ಬೀದರ್‌ | ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಜಪ್ತಿ; 8 ಆರೋಪಿಗಳ ಬಂಧನ

Date:

ಅನುಮತಿ ಪಡೆಯದೆ ತಂಬಾಕು ವಸ್ತುಗಳ ಕಲಬೆರಕೆ ಮಾಡಿ ತಯಾರಿಸಿ ಸಂಗ್ರಹಿಸಿಟ್ಟಿದ್ದ ₹1.94 ಕೋಟಿಗೂ ಅಧಿಕ ಮೌಲ್ಯದ ಗುಟ್ಕಾ, ಪಾನ್‌ ಮಸಾಲ ಹಾಗೂ ₹25 ಲಕ್ಷ ಮೌಲ್ಯದ ಒಂದು ವಾಹನವನ್ನು ಜಪ್ತಿ ಮಾಡಿ 8 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹೇಳಿದರು.

ಬೀದರ್‌ ನಗರದ ಗಾಂಧಿ ಗಂಜ ಹಾಗೂ ನೂತನ ನಗರ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತೇಕ ಕಡೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿತರಿಂದ ಗುಟ್ಕಾ, ಪಾನ್‌ ಮಸಾಲ ಮತ್ತು ಒಂದು ಐಚರ್‌ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಭಾನುವಾರ ಸುದ್ದುಗೋಷ್ಠಿಯಲ್ಲಿ ಅವರು ವಿವರಿಸಿದರು.

ಎಲ್ಲಿ, ಏನೇನು ಜಪ್ತಿ ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ನಗರದ ಚಿದ್ರಿಯ ಬುತ್ತಿ ಬಸವಣ್ಣ ದೇವಸ್ಥಾನ ಸಮೀಪದ ಮನೆಯೊಂದರಲ್ಲಿ ಅಕ್ರಮವಾಗಿ ತಂಬಾಕು ವಸ್ತುಗಳ ಕಲಬೆರಕೆ ಗುಟಕಾ ಸಾಮಗ್ರಿ, ಪಾನ್ ಮಸಾಲಾ ಸಂಗ್ರಹಿಸಿಟ್ಟು, ಲಾರಿಯೊಂದರಲ್ಲಿ ತುಂಬುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ₹1.51 ಕೋಟಿ ಮೌಲ್ಯದ ಪಾನ್‌ ಮಸಾಲ, ತಂಬಾಕು ವಸ್ತು ಹಾಗೂ ಗುಟಕಾ ತಯಾರಿಸುವ ವಿವಿಧ ಸಾಮಾಗ್ರಿ ಮತ್ತು ₹25 ಲಕ್ಷ ಮೌಲ್ಯ ಒಂದು ಲಾರಿ ಸೇರಿ ಒಟ್ಟು ₹1.76 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಗಾಂಧಿ ಗಂಜ ಠಾಣೆಯ ಪೊಲೀಸರು ಜಪ್ತಿ ಮಾಡಿದ್ದಾರೆ.

WhatsApp Image 2025 08 31 at 2.14.17 PM 1

ನೂತನ ನಗರ ಠಾಣೆ ವ್ಯಾಪ್ತಿಯ ಬೀದರ್‌ ಹೊರವಲಯದ ಕೋಳಾರ ಕೈಗಾರಿಕಾ ಪ್ರದೇಶದಲ್ಲಿ ಶೆಡ್‌ವೊಂದರಲ್ಲಿ ಸರ್ಕಾರದ ಅನುಮತಿ ಪಡೆಯದೆ ಮಾನವ ಆರೋಗ್ಯಕ್ಕೆ ಹಾನಿಕಾರವಾದ ಪಾನ್ ಮಸಾಲ, ಕೆಮಿಕಲ್ ಹಾಗೂ ಕಚ್ಚಾ ವಸ್ತು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಒಟ್ಟು ₹43.30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಗಂಜ ಹಾಗೂ ನೂತನ ನಗರ ಪೊಲೀಸ್‌ ಠಾಣೆಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ : ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿ | ₹100 ಕೋಟಿ ವಿಶೇಷ ಪರಿಹಾರ ಕೊಡಿ : ಸಿಎಂಗೆ ಈಶ್ವರ ಖಂಡ್ರೆ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...