ಮ. 3ರವರೆಗೆ ಚುನಾವಣಾ ಕಚೇರಿ ತೆರೆದಿರುತ್ತದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದಾದರೂ ಮಾಹಿತಿ ಬೇಕಿದ್ದಲ್ಲಿ ನೇರವಾಗಿ ಕಚೇರಿಗೆ ಬಂದು ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಕನ್ನಡ ಕಾವ್ಯ ಕ್ಷೇತ್ರಕ್ಕೆ ಹೊಸ ಹೊಳಪು ತಂದುಕೊಟ್ಟ ಬೇಂದ್ರೆ : ಅನಂತ ಕೃಷ್ಣ ದೇಶಪಾಂಡೆ

ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆ ಎಲ್ಲರೂ ಸಹಕಾರ ಕೊಡಬೇಕು. ಯಾರೂ ಕೂಡ ಅಶಿಸ್ತಿನಿಂದ ವರ್ತಿಸಬಾರದು. ಪಾರದರ್ಶಕ, ಕಾನೂನು ಬದ್ಧವಾಗಿ ಇಡೀ ಚುನಾವಣೆ ನಡೆಯಲಿದೆ. ಇಡೀ ಚುನಾವಣೆ ಪ್ರಕ್ರಿಯೆಯ ವಿಡಿಯೋ ಚಿತ್ರಿಕರಣ ನಡೆಯಲಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...