ಬೀದರ್‌ | ದೇಶದಲ್ಲಿ ದಲಿತರ ರಾಜಕೀಯ ಸ್ಥಿತಿಗತಿ ಚಿಂತಾಜನಕ: ವೈಜಿನಾಥ ಸೂರ್ಯವಂಶಿ

Date:

ದೇಶದಲ್ಲಿ ದಲಿತರ ರಾಜಕೀಯ ಸ್ಥಿತಿಗತಿ ಚಿಂತಾಜನಕವಾಗಿದೆ. ಅದರಲ್ಲೂ ಯುವಜನರು ರಾಜಕೀಯ ಪಕ್ಷಗಳ ಆಳುಗಳಾಗಿ ದುಡಿಯುತ್ತಿದ್ದಾರೆ. ಯುವಜನರ ಎಚ್ಚೆತ್ತುಕೊಂಡು ಸಮಾಜದ ಬದಲಾವಣೆಗೆ ಮುಂದಾಗಿ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹಿರಿಯ ದಲಿತ ಹೋರಾಟಗಾರ ವೈಜಿನಾಥ ಸೂರ್ಯವಂಶಿ ಕರೆ ನೀಡಿದರು.

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ‌ ದಲಿತ್ ಯುನಿಟಿ ಮೂವ್‌ಮೆಂಟ್‌ ರಾಜ್ಯ ಸಮಿತಿಯಿಂದ ಮಹಾಡ್ ಚೌಡಾರ್ ಕೆರೆ ಪ್ರವೇಶ ಚಳುವಳಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಪನ್ಯಾಸಕ ಅನಿಲ್ ಟೆಂಗಳಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, “ಭಾರತದಲ್ಲಿ ಅಸ್ಪೃಶ್ಯರಿಗೆ ನೀರು ಕುಡಿಯಲು ಅವಕಾಶ ಇರದೇ ಇರುವ ಜಾತಿವ್ಯವಸ್ಥೆ ‌ಸಮಾಜದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರು ಕುಡಿಯುವ ನೀರಿಗಾಗಿ ಹೋರಾಟ ನಡೆಸಿ ದಲಿತರಿಗೆ ನೀರು ಕುಡಿಯಲು ಅವಕಾಶ ಕಲ್ಪಿಸಿದರು. ಆ ದಿನವೇ ಮಹಾಡ್ ಚೌಡಾರ್ ಪ್ರವೇಶ ಚಳವಳಿ ದಿನವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಅನೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿ ಉಳಿದಿದೆ. ದಲಿತ ಎಂಬ ಕಾರಣಕ್ಕೆ ದೇಶಾದ್ಯಂತ ಅಸ್ಪೃಶ್ಯ ಸಮಾಜದವರ ಮೇಲೆ ನಿರಂತರವಾಗಿ ದಬ್ಬಾಳಿಕೆ, ದೌರ್ಜನ್ಯ, ಕೊಲೆ ನಡೆಯುತ್ತಿರುವುದು ಜಾತಿವ್ಯವಸ್ಥೆ ಜೀವಂತಿಕೆಗೆ ಸಾಕ್ಷಿಯಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ದಲಿತ್ ಯುನಿಟಿ ಮೂವ್‌ಮೆಂಟ್ ಸಂಘಟನಾ ಸಂಸ್ಥಾಪಕ ವಿನೋದ್ ರತ್ನಾಕರ ಮಾತನಾಡಿ, “ಸರ್ಕಾರದ ಆಸ್ತಿಯಾದ ಊರಿನ ಕೆರೆಯ ನೀರು ಸಾರ್ವಜನಿಕರು ಮುಕ್ತವಾಗಿ ಬಳಸಬಹುದಿತ್ತು. ಆದರೆ, ಮನುಸ್ಮೃತಿ ಆರಾಧಕರು ಅಸ್ಪೃಶ್ಯರಿಗೆ ಬಳಸಲು ಅವಕಾಶ ಕೊಡಲಿಲ್ಲ. ದಲಿತರಿಗೆ ಕೆರೆ ನೀರು ಬಳಕೆಗೆ ಅವಕಾಶ ನೀಡಬೇಕೆಂಬ ಉದ್ದೇಶದಿಂದ ಅಂಬೇಡ್ಕರರು ಮಹಾಡ್ ಸತ್ಯಾಗ್ರಹ ಮಾಡಬೇಕಾಗಿ ಬಂತು” ಎಂದರು.

ರಾಜ್ಯಾಧ್ಯಕ್ಷ ಪ್ರಕಾಶ್ ರಾವಣ ಮಾತನಾಡಿ, “ಸರ್ಕಾರದ ಆಸ್ತಿಯಾದ ನೈಸರ್ಗಿಕ ಸಂಪನ್ಮೂಲ, ಶಿಕ್ಷಣ, ಆರೋಗ್ಯ ಮತ್ತು ರಾಜಕೀಯ ಪ್ರಾತಿನಿಧ್ಯ ಸಾರ್ವಜನಿಕರಿಗೆ ಮುಕ್ತವಾಗಿ ದಕ್ಕುತ್ತಿಲ್ಲ. ಇದಕ್ಕಾಗಿಯೇ ನಾವು ಮತ್ತೊಂದು ಸತ್ಯಾಗ್ರಹ ಮಾಡಬೇಕಾದ ಅವಶ್ಯಕತೆ ಇದೆ” ಎಂದು ಹೇಳಿದರು.

“ಸ್ವತಂತ್ರ ಪೂರ್ವದಿಂದಲೂ ದಲಿತರ ಮೇಲೆ ನಿರಂತರ ಶೋಷಣೆ ನಡೆಯುತ್ತಿದೆ. ಅದು ಸ್ವಾತಂತ್ರ್ಯ ನಂತರವೂ ಮುಂದುವರೆದಿದೆ. ಎಸ್‌ಸಿ/ಎಸ್‌ಟಿ, ಒಬಿಸಿ ಸಮಾಜದ ಉನ್ನತಿಗಾಗಿ ಶ್ರಮಿಸಲು ಸಂಘಟನಾತ್ಮಕ ಹೋರಾಟ ಅನಿವಾರ್ಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸಾರ್ವಜನಿಕರು ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ 

ರಾಜ್ಯ ಸಂಘಟನಾ ಸಂಚಾಲಕ ಗೌತಮ್ ದೊಡ್ಡಿ, ಕಾರ್ಯಕ್ರಮದ ಅಧಯಕ್ಷತೆ ವಹಿಸಿದ್ದ ಶಿವಪುತ್ರ ಸೋನಿ, ಸಂಘಟನೆಯ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...