ಬೀದರ್ | ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ; ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ

Date:

ದೇಶಕ್ಕೆ ಪದಕ ತಂದುಕೊಟ್ಟ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿ ಆತನನ್ನು ಶಿಕ್ಷಿಸಬೇಕೆಂದು ಪ್ರಜಾ ಪ್ರಭುತ್ವ ಸಮಿತಿ ಒತ್ತಾಯಿಸಿದೆ.

ಬ್ರಿಜ್ ಭೂಷಣ ಶರಣ್ ಸಿಂಗ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಜಾ ಪ್ರಭುತ್ವ ಸಮಿತಿ ಸಂಸ್ಥಾಪಕ ಅಧ್ಯಕ್ಷ ಗಗನ್ ಫುಲೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಭಾಲ್ಕಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಪ್ರಜಾ ಪ್ರಭುತ್ವ ಸಮಿತಿಯ ಗಗನ್ ಫುಲೆ ಮಾತನಾಡಿ, “ಭಾರತಕ್ಕೆ ಒಲಂಪಿಕ್ಸ್, ಏಷಿಯನ್ ಗೇಮ್ಸ್, ಕಾಮವೆಲ್ತ್‌ ಗೇಮ್ಸ್‌ ಸೇರಿದಂತೆ ಹಲವಾರು ರಾಷ್ಟ್ರಿಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ತಂದುಕೊಟ್ಟ ಕ್ರೀಡಾಪಟುಗಳಲ್ಲಿ ಕುಸ್ತಿಪಟುಗಳು ಮುಂಚೂಣಿಯಲ್ಲಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ವಿಷಯ. ಆದರೆ, ಅದೇ ಮಹಿಳಾ ಕುಸ್ತಿಪಟುಗಳು ನ್ಯಾಯಕ್ಕಾಗಿ ಕಳೆದ ನಾಲ್ಕೈದು ತಿಂಗಳಿಂದ ದೆಹಲಿಯ ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ದುರಂತವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಿಳಾ ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ರೈತ ಸಂಘ ಪ್ರತಿಭಟನೆ

“ಡಬ್ಲೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಎನ್ನುವ ವ್ಯಕ್ತಿ ತಮ್ಮ ಮೇಲೆ ಲೈಂಗಿಕ ಶೋಷಣೆ, ದಬ್ಬಾಳಿಕೆ, ಬಲವಂತ ಸ್ಪರ್ಶ ಹೀಗೆಯೇ ಹಲವಾರು ರೀತಿಯ ಕಿರುಕುಳ ನೀಡಿದ್ದಾನೆಂದು ಕುಸ್ತಿಪಟುಗಳು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ದೌರ್ಜನ್ಯದ ವಿರುದ್ಧ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಎನ್ನುವವನ ಮೇಲೆ ಹಲವಾರು ಪ್ರಕರಣಗಳು ದಾಖಲಾದರೂ ಕೂಡ ಅವನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೇ ಆತನ ಬೆನ್ನಿಗೆ ನಿಂತು ರಕ್ಷಿಸುತ್ತಿರುವುದು ಮೆಲ್ನೋಟಕ್ಕೆ ಕಾಣುತ್ತಿದೆ. ಕುಸ್ತಿಪಟುಗಳು ಪದಕ ಗೆದ್ದು ಬಂದಾಗ ಶ್ಲಾಘಿಸಿದ ಸರ್ಕಾರ ಅದೇ ಕುಸ್ತಿಪಟುಗಳಿಗೆ ಅನ್ಯಾಯವಾದಾಗ ಅವರ ಜೊತೆ ನಿಲ್ಲದೆ ಇರುವುದು ದೇಶಕ್ಕೆ ಮಾಡಿದ ಅವಮಾನವಾಗಿದೆ. ಬ್ರಿಜ್ ಭೂಷಣ ಶರಣ್ ಸಿಂಗ್ ಎನ್ನುವವನನ್ನು ಕೂಡಲೇ ಬಂಧಿಸಿ ತೀವ್ರ ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಜಾಪ್ರಭುತ್ವ ಸಮಿತಿಯ ಶಿವಕುಮಾರ್ ಜಾಧವ್, ಜೈಪ್ರಕಾಶ್ ಸಿಂಧೆ, ಶ್ಯಾಮಶುಂದರ್ ಗುಲಾಬೆ, ಸತೀಶ್ ಫುಲೆ, ಚಿತ್ರಶೇನ್ ಫುಲೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...