ಬೀದರ್ | ಆಪರೇಷನ್ ಸಿಂಧೂರ: ಭಾರತದತ್ತ ಕೆಟ್ಟದೃಷ್ಟಿ ಬೀರುವವರಿಗೆ ಎಚ್ಚರಿಕೆ; ಸಚಿವ ಈಶ್ವರ ಖಂಡ್ರೆ

Date:

ಪಾಕಿಸ್ತಾನ ನೆಲದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಯಶಸ್ವಿಯಾಗಿ ನಿರ್ದಿಷ್ಟ ಗುರಿ ದಾಳಿ ನಡೆಸಿರುವ ವಾಯುಪಡೆ ಸೇರಿದಂತೆ ಭಾರತೀಯ ಸೇನಾ, ನೌಕಾಪಡೆಗಳಿಗೆ ಅರಣ್ಯ, ಜೀವಿಶಾಸ್ತ್ರ ತತ್ವಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ.

ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಧ್ಯರಾತ್ರಿ ಕಾರ್ಯಾಚರಣೆ ಮಾಡಿ 9 ಭಯೋತ್ಪಾದಕ ತಾಣಗಳನ್ನು ನೆಲಸಮ ಮಾಡುವಲ್ಲಿ ಅಪರಿಮಿತ ದಕ್ಷತೆ, ಸಾಮರ್ಥ್ಯ ಮೆರೆದಿರುವ ಭಾರತೀಯ ಸೇನೆ ದೇಶದ ಜನರ ವಿಶ್ವಾಸವನ್ನು ನೂರ್ಮಡಿ ಮಾಡಿದೆ. ಮೂರೂ ಪಡೆಗಳಿಗೆ ಸಂಪೂರ್ಣ ಬೆಂಬಲ ಮತ್ತು ಕಾರ್ಯತಂತ್ರ ರೂಪಿಸಿದ ತಜ್ಞರಿಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಕೇವಲ ಪಾಕಿಸ್ತಾನಕ್ಕೆ ಮಾತ್ರವಲ್ಲ, ಭಾರತದತ್ತ ಕೆಟ್ಟದೃಷ್ಟಿಬೀರುವ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ. ದೇಶದ, ಅಖಂಡತೆ, ಸಾರ್ವಭೌಮತ್ವಕ್ಕೆ ಧಕ್ಕೆಯಾದಾಗ, ಭಾರತೀಯ ಮುಗ್ಧ ಪ್ರಜೆಗಳಿಗೆ ಹಾನಿಯಾದಾಗ ಭಾರತ ತಕ್ಕ ಉತ್ತರ ನೀಡುತ್ತದೆ ಎಂಬುದನ್ನು ಇದು ಮತ್ತೊಮ್ಮೆ ಸಾಬೀತು ಮಾಡಿದೆ. ಈ ಸಂದರ್ಭದಲ್ಲಿ ಭಾರತೀಯರೆಲ್ಲರೂ ನಮ್ಮ ಪಡೆಗಳೊಂದಿಗೆ ನಿಲ್ಲುತ್ತಾರೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...